Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿ.ಕೆ.ಶಿವಕುಮಾರ್‌ಗೆ ರಿಲೀಫ್;‌ ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್

Public TV
Last updated: November 29, 2023 1:44 pm
Public TV
Share
4 Min Read
DKSHI 4 e1698465996919
SHARE

ಬೆಂಗಳೂರು: ಡಿ.ಕೆ.ಶಿವಕುಮಾರ್‌ ವಿರುದ್ಧದ ಪ್ರಕರಣವನ್ನು ಸಿಬಿಐ (CBI) ತನಿಖೆ ವಹಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಆ ಮೂಲಕ ಡಿ.ಕೆ.ಶಿವಕುಮಾರ್‌ಗೆ (D.K.Shivakumar) ಬಿಗ್‌ ರಿಲೀಫ್‌ ಸಿಕ್ಕಿದೆ.

ಬುಧವಾರ ಹೈಕೋರ್ಟ್‌ನಲ್ಲಿ (Karnataka High Court) ಡಿಸಿಎಂ ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆ ನಡೆಯಿತು. ಸಿಜೆ ಪಿ.ಬಿ.ವರಾಲೆ, ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ಇದನ್ನೂ ಓದಿ: ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ

HIGH COURT

ವಿಚಾರಣೆ ವೇಳೆ ಸರ್ಕಾರದ ಆದೇಶವನ್ನು ಎಜಿ ಶಶಿಕಿರಣ್‌ ಶೆಟ್ಟಿ ಅವರು ಹೈಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಸಿಬಿಐ ಪರ ಪ್ರಸನ್ನ ಕುಮಾರ್‌ ಹಾಗೂ ಡಿ.ಕೆ.ಶಿವಕುಮಾರ್‌ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಹಾಜರಿದ್ದರು.

ಸಿಬಿಐಗೆ ಅನುಮತಿ ನೀಡಿರುವ ಅನುಮೋದನೆ ಹಿಂಪಡೆಯಲಾಗಿದೆ ಎಂದು ಮನು ಸಿಂಘ್ವಿ ಕೋರ್ಟ್‌ ಗಮನಕ್ಕೆ ತಂದರು. ಸರ್ಕಾರದ ಆದೇಶ ಪ್ರತಿಯನ್ನು ಓದಿದ ಹೈಕೋರ್ಟ್‌, ನೀವು ಈಗ ಹೊಸ ತೀರ್ಮಾನ ತೆಗೆದುಕೊಂಡು ಬಂದಿದ್ದೀರಿ. ಇದು ಕಾನೂನುಬದ್ಧವಾಗಿದ್ಯಾ ಎಂದು ಸಿಜೆ ಪ್ರಶ್ನಿಸಿದರು. ಈ ಹಿಂದೆ ರಾಜ್ಯ ಸರ್ಕಾರದ ಅನುಮತಿ ಇರಲಿಲ್ಲ. ರಾಜ್ಯ ಸರ್ಕಾರ ಕೆಲವೊಂದು ನಿಯಮ ಉಲ್ಲಂಘನೆ ಮಾಡಿದೆ ಎಂದು ಶಶಿಕಿರಣ್‌ ಶೆಟ್ಟಿ ಜೊತೆ ಬಂದಿದ್ದ ಕಪಿಲ್‌ ಸಿಬಲ್‌ ವಾದಿಸಿದರು.

d.k.shivakumar

ಒಂದು ಪಕ್ಷ ಅಧಿಕಾರ ಹೊಂದಿರಬಹುದು. ‘ಬಿ’ ಪಕ್ಷ ಅಧಿಕಾರಕ್ಕೆ ಬರಬಹುದು. ಈ ರೀತಿ ಪದೇ ಪದೆ ಆದರೆ, ಇದು ಆಡಳಿತಕ್ಕೆ ಅಡ್ಡಿ ಉಂಟು ಮಾಡುವುದಿಲ್ಲವೇ? ಪ್ರತಿ ಪಕ್ಷ ಬದಲಾದಾಗ ಈ ರೀತಿ ಆದೇಶ ಮಾಡಿದರೆ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲವೇ ಎಂದು ಹೈಕೋರ್ಟ್‌ ಪ್ರಶ್ನಿಸಿತು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಸರ್ಕಾರ ಕಾನೂನುಬದ್ಧವಾಗಿ ಈ ಪ್ರಕರಣ ವಾಪಸ್‌ ಪಡೆದುಕೊಂಡಿದೆ ಎಂದು ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಆದರೆ ಸಿಬಿಐ ಪರ ವಕೀಲರು ಸರ್ಕಾರದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರದ ಆದೇಶ ಈ ಹಂತದಲ್ಲಿ ಅಸಮಂಜಸ ಎಂದು ಸಿಬಿಐ ಪರ ವಕೀಲರು ಹೇಳಿದರು.

