Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2030 ರ ವೇಳೆಗೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2030 ರ ವೇಳೆಗೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿ: ಮೋದಿ

Latest

2030 ರ ವೇಳೆಗೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿ: ಮೋದಿ

Public TV
Last updated: September 16, 2024 4:25 pm
Public TV
Share
5 Min Read
Renewable Energy Narendra Modi 3
SHARE

– ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆಯಲ್ಲಿ ವಾಗ್ದಾನ

ಅಹಮಾದಾಬಾದ್‌:  200 ಗಿಗಾವ್ಯಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದನೆ ಮಾಡುವ ಗುರಿಯನ್ನು ನಾವು ತಲುಪಿದ್ದೇವೆ. 2030 ರ ವೇಳೆಗೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿಯನ್ನು ಹಾಕಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಆಯೋಜಿಸಿರುವ 4ನೇ ಜಾಗತಿಕ ಮಟ್ಟದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ ಮತ್ತು ಎಕ್ಸ್ ಪೋ‌ಗೆ (4th Global Renewable Energy Investor’s Meet and Expo) ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದರು.

ಗುಜರಾತ್‌ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಎಕ್ಸ್‌ಪೋ ನಡೆಯುತ್ತಿದ್ದು ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prhlad Joshi) ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

200 ಅಧಿಕ ವಿದೇಶಿ ಪ್ರತಿನಿಧಿಗಳು, ವಿವಿಧ ಕಂಪನಿಗಳು ಹಾಗೂ 10,000 ಸಾರ್ವಜನಿಕರು ಇದರಲ್ಲಿ ಭಾಗಿಯಾಗಿದ್ದರು. ಮೂರು ದಿನಗಳಲ್ಲಿ 40 ಸೆಷನ್ ಗಳು ನಡೆಯುತ್ತಿದ್ದು ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದಲ್ಲಿರುವ ಅವಕಾಶಗಳುತ್ತು ಹೂಡಿಕೆ ಬಗ್ಗೆ ಸುಧೀರ್ಘ ಚರ್ಚೆ ನಡೆಯಲಿದೆ.

Renewable Energy Narendra Modi 1

ಕಾರ್ಯಕ್ರಮ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಮುಂದಿನ ಮೂರು ದಿನ ಇಂಧನದ ಭವಿಷ್ಯ ಮತ್ತು ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ, ಈ ವಲಯದ ತಜ್ಞರಿದ್ದಾರೆ ಇದರಿಂದ ನಮಗೆ ಮಾರ್ಗದರ್ಶನ ಸಿಗಲಿದೆ ಒಬ್ಬರಿಂದ ಮತ್ತೊಬ್ಬರು ಈ ಎಕ್ಸ್‌ಪೋದಿಂದ ಹೊಸತನ್ನು ಕಲಿಯಲಿದ್ದೇವೆ ಎಂದರು.

ಭಾರತದ (India) ಜನರು ಐವತ್ತು ವರ್ಷಗಳ ನಂತರ ಒಂದೇ ಪಕ್ಷಕ್ಕೆ ಮೂರನೇ ಬಾರಿಗೆ ಸತತವಾಗಿ ಅಧಿಕಾರ ನೀಡಿದ್ದಾರೆ. 140 ಜನರಿಗೆ, ಭಾರತದ ಯುವಕರಿಗೆ ಭರವಸೆ ಇದೆ ಅವರ ಭರವಸೆಗಳನ್ನು ನಾವು ಈಡೇರಿಸಬೇಕಿದೆ. ದೇಶದ ಬಡವರು, ದಲಿತರು, ಹಿಂದೂಳಿದ, ವಂಚಿತರಿಗೆ ಆರಾಮದಾಯಕ ಜೀವನದ ಭರವಸೆ ನೀಡಬೇಕು. ವಿಶ್ವದ ಮೂರನೇ ಬಲಿಷ್ಠ ಆರ್ಥಿಕತೆಯ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನು ಮಾಡಬೇಕಿದೆ ಇದರ ಟ್ರೇಲರ್ ನಮ್ಮ ಮೂರನೇ ಅವಧಿಯ ಮೊದಲ ನೂರು ದಿನದಲ್ಲಿ ತೋರುತ್ತದೆ ನಮ್ಮ ಆದ್ಯತೆ ಮತ್ತು ನಮ್ಮ ವೇಗ ಕಾಣ ಸಿಗಲಿದೆ.  ಇದನ್ನೂ ಓದಿ: ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರ್ನಾಟಕಕ್ಕೆ ನಾಲ್ಕು ಪ್ರಶಸ್ತಿ

