Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ

Bengaluru City

ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ

Public TV
Last updated: June 4, 2025 11:38 pm
Public TV
Share
3 Min Read
bjp leaders visits hospitals
SHARE

– ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದ ಕೇಸರಿ ಪಡೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತದಿಂದ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ಜನರನ್ನು ಭೇಟಿಯಾಗಿ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿದರು.

ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಂಸದರಾದ ಪಿ.ಸಿ.ಮೋಹನ್‌, ಡಾ. ಕೆ.ಸುಧಾಕರ್‌ ಆಸ್ಪತ್ರೆಗೆ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಸರ್ಕಾರದ ವಿರುದ್ಧ ಹರಿಹಾಯ್ದರು. ಇವರಿಗೂ ಮೊದಲು ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಭೇಟಿ ನೀಡಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ, 11 ಮಂದಿ ಸಾವು – ಮೃತರು ಯಾರು? ಇಲ್ಲಿದೆ ವಿವರ

bengaluru stambede rcb

ಬಸವರಾಜ್‌ ಬೊಮ್ಮಾಯಿ ಮಾತನಾಡಿ, 11 ಜನ ಸಾವನ್ನಪ್ಪಿರೋದು ದುಃಖದ ಸಂಗತಿ. ಕರ್ನಾಟಕದ ನಾಗರಿಕರಿಗೆ ಕೋಪ ಬಂದಿದೆ. ವಿಜಯೋತ್ಸವ ನಿಯಂತ್ರಣ ಮಾಡಲಿಕ್ಕೆ ಆಗಲಿಲ್ಲ ಅಂದರೆ, ಇಡೀ ಕರ್ನಾಟಕ ಜನರ ರಕ್ಷಣೆ ಮಾಡ್ತೀರಾ? ಇದು ಅನಿರೀಕ್ಷಿತ ಅಲ್ಲ, ಯಾಕಂದ್ರೆ ನೀವು ಪ್ಲಾನಿಂಗ್ ಮಾಡಿಲ್ಲ.‌ ಒಂದೇ ಒಂದು‌ ಸಭೆ ಮಾಡಿಲ್ಲ. ಯಾವ ಪ್ಲಾನಿಂಗ್ ಮಾಡಿಲ್ಲ.‌ ಒಟ್ಟಾರೆ ಬೇಜವಾಬ್ದಾರಿ ಇದು. ಈ ಕೊಲೆಗೆ ಸರ್ಕಾರ ನೇರ ಕಾರಣ. ಸಿಎಂ, ಕೆಸಿಎ ಅಂತಾರೆ. ಆದರೆ ಸೆಕ್ಯುರಿಟಿ ಯಾರು‌ ಕೊಡಬೇಕು? ಹಿರಿಯ ಪೊಲೀಸ್ ಅಧಿಕಾರಿಗಳು ಸುಮ್ಮನೆ ಇದ್ರು. ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ. ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಫಂಕ್ಷನ್ ಮಾಡದೇ, ರೋಡ್ ಶೋ ಮಾಡಬೇಕಿತ್ತು. ಪುನೀತ್ ರಾಜ್‍ಕುಮಾರ್ ಅವರ ನಿಧನದ ವೇಳೆ, ಹಳೆ ವಿಚಾರದ ಬಗ್ಗೆ ಯೋಚನೆ ಮಾಡಿ, 25 ಲಕ್ಷ ಜನ ಸೇರುವ ನಿರೀಕ್ಷೆ ಇತ್ತು. ಆಗ ನಾವು ಪ್ಲಾನಿಂಗ್‌ ಮಾಡಿದ್ವಿ. ಗೃಹ ಸಚಿವರ ಪಾತ್ರ ಕಾಣಿಸ್ತಾ ಇಲ್ಲ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ‌ ಚೇಲಗಳೇ ತುಂಬಿ ಹೋಗಿದ್ರು. ನಾಚಿಕೆ ಮರ್ಯಾದೆ ಇದ್ದರೆ ಸಂಬಂಧಪಟ್ಟವರು ರಾಜೀನಾಮೆ ನೀಡಬೇಕು. ತನಿಖೆ ಘಟನೆಯ ಬಗ್ಗೆ ಆಗಬಾರದು, ಪೂರ್ವಯೋಜನೆ ವಿಫಲತೆ ಬಗ್ಗೆ ಆಗಬೇಕು. ಎಲ್ಲಿ ಹಿರಿಯ ಅಧಿಕಾರಿಗಳು ವೈಫಲ್ಯ ಆಗಿದ್ದಾರೆ, ಯಾವ ರಾಜಕಾರಣಿ ಪಾತ್ರ ಇದೆ ಅಂತ ತಿಳಿಯಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

