ಅಹಮದಾಬಾದ್: ಪಂಜಾಬ್ (Punjab Kings) ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಅವರಿಗೆ ಎಚ್ಚರಿಕೆ ನೀಡದ್ದಕ್ಕೆ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸುನಿಲ್ ಗವಾಸ್ಕರ್ (Sunil Gavaskar) ಅವರು ಅಂಪೈರ್ಗಳನ್ನು ಟೀಕಿಸಿದ್ದಾರೆ.
ವಿರಾಟ್ ಕೊಹ್ಲಿ ಹೆಚ್ಚು ಬೌಂಡರಿ, ಸಿಕ್ಸ್ ಹೊಡೆಯಲು ಹೋಗದೇ ವಿಕೆಟ್ ಉಳಿಸುವ ಮೂಲಕ ಸಿಂಗಲ್, ಡಬಲ್ ರನ್ ಓಡುತ್ತಿದ್ದರು. 12ನೇ ಓವರ್ನಲ್ಲಿ ಚಹಲ್ ಎಸೆದ ಎಸೆತವನ್ನು ಕೊಹ್ಲಿ ಲಾಂಗ್ ಅನ್ ಕಡೆಗೆ ತಳ್ಳಿದರು. ಕೊಹ್ಲಿ ಮತ್ತು ಲಿವಿಂಗ್ಸ್ಟೋನ್ ಎರಡು ರನ್ ಓಡಿದರು. ರನ್ ಓಡುವಾಗ ಕೊಹ್ಲಿ ಪಿಚ್ ಮೇಲೆ ನೇರವಾಗಿ ಓಡಿದ್ದರು.
ಈ ವಿಚಾರವನ್ನು ಪ್ರಸ್ತಾಪ ಮಾಡಿದ ಗವಸ್ಕಾರ್, ಕೊಹ್ಲಿ ವಿಕೆಟ್ಗಳ ಮಧ್ಯೆ ವೇಗವಾಗಿ ಓಡುತ್ತಾರೆ. ಚೆಂಡನ್ನು ಹೊಡೆದ ತಕ್ಷಣವೇ ಇದರಲ್ಲಿ 2 ರನ್ ಬರುತ್ತದೆ ಎನ್ನುವುದು ಅವರಿಗೆ ತಿಳಿದಿತ್ತು ಎಂದು ಹೇಳಿದರು. ಮತ್ತೆ ತಮ್ಮ ವಿವರಣೆಯನ್ನು ಮುಂದುವರಿಸಿ, ಯಾವೊಬ್ಬ ಅಂಪೈರ್ ಕೊಹ್ಲಿಗೆ ಏನು ಹೇಳುವುದಿಲ್ಲ. ಅವರು ಮತ್ತೆ ಪಿಚ್ ಮೇಲೆ ನೇರವಾಗಿ ಓಡುತ್ತಿದ್ದಾರೆ. ಪಂಜಾಬ್ ಕಿಂಗ್ಸ್ ಮತ್ತೆ ಬ್ಯಾಟಿಂಗ್ ಮಾಡಬೇಕಿದೆ ಎಂದು ಎಂದು ಹೇಳುವ ಮೂಲಕ ಎಚ್ಚರಿಕೆ ನೀಡದ ಅಂಪೈರ್ಗಳನ್ನು ಟೀಕಿಸಿದರು. ಇದನ್ನೂ ಓದಿ: IPL Champions | ಟ್ರೋಫಿ ಗೆದ್ದ ಬೆನ್ನಲ್ಲೇ ಐಪಿಎಲ್ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದೇನು?
ಕ್ರಿಕೆಟ್ನಲ್ಲಿ ರನ್ ಓಡುವಾಗ ಬ್ಯಾಟರ್ಗಳು ಪಿಚ್ ಮೇಲೆ ಓಡುವಂತಿಲ್ಲ. ಪಿಚ್ ಮೇಲೆ ಓಡಿದ್ದರೆ ಅದು ಹಾಳಾಗಿ ಬೌಲಿಂಗ್ಗೆ ಸಮಸ್ಯೆ ಆಗುತ್ತದೆ. ಒಂದು ವೇಳೆ ಬ್ಯಾಟರ್ಗಳು ಪಿಚ್ ಮೇಲೆ ಓಡಿದ್ದರೆ ಅಂಪೈರ್ಗಳು ಎಚ್ಚರಿಕೆ ನೀಡುತ್ತಾರೆ. ಇದನ್ನೂ ಓದಿ: UnSold ಪ್ಲೇಯರ್, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್ಸಿಬಿಯ ಯಶಸ್ವಿ ನಾಯಕ
ಫೈನಲ್ ಪಂದ್ಯದಲ್ಲಿ ಕೊಹ್ಲಿ 43 ರನ್(35 ಎಸೆತ, 3 ಬೌಂಡರಿ) ಹೊಡೆದಿದ್ದರು. ಈ ಟೂರ್ನಿಯಲ್ಲಿ ಕೊಹ್ಲಿ 15 ಪಂದ್ಯಗಳಿಂದ 657 ರನ್ ಹೊಡೆಯುವ ಮೂಲಕ ಅತಿ ಹೆಚ್ಚು ರನ್ ಹೊಡೆದ ಬ್ಯಾಟರ್ಗಳ ಪೈಕಿ 3ನೇ ಸ್ಥಾನ ಪಡೆದಿದ್ದು ಒಟ್ಟು 8 ಅರ್ಧಶತಕ ಹೊಡೆದಿದ್ದಾರೆ.
2008 ರಿಂದ ಆರ್ಸಿಬಿ ತಂಡದಲ್ಲೇ ಆಡುತ್ತಿರುವ ಕೊಹ್ಲಿ 267 ಪಂದ್ಯಗಳಿಂದ 8,661 ರನ್ ಹೊಡೆದಿದ್ದಾರೆ. 8 ಶತಕ, 63 ಬಾರಿ ಅರ್ಧಶತಕ ಬಾರಿಸಿದ್ದಾರೆ.