Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸರ್ಕಾರದ ಬಾಕಿ 669.59 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಿಡುಗಡೆ ಮಾಡಿ: ಶಾಸಕ ದಿನೇಶ್‌ ಗೂಳಿಗೌಡ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಸರ್ಕಾರದ ಬಾಕಿ 669.59 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಿಡುಗಡೆ ಮಾಡಿ: ಶಾಸಕ ದಿನೇಶ್‌ ಗೂಳಿಗೌಡ ಮನವಿ

Bengaluru City

ಬಿಜೆಪಿ ಸರ್ಕಾರದ ಬಾಕಿ 669.59 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಿಡುಗಡೆ ಮಾಡಿ: ಶಾಸಕ ದಿನೇಶ್‌ ಗೂಳಿಗೌಡ ಮನವಿ

Public TV
Last updated: June 7, 2023 8:39 pm
Public TV
Share
3 Min Read
dinesh guligowda
SHARE

– ಕಳೆದ 7 ತಿಂಗಳಿಂದ ಬಾಕಿ ಉಳಿಸಿಕೊಂಡಿದ್ದ ಹಿಂದಿನ ಸರ್ಕಾರ
– ತುರ್ತು ಹಣ ಬಿಡುಗಡೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ರೈತರಿಗೆ ಸುಮಾರು 669.59 ಕೋಟಿ ರೂಪಾಯಿ ಹಾಲಿನ ಪ್ರೋತ್ಸಾಹಧನವು (Milk Subsidy Price) ಬಾಕಿ ಇದ್ದು ಇದನ್ನು ಕೂಡಲೇ ಬಿಡುಗಡೆ ಮಾಡಬೇಕು. ಈ ಮೂಲಕ ರೈತರ ತುರ್ತು ಅವಶ್ಯಕತೆಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ (Dinesh Guligowda) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಮನವಿ ಮಾಡಿದರು.

ಇದು ಕೃಷಿ ಚಟುವಟಿಕೆಯ ಕಾಲವಾಗಿದ್ದು, ರೈತರಿಗೆ ಅನೇಕ ಖರ್ಚುಗಳು ಇರುತ್ತವೆ. ಮಕ್ಕಳ ಶೈಕ್ಷಣಿಕ ವರ್ಷವೂ ಆರಂಭವಾಗಿರುವುದರಿಂದ ಅವರ ಶೈಕ್ಷಣಿಕ ಶುಲ್ಕ, ಪುಸ್ತಕ ಇನ್ನಿತರ ಖರ್ಚುಗಳು ಇರುತ್ತವೆ. ಇನ್ನು ಮೇವು, ಪಶು ಆಹಾರ ಕೊಳ್ಳಬೇಕಿರುತ್ತದೆ. ಹೀಗಾಗಿ ತುರ್ತಾಗಿ ಈ ಹಣವನ್ನು ಬಿಡುಗಡೆ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ

NANDINI DAIRY FARMING MILK 1

ಮನವಿ ಪತ್ರದಲ್ಲೇನಿದೆ?
ರಾಜ್ಯ ಸರ್ಕಾರ ಹೈನುಗಾರರಿಗೆ ಅನುಕೂಲವಾಗಲು ರೈತರಿಗೆ ಪ್ರತಿ ಲೀಟರ್‌ ಹಾಲಿಗೆ 05 ರೂ. ಪ್ರೋತ್ಸಾಹಧನ ನೀಡುತ್ತಾ ಬಂದಿದೆ. ಇದರಿಂದ ಹೈನುಗಾರರು ಉತ್ಪಾದನೆ ಮಾಡಿದ ಹಾಲಿಗೆ ಲಾಭದಾಯಕ ದರ ಸಿಕ್ಕಿದಂತಾಗುತ್ತದೆ. ಅಲ್ಲದೆ, ನೇರವಾಗಿ ರೈತರ ಖಾತೆಗಳಿಗೆ ಹಣ ಜಮಾ ಆಗುವುದರಿಂದ ಮೇವು, ಪಶು ಆಹಾರ ಕೊಳ್ಳಲು ಈ ಪ್ರೋತ್ಸಾಹಧನವು ಅನುಕೂಲವಾಗುತ್ತದೆ. ಆದರೆ, ಹಿಂದಿನ ಸರ್ಕಾರ ಕಳೆದ 07 ತಿಂಗಳುಗಳಿಂದ ಹೈನುಗಾರರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಿರುವುದಿಲ್ಲ. ಇದರಿಂದಾಗಿ ಹೈನುಗಾರರಿಗೆ ತೊಂದರೆಯಾಗುತ್ತಿದೆ.

