ಒಸಿಐ ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ಗೆ (Chetan) ಹೈಕೋರ್ಟ್ನಿಂದ (High Court) ಈ ಹಿಂದೆ ಷರತ್ತುಬದ್ಧ ರಿಲೀಫ್ (Relief) ದೊರೆತಿತ್ತು. ಸಾಗರೋತ್ತರ ಭಾರತೀಯ ಪ್ರಜೆ ಕಾರ್ಡ್ ರದ್ದುಗೊಳಿಸಿದ್ದ ಆದೇಶದ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ಶುಕ್ರವಾರ ವಿಸ್ತರಿಸಿದೆ. ಹಾಗಾಗಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ನಿಂದ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಚೇತನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದ್ದಲ್ಲದೇ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದೆ. ಇದನ್ನೂ ಓದಿ:‘ಘೋಸ್ಟ್’ ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ
ಚೇತನ್ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ (Central Government) ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು.
ಆದರೆ ಚೇತನ್ ಪರ ವಕೀಲರು, ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.