Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ

Cricket

ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ

Public TV
Last updated: April 8, 2025 1:12 am
Public TV
Share
3 Min Read
MI vs RCB
SHARE

ಮುಂಬೈ: ಮುಂಬೈ ಭದ್ರಕೋಟೆ ವಾಂಖೆಡೆ ಕ್ರೀಡ ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಜಿದ್ದಾ ಜಿದ್ದಿ ಕಣದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 12 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ 10 ವರ್ಷಗಳ ಬಳಿಕ ಗೆಲುವು ಸಾಧಿಸಿದ್ದು, ಮುಂಬೈನ ಭದ್ರ ಕೋಟೆಯನ್ನ ಛಿದ್ರಗೊಳಿಸಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಂದು ನಡೆದ ಪಂದ್ಯವು ಕೊನೆಯವರೆಗೂ ರೋಚಕವಾಗಿತ್ತು. ಕ್ಷಣಕ್ಷಣಕ್ಕೂ ಅಭಿಮಾನಿಗಳ ಎದೆಬಡಿತ ಹೆಚ್ಚಿಸುತ್ತಲೇ ಇತ್ತು. ಅತ್ತ ಉತ್ಸಾಹ ಕಳೆದುಕೊಳ್ಳದ ಉಭಯ ತಂಡಗಳ ಅಭಿಮಾನಿಗಳು ತಮ್ಮಿಷ್ಟದ ಆಟಗಾರರನ್ನ ಊರಿದುಂಬಿಸಿ ಘೋಷಣೆ ಕೂಗುತ್ತಲೇ ಇದ್ದರು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 5 ವಿಕೆಟ್‌ ನಷ್ಟಕ್ಕೆ 221 ರನ್‌ ಬಾರಿಸಿತ್ತು. 222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

IPL2

ಕೊನೇ ಓವರ್‌ ಥ್ರಿಲ್ಲರ್‌
ಕೊನೇ ಓವರ್‌ನಲ್ಲಿ ಮುಂಬೈ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಕೃನಾಲ್‌ ಪಾಂಡ್ಯ ಬೌಲಿಂಗ್‌ನಲ್ಲಿದ್ದರೆ, ಮಿಚೆಲ್‌ ಸ್ಯಾಂಟ್ನರ್‌ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತದಲ್ಲೇ ಸ್ಯಾಂಟ್ನರ್‌ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಬೌಂಡರಿ ಲೈನ್‌ ಬಳಿ ಕ್ಯಾಚ್‌ ಕೊಟ್ಟರು. ಮರು ಎಸೆತದಲ್ಲಿ ದೀಪಕ್‌ ಚಹಾರ್‌ ಸಹ ಟಿಮ್‌ ಡೇವಿಡ್‌-ಫಿಲ್‌ ಸಾಲ್ಟ್‌ ಅವರ ಸ್ಟನ್ನಿಂಗ್‌ ಕ್ಯಾಚ್‌ಗೆ ವಿಕೆಟ್‌ ಒಪ್ಪಿಸಬೇಕಾಯಿತು. ಅಲ್ಲಿಗೆ ಮುಂಬೈ ಗೆಲುವಿನ ಆಸೆ ಕಮರಿತು. 3ನೇ ಎಸೆತದಲ್ಲಿ 1 ರನ್‌ ಸೇರ್ಪಡೆಯಾಯಿತು. 4ನೇ ಎಸೆತದಲ್ಲಿ ನಮನ್‌ ಧೀರ್‌ ಬೌಂಡರಿ ಬಾರಿಸಿದರು. ಇನ್ನೂ 5ನೇ ಎಸೆತದಲ್ಲಿ ನಮನ್‌ ಕ್ಯಾಚ್‌ ನೀಡಿದ್ರೆ, ಕೊನೆಯ ಎಸೆತದಲ್ಲಿ ಯಾವುದೇ ರನ್‌ ಬರದ ಕಾರಣ ಆರ್‌ಸಿಬಿ 12 ರನ್‌ ಗೆಲುವು ಸಾಧಿಸಿರು.

