Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

Bengaluru City

ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

Public TV
Last updated: December 29, 2018 7:53 am
Public TV
Share
2 Min Read
MADHU copy
SHARE

ಬೆಂಗಳೂರು: ಕರ್ನಾಟಕದ ರಿಯಲ್ ಸಿಂಗಂ, ಭ್ರಷ್ಟ ರಾಜಕಾರಣಿಗಳನ್ನೇ ಜೈಲಿಗಟ್ಟಿ ಅಬ್ಬರಿಸಿ ಲೋಕಾಯುಕ್ತಕ್ಕೆ ಹೊಸ ಖದರ್ ತಂದು ಕೊಟ್ಟಿದ್ದ ಯುವ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ.

ಮಧುಕರ್ ಶೆಟ್ಟಿಯವರನ್ನು ನೋಡದವರು ಕೂಡ ಅವರು ಮಾಡಿದ ಕೆಲಸಗಳನ್ನು ಕೇಳಿ ಗೌರವ ನೀಡುತ್ತಾ ಇದ್ದರು. ಅವರ ಹೆಸರಿನ ಮಹತ್ವವೇ ಹಾಗಿತ್ತು. ಆದ್ರೆ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೆಚ್1ಎನ್1 ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ 8.15ಕ್ಕೆ ಹೈದ್ರಾಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

MADHU 2

ಮಧುಕರ್ `ದಕ್ಷತೆ’ಯ ಹಾದಿ:
1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿರುವ ಇವರು 2003 ರಿಂದ 2004ರವರೆಗೆ ಚಾಮರಾಜನಗರ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. 2011ರಲ್ಲಿ ವಿದ್ಯಾಭ್ಯಾಸದ ರಜೆ ತೆಗೆದುಕೊಂಡ ಬಳಿಕ ತರಬೇತಿ ಮತ್ತು ನೇಮಕಾತಿ ವಿಭಾಗದ ಡಿಐಜಿ ಆಗಿ ಬಡ್ತಿ ಪಡೆದ್ರು. ಹೈದರಾಬಾದ್‍ನ ನ್ಯಾಷನಲ್ ಪೊಲೀಸ್ ಅಕಾಡೆಮಿಯಲ್ಲಿ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಇವರು ದೆಹಲಿಯ ಜೆಎನ್‍ಯುನಿಂದ ಸಮಾಜಶಾಸ್ತ್ರದಲ್ಲಿ ಎಂ.ಎ ಹಾಗೂ ನ್ಯೂಯಾರ್ಕ್ ನ ಯೂನಿವರ್ಸಿಟಿಯಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ.

ಲೋಕಾಯುಕ್ತದಲ್ಲಿ ಎಸ್ಪಿಯಾಗಿದ್ದಾಗ ಮನೆ ಮಾತಾಗಿದ್ದರು. ಲೋಕಾಯುಕ್ತ ಎಸ್ಪಿಯಾಗಿ ನಿಯೋಜನೆಗೊಂಡ ಎರಡೇ ತಿಂಗಳಿಗೆ ಎರಡು ಜಿಲ್ಲೆಯ ಎಸ್ಪಿಗಳನ್ನು ಟ್ರಾಪ್ ಮಾಡಿ ಲಂಚ ಪಡೆಯುವಾಗ ಜೈಲಿಗೆ ಅಟ್ಟಿದ್ರು. ಆದ್ರೆ ಲೋಕಾಯುಕ್ತದಲ್ಲಿ ಆದ ಕೆಲವು ಬೆಳವಣಿಗೆಗಳಿಂದ ಬೇಸತ್ತ ಮಧುಕರ್ ಶೆಟ್ಟಿ, ಅಮೆರಿಕಕ್ಕೆ ತೆರಳಿ ನಾಲ್ಕು ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡಿ ಕರ್ನಾಟಕಕ್ಕೆ ವಾಪಸ್ಸು ಬಂದಿದ್ದರು.

