Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ

Cricket

ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ

Public TV
Last updated: April 8, 2025 1:12 am
Public TV
Share
3 Min Read
MI vs RCB
SHARE

ಮುಂಬೈ: ಮುಂಬೈ ಭದ್ರಕೋಟೆ ವಾಂಖೆಡೆ ಕ್ರೀಡ ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಜಿದ್ದಾ ಜಿದ್ದಿ ಕಣದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 12 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ 10 ವರ್ಷಗಳ ಬಳಿಕ ಗೆಲುವು ಸಾಧಿಸಿದ್ದು, ಮುಂಬೈನ ಭದ್ರ ಕೋಟೆಯನ್ನ ಛಿದ್ರಗೊಳಿಸಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಂದು ನಡೆದ ಪಂದ್ಯವು ಕೊನೆಯವರೆಗೂ ರೋಚಕವಾಗಿತ್ತು. ಕ್ಷಣಕ್ಷಣಕ್ಕೂ ಅಭಿಮಾನಿಗಳ ಎದೆಬಡಿತ ಹೆಚ್ಚಿಸುತ್ತಲೇ ಇತ್ತು. ಅತ್ತ ಉತ್ಸಾಹ ಕಳೆದುಕೊಳ್ಳದ ಉಭಯ ತಂಡಗಳ ಅಭಿಮಾನಿಗಳು ತಮ್ಮಿಷ್ಟದ ಆಟಗಾರರನ್ನ ಊರಿದುಂಬಿಸಿ ಘೋಷಣೆ ಕೂಗುತ್ತಲೇ ಇದ್ದರು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 5 ವಿಕೆಟ್‌ ನಷ್ಟಕ್ಕೆ 221 ರನ್‌ ಬಾರಿಸಿತ್ತು. 222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

IPL2

ಕೊನೇ ಓವರ್‌ ಥ್ರಿಲ್ಲರ್‌
ಕೊನೇ ಓವರ್‌ನಲ್ಲಿ ಮುಂಬೈ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಕೃನಾಲ್‌ ಪಾಂಡ್ಯ ಬೌಲಿಂಗ್‌ನಲ್ಲಿದ್ದರೆ, ಮಿಚೆಲ್‌ ಸ್ಯಾಂಟ್ನರ್‌ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತದಲ್ಲೇ ಸ್ಯಾಂಟ್ನರ್‌ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಬೌಂಡರಿ ಲೈನ್‌ ಬಳಿ ಕ್ಯಾಚ್‌ ಕೊಟ್ಟರು. ಮರು ಎಸೆತದಲ್ಲಿ ದೀಪಕ್‌ ಚಹಾರ್‌ ಸಹ ಟಿಮ್‌ ಡೇವಿಡ್‌-ಫಿಲ್‌ ಸಾಲ್ಟ್‌ ಅವರ ಸ್ಟನ್ನಿಂಗ್‌ ಕ್ಯಾಚ್‌ಗೆ ವಿಕೆಟ್‌ ಒಪ್ಪಿಸಬೇಕಾಯಿತು. ಅಲ್ಲಿಗೆ ಮುಂಬೈ ಗೆಲುವಿನ ಆಸೆ ಕಮರಿತು. 3ನೇ ಎಸೆತದಲ್ಲಿ 1 ರನ್‌ ಸೇರ್ಪಡೆಯಾಯಿತು. 4ನೇ ಎಸೆತದಲ್ಲಿ ನಮನ್‌ ಧೀರ್‌ ಬೌಂಡರಿ ಬಾರಿಸಿದರು. ಇನ್ನೂ 5ನೇ ಎಸೆತದಲ್ಲಿ ನಮನ್‌ ಕ್ಯಾಚ್‌ ನೀಡಿದ್ರೆ, ಕೊನೆಯ ಎಸೆತದಲ್ಲಿ ಯಾವುದೇ ರನ್‌ ಬರದ ಕಾರಣ ಆರ್‌ಸಿಬಿ 12 ರನ್‌ ಗೆಲುವು ಸಾಧಿಸಿರು.

