Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಲ ನೀಡಿತು ಚಾಣಕ್ಯ ಜೋಡಿಯ ತಂತ್ರ – ಗುಜರಾತ್‌ನಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫಲ ನೀಡಿತು ಚಾಣಕ್ಯ ಜೋಡಿಯ ತಂತ್ರ – ಗುಜರಾತ್‌ನಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳೇನು?

Latest

ಫಲ ನೀಡಿತು ಚಾಣಕ್ಯ ಜೋಡಿಯ ತಂತ್ರ – ಗುಜರಾತ್‌ನಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳೇನು?

Public TV
Last updated: December 8, 2022 12:23 pm
Public TV
Share
2 Min Read
amit shah narendra modi
SHARE

ನವದೆಹಲಿ: ಸತತ 7ನೇ ಬಾರಿ ಅಧಿಕಾರಕ್ಕೆ ಏರುವ ಮೂಲಕ ಗುಜರಾತ್‌ನಲ್ಲಿ(Gujarat) ಬಿಜೆಪಿ ಐತಿಹಾಸಿಕ ಸಾಧನೆ ಮಾಡಿದೆ. ಈ ಫಲಿತಾಂಶ ಬರಲು ಮೋದಿ, ಶಾ ಜೋಡಿ ಬಹಳ ಶ್ರಮ ಪಟ್ಟಿತ್ತು.

2024ರ ಲೋಕಸಭಾ ಚುನಾವಣೆಯನ್ನು ಗೆಲ್ಲಬೇಕಾದರೆ ತವರು ರಾಜ್ಯವನ್ನು ಗೆಲ್ಲಲ್ಲೇಬೇಕಿತ್ತು. ಈ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಗೃಹ ಸಚಿವ ಅಮಿತ್‌ ಶಾ(Amit Shah) ಚುನಾವಣೆಗೂ ಒಂದು ವರ್ಷದ ಮೊದಲೇ ಪ್ಲಾನ್‌ ಮಾಡಿದ್ದರು.

narendra modi road show

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯ ಮಾಹಿತಿ ತಿಳಿದ ಮೋದಿ, ಶಾ ಜೋಡಿ ಕಳೆದ ವರ್ಷವೇ ಸಂಪುಟ ಪುನರ್ ರಚನೆ ಮಾಡಿದ್ದರು. ಹಿರಿಯರಿಗೆ ಕೊಕ್‌ ನೀಡಿ ‘ಯಂಗ್ ಕ್ಯಾಬಿನೆಟ್’ ರಚನೆ ಮಾಡಿದ್ದರು.

ಹಿರಿಯ ನಾಯಕರಾದ ನಿತೀನ್ ಪಟೇಲ್, ವಿಜಯ್ ರೂಪಾನಿ ಸೇರಿದಂತೆ ಎಂಟು ಹಿರಿಯರನ್ನು ಕ್ಯಾಬಿನೆಟ್‌ನಿಂದ ತೆಗೆದು ಆದಿವಾಸಿ, ಒಬಿಸಿ, ಪಾಟಿದಾರ್ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಎರಡು ದಶಕಗಳ ಬಳಿಕ ಪಾಟಿದಾರ್ ಸಮುದಾಯಕ್ಕೆ‌ ಸಿಎಂ ಸ್ಥಾನ ಸಿಕ್ಕಿತ್ತು. ಉತ್ತರ ಪ್ರದೇಶದಲ್ಲೂ ಬಿಜೆಪಿ ಸಣ್ಣ ಸಣ್ಣ ಸಮುದಾಯದ ನಾಯಕರಿಗೆ ಮಂತ್ರಿ ಸ್ಥಾನ ಮತ್ತು ಚುನಾವಣೆಯಲ್ಲಿ ಟಿಕೆಟ್‌ ನೀಡಿತ್ತು.  ಈ ತಂತ್ರಗಾರಿಕೆ ಯಶ್ವಸಿಯಾದ ಬೆನ್ನಲ್ಲೇ ಅದನ್ನೂ ಗುಜರಾತ್‌ನಲ್ಲೂ ಅಳವಡಿಸಿದ್ದು ಯಶಸ್ವಿಯಾಗಿದೆ. ಇದನ್ನೂ ಓದಿ: ಆಪ್‌ ಗೆದ್ದರೂ ದೆಹಲಿ ಮೇಯರ್‌ ಹುದ್ದೆ ಬಿಜೆಪಿಗೆ ಸಿಗುತ್ತಾ?

MODI AND JP NADDA

ಪಾಟೀದಾರ್ ಸಮುದಾಯದ ಭೂಪೇಂದ್ರ ಪಟೇಲ್‌ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಪಾಟೀದಾರ್ ಸಮುದಾಯದ ಅಸಮಾಧಾನವನ್ನು ಚಾಣಕ್ಯ ಜೋಡಿ ತಣ್ಣಗೆ ಮಾಡಿತ್ತು.

2017ರಲ್ಲಿ ಬಿಜೆಪಿಗೆ ಸಡ್ಡು ಹೊಡೆದಿದ್ದ ಪಾಟೀದಾರ್ ಚಳವಳಿ ನಾಯಕ ಹಾರ್ದಿಕ್ ಪಟೇಲ್ ಹಾಗೂ ಒಬಿಸಿ ಯುವ ನಾಯಕ ಅಲ್ಪೇಶ್ ಠಾಕೂರ್ ಅವರನ್ನು ಬಿಜೆಪಿಗೆ ಸೇರಿಸಲಾಯಿತು. ಹೋರಾಟ ಮಾಡುವ ನಾಯಕರೇ ಬಿಜೆಪಿ ಸೇರಿದ್ದರಿಂದ ಅವರ ಅಭಿಮಾನಿಗಳು ಸಹಜವಾಗಿಯೇ ಬಿಜೆಪಿ ಪರ ನಿಂತರು, ಹೋರಾಟದ ಕಿಚ್ಚು ಕಡಿಮೆಯಾಯಿತು.