ಈಗ ಸುಮಾರು 669.59 ಕೋಟಿ ರೂ. ಪ್ರೋತ್ಸಾಹಧನವನ್ನು ಸರ್ಕಾರ ಹೈನುಗಾರರಿಗೆ ವಿತರಿಸಲು ಬಾಕಿ ಇದೆ. ಪ್ರತಿ ಹೈನುಗಾರರಿಗೆ ಕನಿಷ್ಠ 5 ಸಾವಿರದಿಂದ 30 ಸಾವಿರವರೆಗೂ ಪ್ರೋತ್ಸಾಹಧನ ಬರುವುದು ಬಾಕಿ ಉಳಿದುಕೊಂಡಿದೆ. ಪ್ರತಿ ತಿಂಗಳು ಸರ್ಕಾರ ರಾಜ್ಯದ ಎಲ್ಲ ಹೈನುಗಾರರಿಗೆ ಸುಮಾರು 109 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ.

 

mandya manmul mega milk dairy 1

ಸಾಮಾನ್ಯ ವರ್ಗದ ಹೈನುಗಾರರಿಗೆ 2022 ರ ನವೆಂಬರ್‌ನಲ್ಲಿ 109.90 ಕೋಟಿ ರೂ, ಡಿಸೆಂಬರ್‌-109.81 ಕೋಟಿ, 2023ರ ಜನವರಿಯಲ್ಲಿ 107.89 ಕೋಟಿ, ಫೆಬ್ರವರಿ-93.56, ಮಾರ್ಚ್‌-93.89 ಕೋಟಿ, ಏಪ್ರಿಲ್‌-93.67 ಕೋಟಿ ರೂಪಾಯಿಗಳನ್ನು ನೀಡುವುದು ಬಾಕಿ ಇದೆ. ಎಸ್‌ಸಿ ವರ್ಗಕ್ಕೆ 2023ರ ಮಾರ್ಚ್‌ರಲ್ಲಿ-3.08 ಕೋಟಿ ರೂ, ಏಪ್ರಿಲ್‌-3.17 ಕೋಟಿ ರೂ. ಸಹಾಯಧನ ವಿತರಣೆ ಬಾಕಿ ಇದೆ. ಹಾಗೆಯೇ ಕಳೆದ ಹಿಂದಿನ ವರ್ಷಗಳ ಪೈಕಿ ಸಾಮಾನ್ಯ ವರ್ಗದವರಿಗೆ 2019-20 ನೇ ಸಾಲಿನಲ್ಲಿ 12.51 ಕೋಟಿ ರೂ, 2020-21 ನೇ ಸಾಲಿನಲ್ಲಿ 9.64 ಕೋಟಿ ರೂ. 2021-22 ನೇ ಸಾಲಿನಲ್ಲಿ-22.37 ಕೋಟಿ ರೂ. ಸೇರಿದಂತೆ ಒಟ್ಟಾರೆ ಕಳೆದ ಆರ್ಥಿಕ ವರ್ಷದಲ್ಲಿ 624.06 ಕೋಟಿ ರೂ ಹಾಗೂ ಹಿಂದಿನ ವರ್ಷಗಳ ಬಾಕಿ 45.53 ಕೋಟಿ ರೂ. ಸೇರಿ ಒಟ್ಟು 669.59 ಕೋಟಿ ರೂಪಾಯಿಯಷ್ಟು ಸರ್ಕಾರದಿಂದ ಹೈನುಗಾರರಿಗೆ ಸಂದಾಯವಾಗಬೇಕಿದೆ.

