ಬೆಂಗಳೂರು: ರಕ್ತಚಂದನ(Red Sandalwood) ದಿಮ್ಮಿಗಳನ್ನು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ ಕೋಟ್ಯಂತರ ರೂಪಾಯಿ ಮೌಲ್ಯದ 1.5 ಟನ್ ರಕ್ತಚಂದನ ದಿಮ್ಮಿಯನ್ನು ವಶ ಪಡಿಸಲಾಗಿದೆ.
ಸಿದ್ಧರಾಜು, ಪ್ರಜ್ವಲ್, ಲೋಕೇಶ್, ದೇವರಾಜ್, ಗೋವಿಂದ ಸ್ವಾಮಿ ಬಂಧಿತ ಆರೋಪಿಗಳು. ಮಹಾಲಕ್ಷ್ಮಿ ಲೇಔಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರ ಕಣ್ತಪ್ಪಿಸಲು ಬೊಲೇರೋ ವಾಹನದಲ್ಲಿ ರಕ್ತಚಂದನ ದಿಮ್ಮಿಗಳ ಮೇಲೆ ಟೊಮೆಟೊ ಬಾಕ್ಸ್ ಹಾಕಿ ಸಾಗಾಟ ಮಾಡುತ್ತಿದ್ದರು.
ಮಂಡ್ಯದ ದೇವಲಾಪುರ ಕಾಡಿನಿಂದ ರಕ್ತಚಂದನ ಮರಗಳನ್ನ ಕಳ್ಳತನ ಮಾಡಿದ್ದ ಗ್ಯಾಂಗ್ ತಮಿಳುನಾಡು ಭಾಗಕ್ಕೆ ಸಾಗಿಸುವ ವೇಳೆ ಅರೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕನ್ನಡದ ಹೆಸರಲ್ಲಿ ರೋಲ್ಕಾಲ್: ಪ್ರೂವ್ ಮಾಡಿದರೆ ನೇಣಿಗೇರುವೆ ಎಂದ ರೂಪೇಶ್ ರಾಜಣ್ಣ
ಆರೋಪಿಗಳ ಪೈಕಿ ಗೋವಿಂದ ಸ್ವಾಮಿ ಮೇಲೆ ಆಂಧ್ರ ಪ್ರದೇಶ, ತಮಿಳುನಾಡು ಭಾಗದಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿವೆ.