Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ಆನೆ ಬಳಿ ರೀಲ್ಸ್‌ ನಿಷೇಧ, ಕಮಾಂಡೋ ಕಾವಲು: ಈಶ್ವರ್ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಸರಾ ಆನೆ ಬಳಿ ರೀಲ್ಸ್‌ ನಿಷೇಧ, ಕಮಾಂಡೋ ಕಾವಲು: ಈಶ್ವರ್ ಖಂಡ್ರೆ

Bengaluru City

ದಸರಾ ಆನೆ ಬಳಿ ರೀಲ್ಸ್‌ ನಿಷೇಧ, ಕಮಾಂಡೋ ಕಾವಲು: ಈಶ್ವರ್ ಖಂಡ್ರೆ

Public TV
Last updated: September 29, 2025 4:56 pm
Public TV
Share
2 Min Read
Eshwar Khandre
SHARE

ಬೆಂಗಳೂರು: ದಸರಾ ಆನೆಗಳ (Dasara Elephants) ಬಳಿ ರೀಲ್ಸ್‌ ಮಾಡುವುದನ್ನು ಸಂಪೂರ್ಣ ನಿಷೇಧಿಸಿದ್ದು, ಆನೆಗಳ ಬಳಿ ಹೋಗದಂತೆ ತಡೆಯಲು ಕಮಾಂಡೋ (Commando) ಬಳಕೆಗೆ ತಿಳಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ.

ಮೈಸೂರು ಅರಮನೆಯಲ್ಲಿಂದು (Mysuru Palace) ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಾವುತರು ಮತ್ತು ಕಾವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ಭೋಜನ ಬಡಿಸಿದ ಬಳಿಕ ಮಾತನಾಡಿದ ಅವರು, ದಸರಾ ಆನೆಗಳ ಸೊಂಡಿಲು, ದಂತ ಹಿಡಿದುಕೊಂಡು ಫೋಟೋ ರೀಲ್ಸ್ (Reels) ಮಾಡಿ ಸಾಮಾಜಿಕ ತಾಣಗಳಲ್ಲಿ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆನೆಗಳನ್ನು ಪಳಗಿಸಿದ್ದರೂ, ಕೆಲವೊಂದು ಸಂದರ್ಭದಲ್ಲಿ ಪ್ರಾಣಿಗಳ ವರ್ತನೆಯನ್ನು ಊಹಿಸುವುದೂ ಅಸಾಧ್ಯ. ಹೀಗಾಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಆನೆಗಳ ಬಳಿ ಯಾರಿಗೂ ಬಿಡದಂತೆ ಸೂಚನೆ ನೀಡಲಾಗಿದೆ. ಆದರೂ ಕೆಲವರು ಫೋಟೋ, ರೀಲ್ಸ್ ಮಾಡಿದ್ದು ಇಂತಹವರಿಗೆ ನಿರ್ದಾಕ್ಷಿಣ್ಯವಾಗಿ ದಂಡ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

Dasara Elephants

 

ಕಳೆದ 18ರಂದು ಮಹಿಳೆಯೊಬ್ಬರು ಸಿಬ್ಬಂದಿಯ ಕಣ್ತಪ್ಪಿಸಿ ರೀಲ್ಸ್ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯನ್ನು ನೀಡಲಾಗಿದೆ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪವಾಗಿದೆ ಎಂಬುದನ್ನು ಪುಷ್ಟೀಕರಿಸಿದ್ದು, ಅಧಿಕಾರಿ, ಸಿಬ್ಬಂದಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: Chitradurga | ಸಮೀಕ್ಷೆ ಕಾರ್ಯಕ್ಕೆ ಗೈರು – 68 ಸಿಬ್ಬಂದಿಗೆ ನೋಟಿಸ್