Renewable Energy Narendra Modi 4

ಪ್ರತಿಯೊಂದು ಸೆಕ್ಟರ್ ಅನ್ನು ಗಮನ ಹರಿಸಿ, ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದೆ, 7 ಕೋಟಿ ಮನೆ ನಿರ್ಮಾಣ ಮಾಡುತ್ತಿದ್ದೇವೆ, ಹಿಂದಿನ ಎರಡು ಅವಧಿಯಲ್ಲಿ ಕ್ರಮವಾಗಿ ಮೂರು ಮತ್ತು ನಾಲ್ಕು ಕೋಟಿ ಮನೆ ನಿರ್ಮಾಣ ಮಾಡಿದ್ದೇವೆ. ಕಳೆದ ನೂರು ದಿನಗಳಲ್ಲಿ 15 ವಂದೇ ಭಾರತ್ ಟ್ರೈನ್ ಚಾಲನೆ ನೀಡಲಾಗಿದೆ. 2025 ಒಳಗೆ ಪೆಟ್ರೋಲ್ ಒಳಗೆ 20% ಎಥಿನಾಲ್ ಬ್ಲೆಡಿಂಗ್ ಮಾಡಲಿದ್ದೇವೆ

ಭಾರತದಲ್ಲಿ ನವೀಕರಿಸಬಹುದಾದ ಇಂಧನಕ್ಕೆ ಬೇಡಿಕೆ ಹೆಚ್ಚುತ್ತಿದೆ, ಅದಕ್ಕಾಗಿ ನಾವು ಹೊಸ ಯೋಜನೆಗಳನ್ನು ಆರಂಭಿಸುತ್ತಿದ್ದೇವೆ, ಹೀಗಾಗಿ ಭಾರತದಲ್ಲಿ ಹೂಡಿಕೆಗೆ ಅವಕಾಶಗಳಿದೆ, ಈ ವಲಯದಲ್ಲಿ ಭಾರತಕ್ಕಿಂತ ಉತ್ತಮ ಸ್ಥಳ ಮತ್ತೊಂದಿಲ್ಲ ಎಂದರು. ಪ್ರಹ್ಲಾದ್ ಜೋಶಿ ಕಳೆದ ಬಾರಿ ಕಲ್ಲಿದ್ದಲು ಸಚಿವರಾಗಿದ್ದರು, ಈಗ ಅವರು ನವೀಕರಿಸಬಹುದಾದ ಇಂಧನ ಸಚಿವರಾಗಿದ್ದಾರೆ ಅವರು ಈಗ ಅಪ್ಡೇಟ್ ಆಗಿದ್ದಾರೆ ಎಂದು ಭಾಷಣದಲ್ಲಿ ಪ್ರಹ್ಲಾದ್ ಜೋಶಿ ಉಲ್ಲೇಖಿಸಿ ಮೋದಿ ಹಾಸ್ಯ ಚಟಾಕಿ ಹಾರಿಸಿದರು‌.

Mission LiFE has generated many positive changes. India has taken the lead in efforts like the International Solar Alliance, Global Biofuel Alliance and more. pic.twitter.com/QzZlPiHWwT

— Narendra Modi (@narendramodi) September 16, 2024


ಭಾರತದಲ್ಲಿ ಕಲ್ಲಿದ್ದಲು ಗ್ಯಾಸ್ ನಿಕ್ಷೇಪ ಹೆಚ್ಚಿನ ಪ್ರಮಾಣ ಇಲ್ಲ. ಹೀಗಾಗಿ ಸೋಲಾರ್ ಮತ್ತು ನ್ಯೂಕ್ಲಿಯರ್ ಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. 2030 ರ ವೇಳೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿ ಹೊಂದಿದೆ. ಸೂರ್ಯಘರ್ ಯೋಜನೆ ಅಧ್ಯಯನ ಮಾಡಬೇಕು, ಮನೆ ಛಾವಣಿ ಮೇಲೆ ಸೋಲಾರ್ ಅಳವಡಿಸಲು ಸಬ್ಸಿಡಿ ನೀಡುವುದಲ್ಲದೇ ಸರ್ಕಾರ ಸಹಾಯ ಮಾಡುತ್ತಿದೆ, 1.30 ಕೋಟಿ ಜನರು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. 3.5 ಲಕ್ಷ ಮನೆಗಳಲ್ಲಿ ಸೋಲಾರ್ ಅಳವಡಿಕೆಯಾಗಿದೆ. ಈಗ ಜನರು ವಿದ್ಯುತ್ ಉತ್ಪಾದಿಸಿ ಮಾರಾಟ ಮಾಡುತ್ತಿದ್ದಾರೆ ಇದರಿಂದ ವಿದ್ಯುತ್ ಉಳಿತಾಯದ ಜೊತೆಗೆ ಹಣ ಮದ ಸಂಪಾದನೆಯಾಗಲಿದೆ ಎಂದರು.

ಇಲ್ಲಿ ವಿದ್ಯುತ್ ಉತ್ಪಾದನೆ ಜೊತೆಗೆ ಉದ್ಯೋಗ ಸೃಷ್ಟಿಯಾಗಲಿದೆ ಮತ್ತು ಪ್ರಕೃತಿಯ ರಕ್ಷಣೆಯೂಯಾಗಲಿದೆ. ಮೂಡೇರಾ ದೇಶದ ಮೊದಲ ಗ್ರಾಮವಾಗಿದೆ, ಇಲ್ಲ ಎಲ್ಲ ಮನೆಗಳಿಗೆ ಸೋಲಾರ್ ಅಳವಡಿಸಿದೆ ಸೋಲಾರ್ ಮೂಲಕ ಈ ಹಳ್ಳಿ ವಿದ್ಯುತ್ ನಲ್ಲಿ ಸ್ವಾವಲಂಬಿಯಾಗಿದೆ. ಅಯೋಧ್ಯೆಯನ್ನು ಮಾಡೆಲ್‌ ಸೋಲಾರ್ ಸಿಟಿ ಮಾಡುವ ಚಿಂತನೆ ಇದೆ. ಈಗಾಗಲೇ ಈ ಕಾರ್ಯ ಶುರುವಾಗಿದೆ. ಬೀದಿ ದೀಪ, ಬೋರ್ಡ್, ಎಟಿಎಂ ಸೇರಿ ಹಲವು ಕಡೆ ಸೋಲಾರ್ ಬಳಸಲಾಗುತ್ತಿದೆ. ಭಾರತದಲ್ಲಿ 17 ಸೋಲಾರ್ ಸಿಟಿ ನಿರ್ಮಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

Sustainability is a people’s movement in India. An instance to illustrate this is the rising popularity of solar energy. pic.twitter.com/MKYMv7LGIW

— Narendra Modi (@narendramodi) September 16, 2024

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ, ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನವೀಕರಿಸಬಹುದಾದ ಇಂಧನ ಶಕ್ತಿ ಹೆಚ್ಚಿದೆ, ಭಾರತದ ಸೋಲಾರ್ ಶಕ್ತಿ 33% ಹೆಚ್ಚಾಗಿದೆ. ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಲ್ಲಿ ಸಾಕಷ್ಟು ಜನರು ಇಂದು ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ, 32.45 ಲಕ್ಷ ಕೋಟಿ 2030 ರೊಳಗೆ ಹೂಡಿಕೆ ಮಾಡಲು ಹೂಡಿಕೆದಾರರು ಮುಂದೆ ಬಂದಿದ್ದಾರೆ ಎಂದರು.