stampede in bengaluru rcb fans

ಬೆಂಗಳೂರಿನಲ್ಲಿ ಹಬ್ಬದ ವಾತಾವರಣ ಹೋಗಿ, ಸೂತಕದ ವಾತಾವರಣ ಆಗಿದೆ. ಇದು ನಮಗೆ ತುಂಬಾ ದುಃಖ ತಂದಿದೆ. ಗಾಯಾಳುಗಳನ್ನು, ಮೃತರ ಸಂಬಂಧಿಕರನ್ನು ನಾವು ಮಾತಾಡಿಸಿದ್ದೇವೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಬಾರದು. ಚೆನೈ, ಮುಂಬೈ, ಎಲ್ಲಾ ಕಡೆ ಗೆದ್ದ ಸಂಭ್ರಮ ಮಾಡಿದ್ದಾರೆ, ಎಲ್ಲೂ ಹೀಗಾಗಿಲ್ಲ. ದುರಾಡಳಿ ಸರ್ಕಾರದಿಂದ ನಮ್ಮಲ್ಲಿ ಈ ದುರಂತ ನಡೆದಿದೆ. ಸಮಯೋಚಿತ ನಿರ್ಧಾರ ಮಾಡದೇ, ಅತ್ಯಂತ ಬೇಜವಬ್ದಾರಿಯಿಂದ ಸರ್ಕಾರ ನಡೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಮೃತರ ತಂದೆ-ತಾಯಿಗೆ ಶೋಕ ಜೀವನಪರ್ಯಂತ ಇರುತ್ತದೆ. ಸರ್ಕಾರ ವ್ಯವಸ್ಥೆ ಮಾಡಬೇಕಿತ್ತು. ಗೆದ್ದ ವಾತಾವರಣ ಅಲ್ಲಿಗಿಂತ ಇಲ್ಲಿ ಹೆಚ್ಚಿತ್ತು. ದೀಪಾವಳಿ ರೀತಿಯಲ್ಲಿ ಆಚರಿಸಲಾಗಿತ್ತು. ಈ ವಿಚಾರ ತಿಳಿದು ಬಂದೋಬಸ್ತ್ ಮಾಡಬೇಕಿತ್ತು. ಇಂಟಲಿಜೆನ್ಸ್ ಏನು ಮಾಡ್ತಾ ಇತ್ತು? ಸರ್ಕಾರದ ನಡೆ ಎಲ್ಲಾ ಗೊಂದಲಮಯವಾಗಿತ್ತು. ಕಾರ್ಯಕ್ರಮ ಚೇಂಜ್ ಆಗ್ತಾನೆ ಇತ್ತು. ಜನರ ರಕ್ಷಣೆ ಮಾಡುವ ಬದಲು ಈ ರೀತಿ ಬೇಜವಬ್ದಾರಿತನ ಮಾಡಿದೆ. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಅಂತ ಸಂಬಂಧಿಕರು ಆರೋಪ ಮಾಡ್ತಿದ್ದಾರೆ. ರೈತರು ನೂರು ಜನ ಹೋರಾಟ ಮಾಡಲು, ಬಂದರೆ ನೂರಾರು ಪೊಲೀಸ್ ಹಾಕಿ ಭದ್ರತೆ ಕೊಡೋ ಸರ್ಕಾರ, ಈಗ್ಯಾಕೆ‌ ಭದ್ರತೆ ಕೊಡಲಿಲ್ಲ? ಸರ್ಕಾರ ತಪ್ಪಿತಸ್ಥ ಸ್ಥಾನದಲ್ಲಿದೆ. ಈ ಘಟನೆಯ ಸೂಕ್ತ ತನಿಖೆ ಆಗಬೇಕು. ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ತನಿಖೆ ಆಗಬೇಕು. ಇದು ಸಾಮಾನ್ಯ ವಿಚಾರ ಅಲ್ಲ ಎಂದು ಮಾತನಾಡಿದರು. ಇದನ್ನೂ ಓದಿ: ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

TAGGED:bengaluruBengaluru StampedeBJP LeadersIPL 2025RCB Celebration
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
12 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
14 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
52 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
54 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?