ಆನೆ ಪಳಗಿಸುವ ಕಲೆಯನ್ನು ವಂಶಪಾರಂಪರ್ಯವಾಗಿ ಕರಗತ ಮಾಡಿಕೊಂಡಿರುವ ಮಾವುತರು ಹಾಗೂ ಕಾವಾಡಿಗಳು ಪುಂಡಾನೆ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಇಡೀ ದೇಶದಲ್ಲಿಯೇ ಆನೆಗಳನ್ನು ಪಳಗಿಸುವಲ್ಲಿ ಕರ್ನಾಟಕದ ಮಾವುತ ಮತ್ತು ಕಾವಾಡಿಗಳಿಗೆ ವಿಶೇಷ ಕೌಶಲ್ಯವಿದೆ. ಹೀಗಾಗಿಯೇ ನೆರೆಯ ಆಂಧ್ರಪ್ರದೇಶ, ಗೋವಾ ಮೊದಲಾದ ರಾಜ್ಯಗಳು ಸಹ ಕುಮ್ಕಿ ಆನೆಯ ಸಹಾಯಕ್ಕೆ ರಾಜ್ಯಕ್ಕೆ ಮನವಿ ಮಾಡುತ್ತವೆ ಎಂದು ತಿಳಿಸಿದರು. ಇದನ್ನೂ ಓದಿ: ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

ಮಾವುತರು ಮತ್ತು ಕಾವಾಡಿಗಳಿಗೆ ಆನೆಗಳನ್ನು ಸೆರೆ ಹಿಡಿಯುವ ಮತ್ತು ಪಳಗಿಸುವ, ನಿಯಂತ್ರಿಸುವ, ಪಾಲನೆ ಹಾಗೂ ಪೋಷಣೆ ಮಾಡುವ ಕಲೆ ರಕ್ತಗತವಾಗಿ ಬಂದಿದೆ. ಈ ಕಲೆಯನ್ನು ಪಠ್ಯ ಪುಸ್ತಕದಿಂದ ಅಥವಾ ಶಾಲಾ-ಕಾಲೇಜಿನಲ್ಲಿ ಕಲಿ ಸಲುಸಾಧ್ಯವಿಲ್ಲ. ನಮ್ಮ ರಾಜ್ಯದ ಮಾವುತರು ಹಾಗೂ ಕಾವಾಡಿಗಳಿಗೆ ವಂಶಪಾರಂಪರ್ಯವಾಗಿ ಕೌಶಲ್ಯವಿದ್ದರೂ, ಅವರಿಗೆ ತಜ್ಞರಿಂದ ವೃತ್ತಿ ತರಬೇತಿಯನ್ನೂ ಕೊಡಿಸಲಾಗುತ್ತಿದ್ದು, ಇದು ಅವರ ನೈಪುಣ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಮಾವುತರು, ಕಾವಾಡಿಗಳ ನ್ಯಾಯಯುತ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ಭರವಸೆ ನೀಡಿದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ಮೈಸೂರು ದಸರಾ ಜಂಬೂಸವಾರಿಯಲ್ಲಿ 8 ಬಾರಿ ಅಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆಹಾಕುತ್ತಾ ಜನಮನ ಗೆದ್ದಿದ್ದ ಅರ್ಜುನ ಆನೆ ಹಾಸನ ಜಿಲ್ಲೆ ಯಸಳೂರು ಬಳಿ ಆನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾಗಿದ್ದು, ಸರ್ಕಾರ ಅರ್ಜುನ ಇದ್ದ ನಾಗರಹೊಳೆಯ ಬಳ್ಳೆ ಮತ್ತು ಯಸಳೂರಿನಲ್ಲಿ ಸ್ಮಾರಕ ನಿರ್ಮಿಸಿದೆ. ಈಗಾಗಲೇ ಬಳ್ಳೆಯ ಸ್ಮಾರಕವನ್ನು ಉದ್ಘಾಟಿಸಲಾಗಿದ್ದು, ಈ ತಿಂಗಳಲ್ಲಿ ಯಸಳೂರಿನಲ್ಲೂ ಅರ್ಜುನ ಆನೆ ಸ್ಮಾರಕ ಉದ್ಘಾಟಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ಮಂಗಳವಾರ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

TAGGED:bengaluruCommandoeshwar khandremysurumysuru dasaraReelsಈಶ್ವರ್ ಖಂಡ್ರೆಕಮಾಂಡೋದಸರಾ ಆನೆಬೆಂಗಳೂರುಮೈಸೂರುಮೈಸೂರು ದಸರಾರೀಲ್ಸ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
7 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
19 minutes ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
25 minutes ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
55 minutes ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
1 hour ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?