ವಿರೋಧ ವ್ಯಕ್ತವಾದರೂ ಹಿರಿಯರನ್ನು ಕೈ ಬಿಟ್ಟು ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಯಿತು. ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ 27 ರ್‍ಯಾಲಿ ಮಾಡಿದ್ದರು. ಅಷ್ಟೇ ಅಲ್ಲದೇ ಎರಡು ಐತಿಹಾಸಿಕ ರೋಡ್ ಶೋ ಮೂಲಕ ಗುಜರಾತಿಗಳ ಮನಗೆದ್ದಿದ್ದರು.

Narendra Modi Amit Shah 2

ಬಹಳ ಮುಖ್ಯವಾಗಿ 2017ರ ಚುನಾವಣೆಯಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ ಬಹಳ ಕಡಿಮೆ ಮತಗಳ ಅಂತರದಿಂದ ಸೋತಿತ್ತು. ಈ ಕ್ಷೇತ್ರಗಳಲ್ಲಿ ಈ ಬಾರಿ ಜಯ ಸಾಧಿಸಲೇಬೇಕೆಂದು ಪಕ್ಷ ಸಂಘಟನೆ ಮಾಡಿದ್ದು ಫಲ ನೀಡಿದೆ.

ಇಷ್ಟೇ ಅಲ್ಲದೇ ಅಭಿವೃದ್ಧಿ ಕೆಲಸಗಳನ್ನು ಪ್ರಚಾರ ಮಾಡಿತ್ತು. ಮೋದಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್‌ ಅಭಿವೃದ್ಧಿ ಸಮಸ್ಯೆಯಾಗಿತ್ತು. ಸರ್ದಾರ್ ಸರೋವರ ಯೋಜನೆ ನೀರು ತಡವಾಗಿ ಗ್ರಾಮಗಳನ್ನು ತಲುಪಲು ಕಾಂಗ್ರೆಸ್‌ ಕಾರಣ ಎಂದು ಆರೋಪ ಮಾಡಿದ್ದರು.

27 ವರ್ಷಗಳ ಆಡಳಿತದ ಬಳಿಕವೂ ಗೆಲ್ಲವುದು ಬಹಳ ಸುಲಭದ ಮಾತಲ್ಲ. ಆದರೆ ಈಗ 7ನೇ ಬಾರಿ ಅಧಿಕಾರಕ್ಕೆ ಏರಿ ಕಾಂಗ್ರೆಸ್‌ ಪಕ್ಷವನ್ನೇ ಬಿಜೆಪಿ ಬಹುತೇಕ ಹೊಸಕಿ ಹಾಕಿದೆ. ಕಾಂಗ್ರೆಸ್‌ ಮತಗಳನ್ನು ಆಪ್‌ ವಿಭಜಿಸಿದ್ದರಿಂದ ಬಿಜೆಪಿಯ ಗೆಲುವು ಸುಗಮವಾಗಿದೆ.

ದೇಶ ಆಳಬೇಕಾದರೆ ನಾಯಕ ಮೊದಲು ತನ್ನ ರಾಜ್ಯವನ್ನು ಗೆಲ್ಲಬೇಕು. ಪ್ರಧಾನಿ ಮೋದಿ ರಾಜ್ಯವನ್ನು ಗೆದ್ದಿರುವುದು ಮಾತ್ರವಲ್ಲ ಕ್ಲೀನ್‌ ಸ್ವೀಪ್‌ನೊಂದಿಗೆ ಗೆಲ್ಲುವ ಮೂಲಕ 2024ರ ಚುನಾವಣೆಯ ಮೊದಲ ಪರೀಕ್ಷೆಯನ್ನೂ ರ‍್ಯಾಂಕ್‌ನೊಂದಿಗೆ ಗೆದ್ದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Amit Shahbjpgujaratgujarat electionnarendra modipoliticsಅಮಿತ್ ಶಾಗುಜರಾತ್ನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Mobile Video
Bengaluru City

ನನಗೆ ಕ್ಯಾನ್ಸರ್‌, ಸಾಯೋ ಮುನ್ನ ನಿನ್ನ ಬೆತ್ತಲಾಗಿ ನೋಡ್ಬೇಕು – ಶಿಕ್ಷಕಿಯ ವಿಡಿಯೋ ಪಡೆದು ಕಾಮುಕನ ಟಾರ್ಚರ್‌

Public TV
By Public TV
2 minutes ago
Strait of Hormuz 1
Latest

ಇನ್ಮುಂದೆ ಹಾರ್ಮುಜ್‌ ಮೂಲಕ ಸಾಗುವ ಹಡಗುಗಳಿಗೆ ಶುಲ್ಕ ವಿಧಿಸುತ್ತಾ ಇರಾನ್?

Public TV
By Public TV
4 minutes ago
Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
8 hours ago
US Iran Ceasefire Why US Chose Pakistan as Mediator in High Stakes Talks
Latest

Explainer| ದಲ್ಲಾಳಿ ಕೆಲಸಕ್ಕೆ ಪಾಕಿಸ್ತಾನವನ್ನೇ ಟ್ರಂಪ್‌ ಆಯ್ಕೆ ಮಾಡಿದ್ದು ಯಾಕೆ?

Public TV
By Public TV
9 hours ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
9 hours ago
Fish Fry
Latest

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?