ಎರಡು ಕಾಲಿರುವ ಯಾರೇ ಬಂದರೂ ಚುನಾವಣೆಯಲ್ಲಿ ಎದುರಿಸಲು ಸಿದ್ಧ: ಬಿ.ನಾಗೇಂದ್ರ

Public TV
1 Min Read
B.Nagendra ballary 1

ಬಳ್ಳಾರಿ: ಕಾಂಗ್ರೆಸ್ (Congress) ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತದೆ. ನನ್ನ ವಿರುದ್ಧ ಆ ದೇವರು ಒಬ್ಬರನ್ನು ಬಿಟ್ಟು ಎರಡು ಕಾಲಿರುವ ಯಾರೇ ಬಂದರೂ ಚುನಾವಣೆಯಲ್ಲಿ (Election) ಎದುರಿಸಲು ನಾನು ಸಿದ್ಧವಾಗಿದ್ದೇನೆ ಎಂದು ಬಳ್ಳಾರಿ (Ballary) ಗ್ರಾಮಾಂತರ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ (B.Nagendra) ಸವಾಲೆಸೆದರು.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೌಲ್ ಬಜಾರ್ ವ್ಯಾಪ್ತಿಯಲ್ಲಿರುವ 28 ಮತ್ತು 29ನೇ ವಾರ್ಡಿನಲ್ಲಿ ಕೈಗೊಂಡಿರುವ ಅಲ್ಪಸಂಖ್ಯಾತರ ಅನುದಾನದ ಅಡಿಯಲ್ಲಿ 60 ಲಕ್ಷ ರೂ.ಗಳ ವೆಚ್ಚದಲ್ಲಿ ಯುಜಿಡಿ ಪೈಪ್ ಲೈನ್ ಅಳವಡಿಸುವ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಮೋದಿ ಭದ್ರತೆಗೆ 2,000 ಪೊಲೀಸರ ನಿಯೋಜನೆ – ಐವರು ಎಸ್‌ಪಿಗಳು ಸ್ಥಳದಲ್ಲೇ ಮೊಕ್ಕಾಂ

B.Nagendra Ballary 3

ಚುನಾವಣೆ ಸಂದರ್ಭದಲ್ಲಿ ಆಮಿಷವೊಡ್ಡುವವರು ಬರುತ್ತಾರೆ. ಅದು ಮಾಡುತ್ತೇವೆ, ಇದು ಮಾಡುತ್ತೇವೆ ಎನ್ನುತ್ತಾರೆ. ಇದಕ್ಕೆ ಯಾರೂ ಕೂಡಾ ವಿಚಲಿತರಾಗಬಾರದು. ಗೊಂದಲಕ್ಕೆ ಈಡಾಗಬಾರದು ಎಂದು ಮತದಾರರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಬಿರುಬೇಸಿಗೆಯಲ್ಲೂ ಜೋಗ ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿದೆ ಶರಾವತಿ ಜಲಧಾರೆ

ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಪ್ರತಿ ಕುಟುಂಬದ ಮಹಿಳೆಗೆ ಮಾಸಿಕ ಎರಡು ಸಾವಿರ ರೂ. ಪ್ರತೀ ಕುಟುಂಬಕ್ಕೆ ಮಾಸಿಕ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಿದೆ. ಅಲ್ಲದೇ ಪ್ರತಿ ವ್ಯಕ್ತಿಗೆ ಮಾಸಿಕ 10 ಕಿಲೋ ಅಕ್ಕಿ ನೀಡಲಿದೆ ಎಂಬುವುದಕ್ಕೆ ಗ್ಯಾರೆಂಟಿ ಕೊಡುವುದಾಗಿ ಹೇಳಿದರು. ಇದನ್ನೂ ಓದಿ: ಕುಂಕುಮ ಎಂದರೆ ಬೆಚ್ಚಿ ಬೀಳುತ್ತಿದ್ದ ಸಿದ್ದರಾಮಯ್ಯ ಇಂದು ದೇವಸ್ಥಾನ ಬಿಟ್ಟು ಬದುಕುತ್ತಿಲ್ಲ: ಈಶ್ವರಪ್ಪ

Share This Article
Leave a Comment

Leave a Reply

Your email address will not be published. Required fields are marked *