MADHU 4

ಡಿಐಜಿಯಾದ ಮಧುಕರ್ ಶೆಟ್ಟಿಗೆ ಸರ್ಕಾರ ಸರಿಯಾದ ಸ್ಥಾನ ಮಾನ ನೀಡಿರಲಿಲ್ಲ. ಇದರಿಂದ ಬೇಸತ್ತು ಮತ್ತೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸಕ್ಕೆ ತೆರಳಿದ್ದರು. ಕರ್ನಾಟಕದಿಂದ ಕೇಂದ್ರ ಸೇವೆಗೆ ಮರಳಿದ್ದ ಅವರನ್ನ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ನಿಯೋಜನೆಗೊಂಡಿದ್ದರು.

ಚಾಮರಾಜನಗರ ಜಿಲ್ಲೆಯಲ್ಲಿ ಎಸ್ಪಿಯಾಗಿದ್ದಾಗ ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರಿಗೆ ಬಿಸಿ ಮುಟ್ಟಿಸುತ್ತಿದ್ದರು.  ಒಟ್ಟಿನಲ್ಲಿ ಲೋಕಾಯುಕ್ತಕ್ಕೆ ಹೊಸ ಖದರ್ ತಂದುಕೊಟ್ಟ ನೇರ ನಡೆ ನುಡಿಯ ನಿಷ್ಠುರ ಅಧಿಕಾರಿಯಾಗಿದ್ದ ಮಧುಕರ್, ಲೋಕಾಯುಕ್ತದಲ್ಲೂ ಭ್ರಷ್ಟಾಚಾರ ಇದೆ ಎಂದು ಹೇಳಿ ಬಿರುಗಾಳಿ ಎಬ್ಬಿಸಿದ್ದ ಸಿಂಗಂ ಆಗಿದ್ದರು. ಇಷ್ಟು ಮಾತ್ರವಲ್ಲದೇ ವೀರಪ್ಪನ್ ಸೆರೆಗಾಗಿ ರಚನೆಗೊಂಡಿದ್ದ ವಿಶೇಷ ಕಾರ್ಯಪಡೆಯಲ್ಲಿಯೂ ಸೇವೆ ಸಲ್ಲಿಸಿದ ಕೀರ್ತಿ ಇವರದ್ದಾಗಿದೆ.

MADHU 3

ಹಳ್ಳಿಗೆ ಹೆಸರು:
ಉಡುಪಿ ಜಿಲ್ಲೆ ಮೂಲದವರಾದ ಮಧುಕರ್ ಶೆಟ್ಟಿ ಚಿಕ್ಕಮಗಳೂರಿನಿಂದ ವೃತ್ತಿ ಪ್ರಾರಂಭಿಸಿದ್ರು. ಇವರ ಕಾರ್ಯಕ್ಕೆ ಮೂಡಿಗೆರೆಯ ಆಲ್ದೂರಿನ ಜನ ಆ ಊರಿಗೆ ಇಟ್ಟ ಹೆಸರು ಡಿಸಿ ಹಾಗೂ ಎಸ್ಪಿದು. 2006ರಲ್ಲಿ ಆಗಿನ ಜಿಲ್ಲಾಧಿಕಾರಿಯಾಗಿದ್ದ ಹರ್ಷಗುಪ್ತ ಅವರೊಡನೆ ಸೇರಿ ಒತ್ತುವರಿಯಾಗಿದ್ದ ಜಮೀನನ್ನು ಬಿಡಿಸಿ ದಲಿತರಿಗೆ ಕೊಟ್ಟಿದ್ದರು. ಹಾಗಾಗಿ ಜನ ಡಿಸಿ ಹರ್ಷ ಗುಪ್ತಾ, ಎಸ್ಪಿ ಮಧುಕರ್ ಶೆಟ್ಟಿ ಹೆಸರನ್ನ ಸೇರಿಸಿ ಆ ಹಳ್ಳಿಗೆ ಗುಪ್ತಶೆಟ್ಟಿ ಹಳ್ಳಿ ಅಂತಾ ಹೆಸರಿಟ್ಟುಕೊಂಡಿದ್ದಾರೆ.

ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿಯವರು ತೀವ್ರ ಅನಾರೋಗ್ಯದಿಂದ ನಿಧನರಾದ ಸುದ್ದಿ‌ ಕೇಳಿ ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ.

