Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

Public TV
Last updated: May 29, 2025 6:32 pm
Public TV
Share
3 Min Read
RCB 2 1
SHARE

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ (IPL 2025) ಇನ್ನೇನು ಕೊನೆಯ ಹಂತ ತಲುಪಿದೆ. ಲೀಗ್‌ ಸುತ್ತಿನ ಎಲ್ಲಾ ಪಂದ್ಯಗಳು ಮುಕ್ತಾಯಗೊಂಡಿದ್ದು,‌ ಇಂದು ಮೊದಲ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಸೆಣಸಲು ಸಜ್ಜಾಗಿವೆ.

RCB 3

11 ವರ್ಷಗಳ ಬಳಿಕ ಪ್ಲೇ ಆಫ್‌ ಪ್ರವೇಶಿಸಿರುವ ಪಂಜಾಬ್‌ ಕಿಂಗ್ಸ್‌ ಈ ಬಾರಿ ಶ್ರೇಯಸ್‌ ಅಯ್ಯರ್‌ (Shreyas Iyer) ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿಯುವ ತವಕದಲ್ಲಿದೆ. 2011ರಲ್ಲಿ ಮೊದಲ ಬಾರಿಗೆ ಜಾರ್ಜ್ ಬೈಲಿ ನಾಯಕತ್ವದಲ್ಲಿ ಫೈನಲ್‌ ಪ್ರವೇಶಿಸಿದ್ದ ಪಂಜಾಬ್‌ ತಂಡ ಕೆಕೆಆರ್‌ ವಿರುದ್ಧ 3 ವಿಕೆಟ್‌ಗಳ ವಿರೋಚಿತ ಸೋಲು ಕಂಡಿತ್ತು. ಇನ್ನೂ ಐಪಿಎಲ್‌ನ ಜನಪ್ರಿಯ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ ಮೂರು ಬಾರಿ ಫೈನಲ್‌ ಪ್ರವೇಶಿಸಿಯೂ ಸೋಲು ಕಂಡಿತ್ತು. ಈ ಸಲ 10ನೇ ಬಾರಿಗೆ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದ್ದು, 18ನೇ ಆವೃತ್ತಿಯಲ್ಲಾದರೂ ಟ್ರೋಫಿ ಗೆಲ್ಲುವ ಕನಸು ನನಸು ಮಾಡಿಕೊಳ್ಳುತ್ತಾ ಅನ್ನೋದನ್ನು ಕಾದುನೋಡಬೇಕಿದೆ. ಹಾಗಾದ್ರೆ ಮೂರು ಬಾರಿ ಫೈನಲ್‌ನಲ್ಲಿ ಆರ್‌ಸಿಬಿ ಹೋರಾಟ ಹೇಗಿತ್ತು ಅನ್ನೋದನ್ನ ತಿಳಿಯಬೇಕಿದ್ರೆ ಮುಂದೆ ಓದಿ… ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

RCB 2

ಫೈನಲ್‌ನಲ್ಲಿ ವಿರೋಚಿತ ಸೋಲು
2009ರ ಆವೃತ್ತಿಯಲ್ಲೂ 8 ತಂಡಗಳು ಭಾಗವಹಿಸಿದ್ದವು. 2ನೇ ಆವೃತ್ತಿಯಲ್ಲಿ ಆರ್‌ಸಿಬಿ ಪುಟಿದೆದ್ದಿತ್ತು. 14 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿ 16 ಅಂಕ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿತ್ತು. ಆಗ ಎಲಿಮಿನೇಟರ್ ಪಂದ್ಯ ಇರಲಿಲ್ಲ, 2 ಸೆಮಿಫೈನಲ್ ಪಂದ್ಯಗಳು ಮಾತ್ರ ಇದ್ದವು. ಮೊದಲ ಸೆಮಿಫೈನಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಇಂದಿನ ಡೆಲ್ಲಿ ಕ್ಯಾಪಿಟಲ್ಸ್), ಹೈದರಾಬಾದ್ ಡೆಕ್ಕನ್ ಚಾರ್ಜಸ್ ಕಾದಾಟ ನಡೆಸಿದ್ರೆ, 2ನೇ ಸೆಮಿಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಿತ್ತು. ಈ ವೇಳೆ ಸೆಮಿಸ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ಫೈನಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 6 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಟ್ರೋಫಿ ಗೆಲ್ಲುವ ಕನಸೂ ಕಮರಿತ್ತು. ಇದನ್ನೂ ಓದಿ: ಆರ್‌ಸಿಬಿ ಕ್ವಾಲಿಫೈಯರ್‌ 1 ಎಂಟ್ರಿಗೆ ಕೊಡುಗೆ ನೀಡಿದ ಕೊಹ್ಲಿಗೆ ದಿನೇಶ್‌ ಕಾರ್ತಿಕ್‌ ವಿಶೇಷ ಗೌರವ