IPL1

ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
ಹಾರ್ದಿಕ್‌ ಪಾಂಡ್ಯ ಹಾಗೂ ತಿಲಕ್‌ ವರ್ಮಾ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟಿತ್ತು. ಆದ್ರೆ ಸ್ಫೋಟಕ ಆಟವಾಡುತ್ತಿದ್ದ ತಿಲಕ್‌ ವರ್ಮಾ 18ನೇ ಓವರ್‌ನ 4ನೇ ಎಸೆತದಲ್ಲಿ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಬಳಿಕ 19ನೇ ಓವರ್‌ನ ಮೊದಲ ಎಸೆತದಲ್ಲೇ ಹಾರ್ದಿಕ್‌ ಪಾಂಡ್ಯ ಸಹ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ಮರಳಿದರು. ಇದು ರನ್‌ ಮೇಲೆ ಪರಿಣಾಮ ಬೀರಿತು.

222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಅಲ್ಲದೇ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ ಹಾಗೂ ವಿಲ್‌ ಜಾಕ್ಸ್‌ ಅವರ ನಿಧಾನಗತಿಯ ಬ್ಯಾಟಿಂಗ್‌ನಿಂದ ಸಂಕಷ್ಟ ಎದುರಾಗಿತ್ತು. 12 ಓವರ್‌ ಮುಕ್ತಾಯಗೊಂಡರೂ 100 ರನ್‌ಗಳ ಗಡಿಯೂ ದಾಟಿರಲಿಲ್ಲ. ಇದರಿಂದ ಮುಂಬೈ ಸೋಲು ಖಚಿತ ಎಂದೇ ಭಾವಿಸಲಾಗಿತ್ತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್‌ ಪಾಂಡ್ಯ ಹಾಗೂ ತಿಲಕ್‌ ವರ್ಮಾ ಅವರ ಸ್ಫೋಟಕ ಆಟ ಮತ್ತೆ ಮುಂಬೈ ಇಂಡಿಯನ್ಸ್‌ಗೆ ಜೀವ ತುಂಬಿತ್ತು. ಇವರಿಬ್ಬರ ವಿಕೆಟ್‌ ಬೀಳುತ್ತಿದ್ದಂತೆ ಗೆಲುವಿನ ಆಸೆ ನುಚ್ಚುನೂರಾಯ್ತು.

IPL3

ಮುಂಬೈ ಪರ ಹಾರ್ದಿಕ್‌ ಪಾಂಡ್ಯ 42 ರನ್‌ (15 ಎಸೆತ, 4 ಸಿಕ್ಸರ್‌, 3 ಬೌಂಡರಿ), ತಿಲಕ್‌ ವರ್ಮಾ 56 ರನ್‌ (29 ಎಸೆತ, 4 ಸಿಕ್ಸರ್‌, 45 ಬೌಂಡರಿ) ಗಳಿಸಿದ್ರೆ, ಸೂರ್ಯಕುಮಾರ್‌ ಯಾದವ್‌ 28 ರನ್‌, ವಿಲ್‌ ಜಾಕ್ಸ್‌ 22 ರನ್‌, ರೋಹಿತ್‌ ಶರ್ಮಾ, ರಿಕಲ್ಟನ್‌ ತಲಾ 17 ರನ್‌ ಗಳಿಸಿದ್ರೆ, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಬೋಲ್ಟ್‌ 1 ರನ್‌ ಗಳಿಸಿದರು. ಆರ್‌ಸಿಬಿ ಪರ ಕೃನಾಲ್‌ ಪಾಂಡ್ಯ 4 ವಿಕೆಟ್‌ ಕಿತ್ತರೆ, ಯಶ್‌ ದಯಾಳ್‌, ಜೋಶ್‌ ಹೇಜಲ್ವುಡ್‌ ತಲಾ 2 ವಿಕೆಟ್‌, ಭುವನೇಶ್ವರ್‌ ಕುಮಾರ್‌ 1 ವಿಕೆಟ್‌ ಕಿತ್ತರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು‌ ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಮುಂಬೈ ಬೌಲರ್‌ಗಳ ವಿರುದ್ಧ ಪರಾಕ್ರಮ ಮೆರೆಯಿತು. ಅತ್ತ ವಿಕೆಟ್‌ ಬೀಳುತ್ತಿದ್ದರೂ ಇತ್ತ ವಿರಾಟ್‌ ಕೊಹ್ಲಿ, ರಜತ್‌ ಪಾಟೀದಾರ್‌, ಜಿತೇಶ್‌ ಶರ್ಮಾ ಅವರ ಬ್ಯಾಟಿಂಗ್‌ ಆರ್ಭಟ ಮುಂದುವರಿಯುತ್ತಲೇ ಸಾಗಿತು.