— H D Devegowda (@H_D_Devegowda) December 28, 2018

ಪತ್ರಕರ್ತರಾಗಿದ್ದ ಉಡುಪಿ ಜಿಲ್ಲೆಯ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಪುತ್ರ ಮಧುಕರ್‍ಗೆ ಕೇವಲ 47 ವರ್ಷ ವಯಸ್ಸಾಗಿತ್ತು. ಇವರು 1998ರ ಕರ್ನಾಟಕ ಕೇಡರ್‍ನ ಐಪಿಎಸ್ ಅಧಿಕಾರಿಯಾಗಿದ್ದರು. ಭಾರತೀಯ ಕಂದಾಯ ಸೇವೆ ಅಧಿಕಾರಿಯಾಗೋ ಅವಕಾಶ ಸಿಕ್ಕರೂ ತಾನು ಪೊಲೀಸ್ ಅಧಿಕಾರಿಯೇ ಆಗಬೇಕೆಂದು ಹಠ ಹಿಡಿದು ಖಾಕಿ ಧರಿಸಿ ಆ ಸೇವೆಗಾಗಿಯೇ ತಮ್ಮ ಜೀವನವನ್ನ ಮುಡಿಪಾಗಿಟ್ಟಿದ್ದರು. ಸದ್ಯ ಮಧುಕರ್ ಶೆಟ್ಟಿಗೆ ಒಬ್ಬಳು ಪುತ್ರಿ ಮತ್ತು ಪತ್ನಿಯನ್ನ ಅಗಲಿದ್ದಾರೆ. ಮಧುಕರ್ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು, ಸಿದ್ದರಾಮಯ್ಯ, ಶೋಭಾ ಕರಂದ್ಲಾಜೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಯುವ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನಿಂದ ಆಘಾತಕ್ಕಿಡಾಗಿದ್ದೇನೆ. ಹಿರಿಯ ಪತ್ರಕರ್ತ ಮತ್ತು ನನ್ನ ಹಿತೈಷಿಯಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟಿಯವರ ಮಗ ಎನ್ನುವ ಕಾರಣದಿಂದಾಗಿ ನನಗೆ ಹೆಚ್ಚು ಪ್ರೀತಿಪಾತ್ರರಾಗಿದ್ದರು. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/MpoPxnqx2K

— Siddaramaiah (@siddaramaiah) December 28, 2018

ರಾಜ್ಯದ ಐಪಿಎಸ್ ಅಧಿಕಾರಿ ವಿ.ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು ನೇರ ನಡೆನುಡಿಗಳಿಂದ ಜನಪ್ರಿಯರಾಗಿದ್ದರು. ಅವರ ಅಕಾಲಿಕ ನಿಧನ ತೀವ್ರ ಆಘಾತ ಉಂಟು ಮಾಡಿದೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ಆಘಾತ ಸಹಿಸುವ ಶಕ್ತಿ ನೀಡಲಿ" pic.twitter.com/kVxSCx5cW6

— CM of Karnataka (@CMofKarnataka) December 28, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengaluruChikkamagaluruipsmadhukar shettyudupiಉಡುಪಿಐಪಿಎಸ್ಚಿಕ್ಕಮಗಳೂರುಬೆಂಗಳೂರುಮಧುಕರ ಶೆಟ್ಟಿ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Kodagu
Crime

ಹಿಂದೂ ಯುವಕರ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ – ಎಲ್ಲಾ ಆರೋಪಿಗಳ ಬಂಧನ

Public TV
By Public TV
7 minutes ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರದೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
1 hour ago
Nelamangala Suicide
Bengaluru City

ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದಕ್ಕೆ ಹೆದರಿ ನೇಣಿಗೆ ಕೊರಳೊಡ್ಡಿದ್ರಾ ಟೆಕ್ಕಿ?

Public TV
By Public TV
1 hour ago
PUC Exam
Bagalkot

All The Best Students – ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

Public TV
By Public TV
2 hours ago
Blood Moon
Bengaluru City

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Public TV
By Public TV
2 hours ago
Raichur Accident
Crime

ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?