CSK vs RCB 2

ಚೆನ್ನೈ ವಿರುದ್ಧ ಎರಡೆರಡುಬಾರಿ ಸೋಲು
2011ರ ಆವೃತ್ತಿ ಆರ್‌ಸಿಬಿ ಪಾಲಿಗೆ ಅತ್ಯಂತ ರೋಚಕ ಘಟ್ಟ. ಲೀಗ್ ಸುತ್ತಿನಲ್ಲಿ 14ರಲ್ಲಿ 9 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸಿತ್ತು. ಈ ವೇಳೆಗೆ ಪ್ಲೇ ಆಫ್ ಸ್ವರೂಪ ಸಂಪೂರ್ಣ ಬದಲಾಗಿತ್ತು. ಮೊದಲ ಸೆಮಿಫೈನಲ್‌ನಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಆರ್‌ಸಿಬಿಗೆ ಮತ್ತೊಂದು ಅವಕಾಶ ಸಿಕ್ಕಿತ್ತು. ಆಗ 2ನೇ ಕಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಕಂಡಿದ್ದ ಆರ್‌ಸಿಬಿ ಪುನಃ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್‌ಗಳಿಂದ ಸೋಲು ಕಂಡಿತ್ತು. ಆಗ ಚೆನ್ನೈ ಸೂಪರ್ ಕಿಂಗ್ಸ್ ಸತತ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಇದನ್ನೂ ಓದಿ: 9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

SRH 1

8 ರನ್‌ಗಳಿಂದ ಕೈತಪ್ಪಿದ ಟ್ರೋಫಿ 
2016 ಐಪಿಎಲ್ ಆವೃತ್ತಿ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಫೈನಲ್ ತಲುಪಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. ಆದ್ರೆ ಚೇಸಿಂಗ್ ಮಾಡಿದ್ದ ಆರ್‌ಸಿಬಿ ಕ್ರಿಸ್‌ಗೇಲ್ ಮತ್ತು ಕಿಂಗ್ ಕೊಹ್ಲಿ ಆರ್ಭಟದ ಹೊರತಾಗಿ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತು. ಆಗ ಸನ್ ರೈಸರ್ಸ್ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

18ನೇ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದಲ್ಲಿ 9 ಪಂದ್ಯ ಗೆದ್ದಿರುವ ಆರ್‌ಸಿಬಿ ಟ್ರೋಫಿ ಎತ್ತಿ ಹಿಡಿಯಲೇಬೇಕೆಂದು ಪಣ ತೊಟ್ಟಿದೆ. ಇದನ್ನೂ ಓದಿ: ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

TAGGED:IPL 2025Punjab KingsRajat patidarrcbShreyas Iyervirat kohliಆರ್‍ಸಿಬಿಐಪಿಎಲ್‌ 2025ಪಂಜಾಬ್ ಕಿಂಗ್ಸ್ರಜತ್ ಪಾಟಿದಾರ್ವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

You Might Also Like

kadamba naval base compensation
Latest

ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷದ ನಂತರ ಸಿಕ್ತು ಪರಿಹಾರ

Public TV
By Public TV
2 hours ago
kinnigoli mukhaprana
Dakshina Kannada

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Public TV
By Public TV
3 hours ago
Hot Air Balloon Horror In Brazil
Latest

21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಬಲೂನ್‌ನಲ್ಲಿ ಬೆಂಕಿ ಅವಘಡ; 8 ಮಂದಿ ದುರ್ಮರಣ

Public TV
By Public TV
3 hours ago
Siddaramaiah 8
Districts

ರೈತರ ಸಾಲ ಮನ್ನಾದ 300 ಕೋಟಿ ಬಾಕಿ ತೀರಿಸುತ್ತೇವೆ: ಸಿದ್ದರಾಮಯ್ಯ

Public TV
By Public TV
3 hours ago
women murder
Chamarajanagar

ಹೊಳೆ ದಡದಲ್ಲಿ ಮಹಿಳೆ ಶವ ಹೂತಿಟ್ಟಿದ್ದ ಕೇಸ್‌ಗೆ ಟ್ವಿಸ್ಟ್; ಲವ್ವಿಡವ್ವಿ ಅಂತಾ ಹೋಗಿದ್ದವನಿಂದಲೇ ಹತ್ಯೆ

Public TV
By Public TV
4 hours ago
MANGO 3
Bengaluru City

2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?