ಸಿಎಂ ಭೂಪೇಂದ್ರ ಪಟೇಲ್ ಮಾತಾನಾಡಿ, ಪ್ರಧಾನಿ ನರೇಂದ್ರ ಮೋದಿ ಸಿಎಂಯಾಗಿದ್ದ ವೇಳೆ ಗುಜರಾತ್ ನಲ್ಲಿ ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಆರಂಭಿಸಿದರು. ಹವಮಾನ ಬದಲಾವಣೆ ಬಗ್ಗೆ ಚರ್ಚೆ ನಡೆಯುವ ಹೊತ್ತಲ್ಲಿ ಅವರು ಅದಕ್ಕಾಗಿ ಪ್ರತ್ಯೇಕ ಇಲಾಖೆ ತೆರೆದರು‌ ಗುಜರಾತ್ ನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಿದರು. ವಿಂಡ್ ಎನರ್ಜಿ ಯಲ್ಲಿ ಗುಜರಾತ್ ಎರಡನೇ ಸ್ಥಾನದಲ್ಲಿದೆ. ಗುಜರಾತ್ ಅನ್ನು ಗ್ರೀನ್ ಎನರ್ಜಿ ಹಬ್ ಮಾಡುವ ಗುರಿ ಹೊಂದಿದೆ, ಅದಕ್ಕಾಗಿ ಸಾಕಷ್ಟು ಸ್ಥಳ ಪರಿಶೀಲನೆ ಮಾಡಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಕನಸು ಸಾಕಾರಗೊಳಿಸಲು ಗುಜರಾತ್ ತನ್ನದೇಯಾದ ಯೋಗದಾನ ಮಾಡಲಿದೆ, ನವೀಕರಿಸಬಹುದಾದ ಇಂಧನದ ಶಕ್ತಿ ಪ್ರಯೋಜನ ಸಾಮಾನ್ಯ ಜನರು ಪಡೆಯಬೇಕು ಎಂಬುದು ಮೋದಿ ಅವರು ಚಿಂತನೆ. ಸೂರ್ಯಘರ್ ಯೋಜನೆ ಮೂಲಕ ಅದನ್ನು ಸಾಕಾರಗೊಳಿಸಲಾಗುತ್ತಿದೆ. ಸೋಲಾರ್, ಸೆಮಿಕಂಡಕ್ಟರ್, ನಾಗರಿಕ ವಿಮಾನಯಾನ, ಗ್ರೀನ್ ಎನರ್ಜಿ ಹೀಗೆ ಹಲವು ವಲಯಗಳಲ್ಲಿ ಸಂಬಂಧಿಸಿದಂತೆ ಎಕ್ಸ್‌ಪೊ ನಡೆಸಲಾಗುತ್ತಿದೆ.ವಿಶ್ವದಲ್ಲಿ ಸೋಲಾರ್ ಬಗ್ಗೆ ಚರ್ಚೆ ಇರಲಿಲ್ಲ, ಆದರೆ ಗುಜರಾತ್ ನಲ್ಲಿ ಸೋಲಾರ್ ಅಳವಡಿಕೆ ಆರಂಭವಾಗಿತ್ತು, ಹವಾಮಾನ ಬದಲಾವಣೆಗೆ ಮೊದಲು ಸಚಿವಾಲಯ ಶುರು ಮಾಡಿದ್ದು ಗುಜರಾತ್ ನಲ್ಲಿ ಮಹಾತ್ಮ ಗಾಂಧಿ ಅವರ ಕನಸು ನನಸು ಮಾಡಬೇಕಿದೆ ಗ್ರೀನ್ ಎನರ್ಜಿ ಇಂದಿನ ಭಾರತದ ಅಗತ್ಯವಾಗಿದೆ ಎಂದರು.

TAGGED:gujaratnarendra modiRenewable Energyಗುಜರಾತ್ನರೇಂದ್ರ ಮೋದಿನವೀಕರಿಸಬಹುದಾದ ಇಂಧನ
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
3 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
3 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
3 hours ago
Siddaramaiah 9
Districts

ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ: ಸಿಎಂ

Public TV
By Public TV
4 hours ago
Chalavadi narayanaswamy
Bengaluru City

ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದ್ಕೆ ರಾಹುಲ್ ಗಾಂಧಿ ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ – ಛಲವಾದಿ

Public TV
By Public TV
4 hours ago
Bidar Air Show
Bidar

ಬೀದರ್‌ನ ಐತಿಹಾಸಿಕ ಕೋಟೆ ಮೇಲೆ ಜರುಗಿದ ಆಕರ್ಷಕ ಏರ್‌ಶೋ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?