Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್ಥಿಕ ಅವನತಿಯತ್ತ ಶ್ರೀಲಂಕಾ – ಸಕ್ಕರೆ, ಬೇಳೆಗೆ ಚಿನ್ನದ ಬೆಲೆ, 1 ಟೀಗೆ 100 ರೂ.
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರ್ಥಿಕ ಅವನತಿಯತ್ತ ಶ್ರೀಲಂಕಾ – ಸಕ್ಕರೆ, ಬೇಳೆಗೆ ಚಿನ್ನದ ಬೆಲೆ, 1 ಟೀಗೆ 100 ರೂ.

Latest

ಆರ್ಥಿಕ ಅವನತಿಯತ್ತ ಶ್ರೀಲಂಕಾ – ಸಕ್ಕರೆ, ಬೇಳೆಗೆ ಚಿನ್ನದ ಬೆಲೆ, 1 ಟೀಗೆ 100 ರೂ.

Public TV
Last updated: March 22, 2022 12:28 pm
Public TV
Share
3 Min Read
SRILANKA
SHARE

ಕೊಲಂಬೊ: ರಾವಣನ ನಾಡು ಎಂಬ ಖ್ಯಾತಿಯ ಶ್ರೀಲಂಕಾ ಮಹಾ ಆರ್ಥಿಕ ಪತನದತ್ತ ಸಾಗಿದೆ. ದೇಶದಲ್ಲಿ ಜನ ಆಹಾರ ಉತ್ಪನ್ನಗಳ ಖರೀದಿಗೆ ಹಾಹಾಕಾರ ಶುರುವಾಗಿದ್ದು, ಸಕ್ಕರೆ, ಬೇಳೆ ಸೇರಿದಂತೆ ಪ್ರಮುಖ ಆಹಾರ ಉತ್ಪನ್ನಗಳಿಗೆ ಚಿನ್ನದ ಬೆಲೆ ಆಗಿದೆ.

Tea

ಶ್ರೀಲಂಕಾದಲ್ಲಿ ಜಿಡಿಪಿ ಸೊನ್ನೆ ಸುತ್ತುತ್ತಿದೆ. ಜನ ಪೆಟ್ರೋಲ್, ಸೀಮೆಎಣ್ಣೆಗೆ ಕ್ಯೂ ನಿಂತು ಸಾವನ್ನಪ್ಪುತ್ತಿದ್ದಾರೆ. ಮುದ್ರಣ ಕಾಗದಲ್ಲಿ ಕೊರತೆ ಉಂಟಾದ ಪರಿಣಾಮ ಶಾಲಾ ಮಕ್ಕಳಿಗೆ ನಡೆಯಬೇಕಾಗಿದ್ದ ಪರೀಕ್ಷೆಯನ್ನು ಸರ್ಕಾರ ಮುಂದೂಡಿದೆ. ಪೆಟ್ರೋಲ್, ಡೀಸೆಲ್‍ಗಾಗಿ ದಿನಗಟ್ಟಲೇ ಕ್ಯೂ ನಿಂತು ಇಬ್ಬರು ನಾಗರಿಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ

SRILANKA 2

ರಷ್ಯಾ, ಉಕ್ರೇನ್ ನಡುವೆ ಯುದ್ಧ ಆರಂಭವಾದಗಿನಿಂದ ಶ್ರೀಲಂಕಾದಲ್ಲಿ ತೈಲ ಹಾಹಾಕಾರ ಆರಂಭವಾಗಿದೆ. ನಿನ್ನೆ ಎಪ್ಪತ್ತು ವರ್ಷ ಮೇಲ್ಪಟ್ಟ ಇಬ್ಬರು ವೃದ್ಧರು ಸೀಮೆಎಣ್ಣೆಗಾಗಿ ಕ್ಯೂ ನಿಂತಿದ್ದ ಸ್ಥಳದಲ್ಲೇ ನಿಶ್ಯಕ್ತಿಯಿಂದ ಸಾವನ್ನಪ್ಪಿದ್ದಾರೆ. ಯುದ್ಧ ಬೆನ್ನಲ್ಲೇ ಶ್ರೀಲಂಕಾದಲ್ಲಿ ಕಚ್ಚಾತೈಲ ಸಂಗ್ರಹಗಾರಗಳು ಬರಿದಾಗಿದೆ. ಇತ್ತ ಎಲ್‍ಪಿಜಿ ಬೆಲೆ ಸಿಲಿಂಡರ್ ಬೆಲೆ 1,350 ರೂಪಾಯಿಗೆ ಏರಿಕೆ ಕಂಡಿದೆ. ಬೆಲೆ ಏರಿಕೆಯಿಂದಾಗಿ ಜನ ಹೈರಾಣಾಗಿದ್ದು, ಆರ್ಥಿಕ ದಿವಾಳಿಯತ್ತ ಶ್ರೀಲಂಕಾ ಸಾಗಿದೆ. ಇದನ್ನೂ ಓದಿ: ಚುನಾವಣೆವರಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿ

ಶ್ರೀಲಂಕಾದಲ್ಲಿ ದಿನ ಬಳಕೆಯ ವಸ್ತುಗಳೊಂದಿಗೆ ಟೀ ಬೆಲೆ ಕೂಡ ಗಗನಕ್ಕೇರಿದೆ. ಒಂದು ಕಪ್ ಟೀ ಬೆಲೆ 100 ರೂ.ಗೆ ಏರಿಕೆ ಕಂಡಿದೆ. 400 ಗ್ರಾಂನ ಹಾಲಿಗೆ ಪುಡಿಗೆ 250 ರೂಪಾಯಿ ಬೆಲೆ ನಿಗದಿಪಡಿಸಲಾಗಿದ್ದು, ಹಣದುಬ್ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ಏರುತ್ತಿದೆ. ಒಂದೇ ತಿಂಗಳಲ್ಲಿ 10% ಹಣದುಬ್ಬರ ಏರಿಕೆ ಕಂಡಿದೆ. ಫೆಬ್ರವರಿಯಲ್ಲಿ 15.1% ರಷ್ಟಿದ್ದ ಹಣದುಬ್ಬರ ಮಾರ್ಚ್‍ನಲ್ಲಿ 25.7%ಗೆ ಏರಿಕೆ ಕಂಡಿದ್ದು, ಡಾಲರ್ ಮುಂದೆ ಶ್ರೀಲಂಕಾದ ಕರೆನ್ಸಿ ಬೆಲೆ ಮಂಕಾಗಿದ್ದು, ಪ್ರತಿ ಡಾಲರ್ ಬೆಲೆ 275 ರೂಪಾಯಿಗೆ ಏರಿಕೆ ಕಂಡಿದೆ.

SRILANKA 1

ಆರ್ಥಿಕ ದಿವಾಳಿಗೆ ಕಾರಣಗಳೇನು:
ಶ್ರೀಲಂಕಾದ ಆರ್ಥಿಕ ದಿವಾಳಿಗೆ ಪ್ರಮುಖ ಕಾರಣವಾಗಿರುವುದು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿರುವುದು ಮತ್ತು ಏಕಾಏಕಿ ರಸಗೊಬ್ಬರ ನಿಷೇಧ ಮಾಡಿರುವುದರಿಂದಾಗಿ ಶ್ರೀಲಂಕಾದ ಕೃಷಿ ವಲಯ ಕುಸಿತ ಕಂಡಿದೆ. ಅಕ್ಕಿ, ಬೆಳೆ, ಕಬ್ಬು ಸೇರಿ ಧಾನ್ಯಗಳ ಪೂರೈಕೆಯಲ್ಲಿ ಭಾರಿ ಕೊರತೆ ಕಂಡುಬಂದಿದ್ದು, ಪೂರೈಕೆ ಕೊರತೆಯಿಂದ ಆಹಾರ ಪದಾರ್ಥಗಳ ಬೆಲೆ ಗಣನೀಯ ಏರಿಕೆ ಕಂಡಿದೆ. ಇದನ್ನೂ ಓದಿ: ಬ್ರೋಕರ್ ಮೋಹನ್ ಮನೆಯಲ್ಲಿತ್ತು 5 ಕೆಜಿ ಚಿನ್ನ – ಎಸಿಬಿ ಅಧಿಕಾರಿಗಳೇ ಶಾಕ್

ಶ್ರೀಲಂಕಾಗೆ ಈ ಮೊದಲು ಕೊರೊನಾ ಬಾರಿ ಹೊಡೆತ ನೀಡಿದೆ. ಕೊರೊನಾದಿಂದ ಶ್ರೀಲಂಕಾದ ಪ್ರವಾಸೋದ್ಯಮ ಬಂದ್ ಆದ ಪರಿಣಾಮದಿಂದಾಗಿ ಸರ್ಕಾರಕ್ಕೆ ಬರುತ್ತಿದ್ದ ಆದಾಯ ಕಡಿತಗೊಂಡಿದೆ. ಶೇ.10 ಜಿಡಿಪಿ ಹೊಂದಿರುವ ಪ್ರವಾಸೋದ್ಯಮದ ಬಂದ್ ನಿಂದ ನಿರುದ್ಯೋಗ ಸೇರಿದಂತೆ ಜನರಲ್ಲಿ ಆರ್ಥಿಕ ಕೊರತೆ ಹೆಚ್ಚಳಗೊಂಡಿದೆ. ಚೀನಾ, ಜಪಾನ್ ಸೇರಿದಂತೆ ಹಲವು ದೇಶಗಳು ಮತ್ತು ಅಂತಾರಾಷ್ಟ್ರೀಯ ಬ್ಯಾಂಕ್‍ಗಳಿಂದ ಶ್ರೀಲಂಕಾ ಸಾಲ ಪಡೆದುಕೊಂಡಿದೆ. ಇದರಿಂದಾಗಿ ಶ್ರೀಲಂಕಾ ಸರ್ಕಾರ ಆದಾಯವಿಲ್ಲದೇ ಕಂತುಗಳನ್ನು ಕಟ್ಟಲು ಪರದಾಡುತ್ತಿದೆ. ಇನ್ನೊಂದೆಡೆ ವಿದೇಶಿ ವಿನಿಮಯ ಮತ್ತು ಕರೆನ್ಸಿ ಮೌಲ್ಯ ಕುಸಿತ ಕಂಡ ಪರಿಣಾಮ ಸಣ್ಣ ಪುಟ್ಟ ವಸ್ತುಗಳಿಗೂ ದುಬಾರಿ ಬೆಲೆ ತೆತ್ತು ಆಮದು ಮಾಡುವಂತಹ ಪರಿಸ್ಥಿತಿ ಶ್ರೀಲಂಕಾಗೆ ಎದುರಾಗಿದೆ.

SRILANKA 3

ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಜಗತ್ತಿಗೆ ಗೊತ್ತಿದೆ. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂಪಾಯಿ ನೆರವನ್ನು ಶ್ರೀಲಂಕಾಗೆ ನೀಡುವುದಾಗಿ ಘೋಷಿಸಿತ್ತು. 1948ರಲ್ಲಿ ಸ್ವಾತಂತ್ರ್ಯ ಗಿಟ್ಟಿಸಿಕೊಂಡ ನಂತರ ಇದೇ ಮೊದಲ ಬಾರಿ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಹೀಗಾಗಿ ಪರಿಸ್ಥಿತಿ ಹದಗೆಡುತ್ತಿದ್ದು, ಅಗತ್ಯ ವಸ್ತುಗಳಿಗೂ ಭಾರೀ ಕೊರತೆ ಉಂಟಾಗಿದೆ.

TAGGED:Economic CrisisfoodSri Lankaಆರ್ಥಿಕ ದಿವಾಳಿತೈಲಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows
AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories

You Might Also Like

siddu dkshi
Bengaluru City

ಡಿಕೆಶಿ ಡೆಲ್ಲಿ ಟೂರ್ ಗೇಮ್.. ಬೆಂಗಳೂರಲ್ಲೇ ಕುಳಿತು ಸಿದ್ದರಾಮಯ್ಯ ಚೆಕ್ ಮೇಟ್..! ರಾಹುಲ್ ಬಳಿ ಜಾರ್ಜ್ ಹೋಗಿದ್ದೇಕೆ..!?

Public TV
By Public TV
17 minutes ago
Namma Metro Greenline
Bengaluru City

ಮತ್ತೆ ದರ ಏರಿಕೆಗೆ ರೆಡಿಯಾದ BMRCL – ಸಿಎಂ, ಕೇಂದ್ರಕ್ಕೆ ತೇಜಸ್ವಿ ಸೂರ್ಯ ಪತ್ರ

Public TV
By Public TV
23 minutes ago
Anekal 3
Districts

ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಗೋಮಾಳ ಒತ್ತುವರಿ ತೆರವು

Public TV
By Public TV
40 minutes ago
pm modi 1
Latest

ಭಾರತದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪ್ರಧಾನಿ ಮೋದಿ

Public TV
By Public TV
1 hour ago
Phool Singh Baraiya
Crime

ಸುಂದರ ಹುಡುಗಿಯನ್ನ ನೋಡಿ ಸೆಳೆತಕ್ಕೊಳಗಾಗಿ ರೇಪ್ ಮಾಡ್ತಾರೆ – ಕಾಂಗ್ರೆಸ್ ಶಾಸಕ ವಿವಾದ

Public TV
By Public TV
1 hour ago
HC Balakrishna
Districts

ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸಲ್ಲ: ಹೆಚ್‌ಸಿ ಬಾಲಕೃಷ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?