IPL1

ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
ಹಾರ್ದಿಕ್‌ ಪಾಂಡ್ಯ ಹಾಗೂ ತಿಲಕ್‌ ವರ್ಮಾ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟಿತ್ತು. ಆದ್ರೆ ಸ್ಫೋಟಕ ಆಟವಾಡುತ್ತಿದ್ದ ತಿಲಕ್‌ ವರ್ಮಾ 18ನೇ ಓವರ್‌ನ 4ನೇ ಎಸೆತದಲ್ಲಿ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಬಳಿಕ 19ನೇ ಓವರ್‌ನ ಮೊದಲ ಎಸೆತದಲ್ಲೇ ಹಾರ್ದಿಕ್‌ ಪಾಂಡ್ಯ ಸಹ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ಮರಳಿದರು. ಇದು ರನ್‌ ಮೇಲೆ ಪರಿಣಾಮ ಬೀರಿತು.

222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಅಲ್ಲದೇ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ ಹಾಗೂ ವಿಲ್‌ ಜಾಕ್ಸ್‌ ಅವರ ನಿಧಾನಗತಿಯ ಬ್ಯಾಟಿಂಗ್‌ನಿಂದ ಸಂಕಷ್ಟ ಎದುರಾಗಿತ್ತು. 12 ಓವರ್‌ ಮುಕ್ತಾಯಗೊಂಡರೂ 100 ರನ್‌ಗಳ ಗಡಿಯೂ ದಾಟಿರಲಿಲ್ಲ. ಇದರಿಂದ ಮುಂಬೈ ಸೋಲು ಖಚಿತ ಎಂದೇ ಭಾವಿಸಲಾಗಿತ್ತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್‌ ಪಾಂಡ್ಯ ಹಾಗೂ ತಿಲಕ್‌ ವರ್ಮಾ ಅವರ ಸ್ಫೋಟಕ ಆಟ ಮತ್ತೆ ಮುಂಬೈ ಇಂಡಿಯನ್ಸ್‌ಗೆ ಜೀವ ತುಂಬಿತ್ತು. ಇವರಿಬ್ಬರ ವಿಕೆಟ್‌ ಬೀಳುತ್ತಿದ್ದಂತೆ ಗೆಲುವಿನ ಆಸೆ ನುಚ್ಚುನೂರಾಯ್ತು.

IPL3

ಮುಂಬೈ ಪರ ಹಾರ್ದಿಕ್‌ ಪಾಂಡ್ಯ 42 ರನ್‌ (15 ಎಸೆತ, 4 ಸಿಕ್ಸರ್‌, 3 ಬೌಂಡರಿ), ತಿಲಕ್‌ ವರ್ಮಾ 56 ರನ್‌ (29 ಎಸೆತ, 4 ಸಿಕ್ಸರ್‌, 45 ಬೌಂಡರಿ) ಗಳಿಸಿದ್ರೆ, ಸೂರ್ಯಕುಮಾರ್‌ ಯಾದವ್‌ 28 ರನ್‌, ವಿಲ್‌ ಜಾಕ್ಸ್‌ 22 ರನ್‌, ರೋಹಿತ್‌ ಶರ್ಮಾ, ರಿಕಲ್ಟನ್‌ ತಲಾ 17 ರನ್‌ ಗಳಿಸಿದ್ರೆ, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಬೋಲ್ಟ್‌ 1 ರನ್‌ ಗಳಿಸಿದರು. ಆರ್‌ಸಿಬಿ ಪರ ಕೃನಾಲ್‌ ಪಾಂಡ್ಯ 4 ವಿಕೆಟ್‌ ಕಿತ್ತರೆ, ಯಶ್‌ ದಯಾಳ್‌, ಜೋಶ್‌ ಹೇಜಲ್ವುಡ್‌ ತಲಾ 2 ವಿಕೆಟ್‌, ಭುವನೇಶ್ವರ್‌ ಕುಮಾರ್‌ 1 ವಿಕೆಟ್‌ ಕಿತ್ತರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು‌ ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಮುಂಬೈ ಬೌಲರ್‌ಗಳ ವಿರುದ್ಧ ಪರಾಕ್ರಮ ಮೆರೆಯಿತು. ಅತ್ತ ವಿಕೆಟ್‌ ಬೀಳುತ್ತಿದ್ದರೂ ಇತ್ತ ವಿರಾಟ್‌ ಕೊಹ್ಲಿ, ರಜತ್‌ ಪಾಟೀದಾರ್‌, ಜಿತೇಶ್‌ ಶರ್ಮಾ ಅವರ ಬ್ಯಾಟಿಂಗ್‌ ಆರ್ಭಟ ಮುಂದುವರಿಯುತ್ತಲೇ ಸಾಗಿತು.

