ರಾಜೀವ್‌ಗಾಂಧಿ ಹತ್ಯೆ ಕೇಸ್ – ರೀಲಿಸ್ ಆದ 6 ಮಂದಿಯಲ್ಲಿ ನಾಲ್ವರು ಗಡಿಪಾರು

Public TV
2 Min Read
Nalini Murugan

ನವದೆಹಲಿ/ಚೆನ್ನೈ: ರಾಜೀವ್‌ಗಾಂಧಿ ಗಾಂಧಿ ಹತ್ಯೆ (Rajiv Gandhi Murder Case) ಪ್ರಕರಣದಲ್ಲಿ ದೋಷಿಗಳಾಗಿದ್ದ 6 ಮಂದಿ 31 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾರೆ. ಆದರೆ ಬಿಡುಗಡೆಯಾದ 6 ಮಂದಿ ಪೈಕಿ ನಾಲ್ವರು ಗಡಿಪಾರು ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಮುಂದಿನ 10 ದಿನಗಳಲ್ಲಿ ಆದೇಶ ಪಡೆದು ಗಡಿಪಾರು ಆಗಲಿದ್ದಾರೆ.

Rajiv Gandhi

ಸುಪ್ರೀಂ ಕೋರ್ಟ್ (Supreme Court) ಆರೋಪಿಗಳ ಶಿಕ್ಷೆಯನ್ನು ಕಡಿತಗೊಳಿಸಿದ್ದರಿಂದಾಗಿ ನವೆಂಬರ್ 12ರಂದು ದೋಷಿಗಳನ್ನೂ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಆ ಬಳಿಕ ತಿರುಚ್ಚಿ ವಿಶೇಷ ಶಿಬಿರದಲ್ಲಿ (Trichy Special Camp) ಗಡಿಪಾರು ಮಾಡಲು ನಿರ್ಧರಿಸಿದ್ದು, ಅವರು ಹೋಗಲು ಬಯಸುವ ದೇಶಗಳಿಗೆ ಕಳುಹಿಸಿಕೊಡಲು ನಿರ್ಣಯ ಕೈಗೊಳ್ಳಲಾಗಿದೆ. ವಿಶೇಷ ಶಿಬಿರ ಅಂದರೆ, ದೇಶದ ನೆಲದಲ್ಲಿ ಇದ್ದುಕೊಂಡೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಪ್ರಜೆಗಳನ್ನು ಗಡಿಪಾರು ಮಾಡುವವರೆಗೆ ಇರಿಸುವ ಸ್ಥಳ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆ – ಜೀವಾವಧಿ ಶಿಕ್ಷೆಗೊಳಗಾದ 6 ಮಂದಿಯ ಬಿಡುಗಡೆಗೆ ಸುಪ್ರೀಂ ಆದೇಶ

Nalini Sriharan

ರಾಬರ್ಟ್ ಪಾಯಸ್ ಉಪವಾಸ ಸತ್ಯಾಗ್ರಹ ನಡೆಸಲು ಯೋಜನೆ ರೂಪಿಸಿದ್ದರು. ಈ ವೇಳೆ ವಿಶೇಷ ಶಿಬಿರಕ್ಕೇ ಭೇಟಿ ನೀಡಿದ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಸಮಸ್ಯೆ ಬಗೆಹರಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ವಿದೇಶಗಳಲ್ಲಿ ಪೌರತ್ವ ದೃಢೀಕರಿಸಿದ ನಂತರ ಗಡಿಪಾರು ಮಾಡಲಾಗುತ್ತದೆ. ಅವರನ್ನು ಭೇಟಿ ಮಾಡಲು ರಕ್ತಸಂಬಂಧಿಗಳಿಗೆ ಮಾತ್ರ ಅವಕಾಶವಿರಲಿದೆ. ಆದರೆ ದೋಷಿಗಳಾಗಿದ್ದವರು ಗಡಿಪಾರು ವೇಳೆ ಮೊಬೈಲ್‌ಫೋನ್‌ಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

Supreme Court 1

ಸಂತನ್ ಶ್ರೀಲಂಕಾಗೆ (SriLanka) ಹೋಗುವುದಾಗಿ ಹೇಳಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಿದೇಶಿ ಪ್ರಾದೇಶಿಕ ನೋಂದಣಾಧಿಕಾರಿಗಳು ಶ್ರೀಲಂಕಾ ರಾಯಭಾರ ಕಚೇರಿಗೆ (Sri Lankan Embassy) ಮಾಹಿತಿ ನೀಡಿದ್ದಾರೆ. ಅವರು ತಮ್ಮ ಪೌರತ್ವ (Citizenship) ದೃಢೀಕರಿಸಿದ ನಂತರ, ನಾವು ಸಂತನ್‌ನನ್ನು ಗಡೀಪಾರು ಮಾಡುತ್ತೇವೆ. 10 ದಿನಗಳಲ್ಲಿ ಗಡಿಪಾರು ಆದೇಶ ಸಿಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗಡಿಪಾರಾಗುತ್ತಿರುವ ನಳಿನಿ ಮುರುಗನ್ ತಮ್ಮ ಮಗಳು ಹರಿತಾ ವಾಸಿಸುವ ದೇಶಕ್ಕೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಸಂತನ್ ಶ್ರೀಲಂಕಾಗೆ ಹೋಗಲು ನಿರ್ಧರಿಸಿದ್ದಾರೆ. ಉಳಿದ ಇಬ್ಬರು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಕೇಸ್‌ – 30 ವರ್ಷಗಳ ನಂತರ ನಳಿನಿ ಶ್ರೀಹರನ್‌ ಸೇರಿ 3 ಅಪರಾಧಿಗಳು ರಿಲೀಸ್‌

Rajiv Gandhi Murder Case Convicts

ಏನಿದು ಪ್ರಕರಣ?
1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಆರ್ಪಿ ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು. `ಅಪರಾಧಿಗಳು ತೃಪ್ತಿದಾಯಕ ನಡವಳಿಕೆ ತೋರಿದ್ದಾರೆ. ಪದವಿಗಳನ್ನು ಪಡೆದಿದ್ದು, ಪುಸ್ತಕಗಳನ್ನು ಬರೆದಿದ್ದಾರೆ. ಸಮಾಜ ಸೇವೆಯಲ್ಲಿ ಭಾಗವಹಿಸಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹತ್ಯೆ ಪ್ರಕರಣದಲ್ಲಿ ದೋಷಿಗಳಾಗಿದ್ದ 6 ಮಂದಿಯನ್ನು ಬಿಡುಗಡೆಗೊಳಿಸಿದೆ.

ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕ್ಯಾಬಿನೆಟ್ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ರಾಜ್ಯಪಾಲರು ಬದ್ಧರಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು. ಪ್ರಸಕ್ತ ವರ್ಷದ ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್‌ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *