ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ

Public TV
2 Min Read
Mukul Rohtagi aryan

ಮುಂಬೈ: ಆರ್ಯನ್ ಖಾನ್ ಬಳಿಯಿಂದ ಯಾವುದೇ ಮಾದಕ ವಸ್ತುಗಳನ್ನು ಜಪ್ತಿ ಮಾಡಿಲ್ಲ, ಅವರು ಡ್ರಗ್ಸ್ ಸೇವಿಸಿದ್ದರು ಎನ್ನುವುದಕ್ಕೆ ಯಾವುದೇ ವೈದ್ಯಕೀಯ ದಾಖಲೆಗಳಿಲ್ಲ ಹೀಗಾಗಿ ಅವರನ್ನು ಬಂಧಿಸುವ ಅಗತ್ಯ ಇಲ್ಲ ಎಂದು ಮಾಜಿ ಅಟಾರ್ನಿ ಜನರಲ್, ಹಿರಿಯ ವಕೀಲ ಮುಕುಲ್ ರೊಹ್ಟಗಿ ವಾದಿಸಿದ್ದಾರೆ.

ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಕೋರಿ ಮುಂಬೈ ಹೈಕೋರ್ಟ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ವೇಳೆ ಮುಕುಲ್ ರೊಹ್ಟಗಿ ಜಾಮೀನು ನೀಡುವಂತೆ ಮನವಿ ಮಾಡಿದರು.

aryan 4

ಎನ್‍ಸಿಬಿ ವಿಚಾರಣೆ ವೇಳೆ ಆರ್ಯನ್ ಖಾನ್ ನಿಂದ ವಶಪಡಿಸಿಕೊಂಡಿರುವ ವಾಟ್ಸಪ್‌  ಚಾಟ್‍ಗೂ ಇಡೀ ಇಡೀ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಮತ್ತು ಎನ್‍ಸಿಬಿ ತನಿಖಾಧಿಕಾರಿ ಸಮೀರ್ ವಾಂಖೆಡೆ, ಎನ್‍ಸಿಪಿಯ ನವಾಬ್ ಮಲಿಕ್ ಮತ್ತು ಪ್ರಕರಣದ ಸಾಕ್ಷಿ ಪ್ರಭಾಕರ್ ಸೈಲ್ ಅವರ ವಿರುದ್ಧದ ಆರೋಪಕ್ಕೂ ಆರ್ಯನ್ ಖಾನ್‍ಗೂ ಯಾವುದೇ ಸಂಬಂಧವಿಲ್ಲ ಎಂದು ರೊಹ್ಟಗಿ ಹೇಳಿದರು. ಇದನ್ನೂ ಓದಿ: ಬೆತ್ತಲಾಗಿ ಕಳ್ಳತನ – ಅಂತರಾಜ್ಯ ಕಳ್ಳ ದಂಪತಿ ಅರೆಸ್ಟ್

ಆದರೆ ಆರ್ಯನ್ ಖಾನ್ ಪ್ರಭಾವಿ ವ್ಯಕ್ತಿಯಾಗಿದ್ದು, ವಿಚಾರಣೆ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ, ಅವರಿಗೆ ಜಾಮೀನು ನೀಡಿದರೇ ಸಾಕ್ಷಿಗಳ ಪ್ರಭಾವ ಬೀರಬಹುದು ಈ ಹಿನ್ನಲೆ ಜಾಮೀನು ನೀಡದಂತೆ ಎನ್‍ಸಿಬಿ ಪರ ವಕೀಲರು ವಾದ ಮಂಡಿಸಿದರು.

shah rukha khan aryan 4 1

ಇದಕ್ಕೆ ಆಕ್ಷೇಪಿಸಿದ ಮುಕುಲ್ ರೊಹ್ಟಗಿ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಸಚಿವಾಲಯ ತರಲು ಹೊರಟಿರುವ ತಿದ್ದುಪಡಿಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸರ್ಕಾರವೇ ಮಾದಕ ವಸ್ತುಗಳ ಸೇವನೆಯನ್ನು ಅಧರಿಸಿ ಜೈಲು ಶಿಕ್ಷೆ ನೀಡುವುದು ವ್ಯವಸ್ಥೆ ಬದಲಿಸಲು ಹೊರಟಿದ್ದು ಆರ್ಯನ್ ಖಾನ್ ಜಾಮೀನು ನಿರಾಕರಿಸುವಂತಿಲ್ಲ ಎಂದರು.

ನಟಿ ರಾಗಿಣಿ ದ್ವಿವೇದಿ ಪ್ರಕರಣವನ್ನು ಉಲ್ಲೇಖಿಸಿದ ಅವರು, ಪಾರ್ಟಿ ಮತ್ತು ಇತರ ಕಾರ್ಯಕ್ರಮದಲ್ಲಿ ರಾಗಿಣಿ ಅವರ ಮೇಲೆ ಡ್ರಗ್ಸ್ ಪೂರೈಸಿದ ಆರೋಪ ಇದ್ದರೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಕಾರಣಕ್ಕೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ragini 1 medium

ಮಾದಕ ದ್ರವ್ಯಗಳ ಅಕ್ರಮ ಸಾಗಾಟಕ್ಕೆ ಆರ್ಯನ್ ಹಣಕಾಸು ಒದಗಿಸಿದ್ದಾನೆ ಎಂಬುದನ್ನು ತೋರಿಸಲು ಯಾವುದೇ ವಸ್ತುವಿಲ್ಲ. ಆರ್ಯನ್ ಖಾನ್ ಸ್ನೇಹಿತರ ಬಳಿಕ ಸಣ್ಣ ಪ್ರಮಾಣದ ಮಾದಕ ವಸ್ತುಗಳು ಲಭ್ಯವಾಗಿದೆ ಹಾಗಂತ ಅವರನ್ನು ಶಿಕ್ಷಿಸುವುದಲ್ಲ ಅವರಿಗೆ ತಪ್ಪು ತಿದ್ದಿಕೊಳ್ಳಲು ಅವಕಾಶ ಇದೆ ಎಂದರು. ಅಲ್ಲದೇ ಪ್ರಕರಣಕ್ಕೂ ಆರ್ಯನ್ ಖಾನ್ ಸಂಬಂಧ ಇಲ್ಲದ ಕಾರಣ ಅವರನ್ನು ಪ್ರಕರಣದಿಂದ ದೂರ ಇಡುವಂತೆ ಕೋರ್ಟ್ ಗೆ ಮನವಿ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮೈನಾರಿಟಿ ವೋಟಿಗಾಗಿ ಜೊಲ್ಲು ಸುರಿಸುತ್ತಾರೆ – ಅರಗ ಜ್ಞಾನೇಂದ್ರ

ಆರ್ಯನ್ ಖಾನ್ ಪರ ವಕೀಲರ ವಾದ ಆಲಿಸಿದ ಪೀಠ ಕೋರ್ಟ್ ಸಮಯ ಅಂತ್ಯವಾದ ಹಿನ್ನಲೆ ನಾಳೆ ಮಧ್ಯಾಹ್ನದ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿ ವಿಚಾರಣೆ ಮುಂದೂಡಿದೆ.

Share This Article
Leave a Comment

Leave a Reply

Your email address will not be published. Required fields are marked *