ಇದರಲ್ಲಿ ಮಂಡ್ಯ ಜಿಲ್ಲೆಗೆ ಒಟ್ಟು 72.34 ಕೋಟಿ ರೂಗಳು ಹೈನುಗಾರರಿಗೆ ಸಂದಾಯವಾಗುವುದು ಬಾಕಿ ಇದೆ. 2022ರ ನವೆಂಬರ್‌ನಲ್ಲಿ 12.40 ಕೋಟಿ ರೂ, ಡಿಸೆಂಬರ್‌-12.88 ಕೋಟಿ ರೂ, 2023 ಜನವರಿಯಲ್ಲಿ-12.68 ಕೋಟಿ ರೂ, ಫೆಬ್ರವರಿ-10.90 ಕೋಟಿ ರೂ., ಮಾರ್ಚ್‌-11.92 ಕೋಟಿ ರೂ., ಏಪ್ರಿಲ್‌-11.56 ಕೋಟಿ ರೂ. ಪ್ರೋತ್ಸಾಹಧನ ನೀಡುವುದು ಬಾಕಿ ಇದೆ.

ವಿವಿಧ ಕಾರಣಗಳಿಂದ ಪಶು ಆಹಾರ, ಮೇವಿನ ದರ ಏರಿಕೆಯಾಗಿದೆ. ಕೆಲವೆಡೆ ಗಂಟು ರೋಗ ಜಾನುವಾರುಗಳಿಗೆ ಬಾಧಿಸಿ, ಹಾಲಿನ ಇಳುವರಿ ಕೂಡ ಕಡಿಮೆಯಾಗಿದೆ, ಕೆಲವು ಜಾನುವಾರುಗಳು ಮೃತಪಟ್ಟಿವೆ. ಇದರಿಂದ ಹೈನುಗಾರರು ತೀರ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಬಾಕಿ ಇರುವ ಪ್ರೋತ್ಸಾಹಧನವನ್ನು ಸರ್ಕಾರ ಬಿಡುಗಡೆ ಮಾಡಿದಲ್ಲಿ ಹೈನುಗಾರರಿಗೆ ನೆರವಾಗುವುದು. ಮಳೆಗಾಲದಲ್ಲಿ ಪಶು ಆಹಾರ ಖರೀದಿಸಿ ದಾಸ್ತಾನು ಮಾಡಲು, ಅಲ್ಲದೆ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಪಾವತಿಗೆ, ಅಥವಾ ದೈನಂದಿನ ಇತರ ಖರ್ಚುಗಳಿಗೆ ಅನುಕೂಲವಾಗಲಿದೆ. ರಾಜ್ಯದ ಹೈನುಗಾರರ ಹಿತ ದೃಷ್ಟಿಯಿಂದ ಈ ಪ್ರೋತ್ಸಹಧನವನ್ನು ಅತಿ ಶೀಘ್ರವಾಗಿ ಬಿಡುಗಡೆ ಮಾಡಬೇಕೆಂದು ರೈತ ಸಮೂಹದ ಪರವಾಗಿ ಶಾಸಕ ದಿನೇಶ್‌ ಗೂಳಿಗೌಡ ಅವರು ಮನವಿ ಮಾಡಿದ್ದಾರೆ.

TAGGED:bjpcongressdairydinesh guligowdafarmersಕಾಂಗ್ರೆಸ್ದಿನೇಶ್ ಗೂಳಿಗೌಡಬಿಜೆಪಿಹೈನುಗಾರಿಕೆ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
59 minutes ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
1 hour ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
1 hour ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
2 hours ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
2 hours ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?