IPL 4

ಅಬ್ಬರಿಸಿ ಬೊಬ್ಬರಿದ ಆರ್‌ಸಿಬಿ
ಆರ್‌ಸಿಬಿ ಪರ ಆರಂಭಿಕ ಆಟಗಾರ ವಿರಾಟ್‌ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸಿದರು. 42 ಎಸೆತಗಳಲ್ಲಿ 67 ರನ್‌ (8 ಬೌಂಡರಿ, 2 ಸಿಕ್ಸರ್‌) ಗಳಿಸಿದ್ರೆ, 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಜತ್‌ ಪಾಟೀದಾರ್‌ 32 ಎಸೆತಗಳಲ್ಲಿ ಸ್ಪೋಟಕ 64 ರನ್‌ (5 ಬೌಂಡರಿ, 4 ಸಿಕ್ಸರ್‌) ಚಚ್ಚಿದರು. ಇನ್ನೂ 11 ಕೋಟಿ ಮೊತ್ತಕ್ಕೆ ಆರ್‌ಸಿಬಿ ಪಾಲಾದ ಜಿತೇಶ್‌ ಶರ್ಮಾ 19 ಎಸೆತಗಳಲ್ಲಿ ಸ್ಫೋಟಕ 40 ರನ್‌ (4 ಸಿಕ್ಸರ್‌, 2 ಬೌಂಡರಿ) ಸಿಡಿಸುವ ಮೂಲಕ ತಂಡದ ಮೊತ್ತ 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ದೇವದತ್‌ ಪಡಿಕಲ್‌ 37 ರನ್‌, ಫಿಲ್‌ ಸಾಲ್ಟ್‌ 4 ರನ್‌, ಟಿಮ್‌ ಡೇವಿಡ್‌ 1 ರನ್‌ ಗಳಿಸಿ ಮಿಂಚಿದರು.

TAGGED:Hardik PandyaMI vs RCBMumbai IndiansRajat Patidar (c)Rohit SharmarcbTilak Varmavirat kohliಮುಂಬೈ ಪರ ಟ್ರೆಂಟ್‌ ಬೌಲ್ಟ್‌ವಿಘ್ನೇಷ್‌ ಪುಥೂರ್‌ 1 ವಿಕೆಟ್‌ ಪಡೆದರು.ಹಾರ್ದಿಕ್‌ ಪಾಂಡ್ಯ ತಲಾ 2 ವಿಕೆಟ್‌ ಕಿತ್ತರೆ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
13 minutes ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
32 minutes ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
56 minutes ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
2 hours ago
virat kohli
Cricket

28,000 ರನ್‌ ಗಳಿಸಿದ ವೇಗದ ಬ್ಯಾಟ್ಸ್‌ಮನ್ – ತೆಂಡೂಲ್ಕರ್‌ ದಾಖಲೆ ಮುರಿದ ಕೊಹ್ಲಿ

Public TV
By Public TV
3 hours ago
h.d.kumaraswamy
Bengaluru City

2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?