IPL 4

ಅಬ್ಬರಿಸಿ ಬೊಬ್ಬರಿದ ಆರ್‌ಸಿಬಿ
ಆರ್‌ಸಿಬಿ ಪರ ಆರಂಭಿಕ ಆಟಗಾರ ವಿರಾಟ್‌ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸಿದರು. 42 ಎಸೆತಗಳಲ್ಲಿ 67 ರನ್‌ (8 ಬೌಂಡರಿ, 2 ಸಿಕ್ಸರ್‌) ಗಳಿಸಿದ್ರೆ, 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಜತ್‌ ಪಾಟೀದಾರ್‌ 32 ಎಸೆತಗಳಲ್ಲಿ ಸ್ಪೋಟಕ 64 ರನ್‌ (5 ಬೌಂಡರಿ, 4 ಸಿಕ್ಸರ್‌) ಚಚ್ಚಿದರು. ಇನ್ನೂ 11 ಕೋಟಿ ಮೊತ್ತಕ್ಕೆ ಆರ್‌ಸಿಬಿ ಪಾಲಾದ ಜಿತೇಶ್‌ ಶರ್ಮಾ 19 ಎಸೆತಗಳಲ್ಲಿ ಸ್ಫೋಟಕ 40 ರನ್‌ (4 ಸಿಕ್ಸರ್‌, 2 ಬೌಂಡರಿ) ಸಿಡಿಸುವ ಮೂಲಕ ತಂಡದ ಮೊತ್ತ 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ದೇವದತ್‌ ಪಡಿಕಲ್‌ 37 ರನ್‌, ಫಿಲ್‌ ಸಾಲ್ಟ್‌ 4 ರನ್‌, ಟಿಮ್‌ ಡೇವಿಡ್‌ 1 ರನ್‌ ಗಳಿಸಿ ಮಿಂಚಿದರು.

TAGGED:Hardik PandyaMI vs RCBMumbai IndiansRajat Patidar (c)Rohit SharmarcbTilak Varmavirat kohliಮುಂಬೈ ಪರ ಟ್ರೆಂಟ್‌ ಬೌಲ್ಟ್‌ವಿಘ್ನೇಷ್‌ ಪುಥೂರ್‌ 1 ವಿಕೆಟ್‌ ಪಡೆದರು.ಹಾರ್ದಿಕ್‌ ಪಾಂಡ್ಯ ತಲಾ 2 ವಿಕೆಟ್‌ ಕಿತ್ತರೆ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

hardik pandyas new ferrari worth rs 12 cr all you need to know about the supercar
Automobile

ಗೆಳತಿ ಜೊತೆ 12 ಕೋಟಿ ಮೌಲ್ಯದ ಫೆರಾರಿಯಲ್ಲಿ ಪಾಂಡ್ಯ ಸುತ್ತಾಟ – ಕಾರಿನ ವಿಶೇಷತೆ ಏನು?

Public TV
By Public TV
19 minutes ago
padma awards
Latest

ನಿಮ್ಮ ನೆಚ್ಚಿನ ಸಾಧಕರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿ!

Public TV
By Public TV
54 minutes ago
byelections for davangere south press meet by five bjp ticket aspirants
Davanagere

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

Public TV
By Public TV
1 hour ago
LPG Gas Shortage
Explainer

PublicTV Explainer: ಪೈಪ್‌ಗಳು v/s ಸಿಲಿಂಡರ್‌ಗಳು – ಎಲ್‌ಪಿಜಿ ಬಿಕ್ಕಟ್ಟಿಗೆ ಪಿಎನ್‌ಜಿ ಪರಿಹಾರ?

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ಡಿಸಿಎಂ ಬಳಿಕ ಸಚಿವರಿಗೆ ಈಗ ಸಿಎಂ ಡಿನ್ನರ್‌!

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?