ಈಗಾಗಲೇ ಸರ್ಕಾರ ಪ್ರಕರಣ ವಾಪಸ್‌ ಪಡೆದಿದೆ. ಈ ಪ್ರಕರಣದಲ್ಲಿ ಹೈಕೋರ್ಟ್‌ ಅರ್ಜಿ ವಿಚಾರಣೆ ಅನೂರ್ಜಿತ. ಈ ಸಂದರ್ಭದಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬೇಕಿಲ್ಲ ಎಂದು ಡಿಕೆಶಿ ಪರ ವಕೀಲರು ವಾದಿಸಿದರು. ಈ ವೇಳೆ ಹೈಕೋರ್ಟ್‌, ಸಂಪುಟದಲ್ಲಿ ಅಂತಿಮ ತೀರ್ಮಾನ ಆಗಿದೆಯಾ? ಸಂಪುಟದ ತೀರ್ಮಾನ ಸಿಬಿಐ ಪ್ರಶ್ನೆ ಮಾಡುತ್ತಿದೆಯಾ ಎಂದು ಕೇಳಿತು. ಆಗ ಡಿಕೆ ಪರ ವಕೀಲ, ಇಲ್ಲ ಸಿಬಿಐ ಇದುವರೆಗೂ ಸರ್ಕಾರದ ಆದೇಶ ಪ್ರಶ್ನಿಸಿಲ್ಲ. ಸಿಬಿಐ ಪೂರ್ವಾನುಮತಿ ಹಿಂಪಡೆದಿದೆ. ನಾವು ವಾದ ಮಾಡುವ ಅವಶ್ಯಕತೆ ಇಲ್ಲ. ನಾವು ಮೇಲ್ಮನವಿ ಹಿಂಪಡೆಯುತ್ತೇವೆ ಎಂದು ತಿಳಿಸಿದರು.

CBI

ಈಗಾಗಲೇ ತನಿಖೆ ಪೂರ್ಣ ಆಗುವ ಹಂತದಲ್ಲಿ ಇದೆ. ಸಿಬಿಐ ಎಫ್‌ಐಆರ್‌ ದಾಖಲಿಸಿದ ಮೇಲೆ ಅನುಮೋದನೆ ನೀಡಿರುವುದನ್ನು ಹಿಂಪಡೆಯಬಹುದೇ ಎಂಬ ಪ್ರಶ್ನೆಯೂ ಇದೆ. ಈ ಬಗ್ಗೆ ಸಾಕಷ್ಟು ಪ್ರಶ್ನೆಗಳು ಇದ್ದಾವೆ ಎಂದು ಸಿಬಿಐ ಪರ ವಕೀಲರು ಹೇಳಿದರು. ಇದಕ್ಕೆ ಹೈಕೋರ್ಟ್‌, ದಿನಪತ್ರಿಕೆ ಸುದ್ದಿಯ ಮೇಲೆ ವಿಚಾರಣೆ ಮಾಡಲು ಸಾಧ್ಯವಿಲ್ಲ. ಕಾನೂನು ಏನು ಹೇಳುತ್ತೆ ಎಂಬುದರ ಮೇಲೆ ವಿಚಾರಣೆ ನಡೆಯಲಿದೆ ಎಂದು ತಿಳಿಸಿತು. ಇದನ್ನೂ ಓದಿ: ಡಿಕೆಶಿಯಂತೆ ನಾಗೇಂದ್ರ ಮೇಲಿನ ಕೇಸ್‌ ಹಿಂಪಡೆಯಲಿ – ಸರ್ಕಾರಕ್ಕೆ ರೆಡ್ಡಿ ಆಗ್ರಹ

ಈಗಾಗಲೇ ಬೇರೆ ಪ್ರಕರಣದಲ್ಲಿ ಅನುಮತಿ ವಾಪಸ್‌ ಪಡೆದು ಕೋರ್ಟ್‌ ಮಧ್ಯ ಪ್ರವೇಶ ಮಾಡಿದೆ. ಹಳೆಯ ಆದೇಶದ ಪ್ರಕಾರ ಸಿಬಿಐ ಕೊಟ್ಟ ಅನುಮತಿ ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ವಾದಿಸಿದ ಸಿಬಿಐ ಪರ ವಕೀಲರು, 1994 ರಲ್ಲಿ ಸುಪ್ರೀಂ ನೀಡಿದ್ದ ಕಾಜಿ ಡೋರ್ಜಿ ಪ್ರಕರಣ ತೀರ್ಪು ಓದಿದರು. ಈ ಪ್ರಕರಣದಲ್ಲಿ ಒಮ್ಮೆ ನೀಡಿದ ಅನುಮತಿ ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ವಾದಿಸಿದರು.

ಎಲ್ಲ ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್‌ ಕೆಲ ನಿಮಿಷಗಳ ಕಾಲ ವಿಚಾರಣೆಯನ್ನು ಮುಂದೂಡಿತು. ಮತ್ತೆ ವಿಚಾರಣೆ ಆರಂಭಿಸಿ ಹೈಕೋರ್ಟ್‌ ತೀರ್ಪು ಪ್ರಕಟಿಸಿತು. ಮೇಲ್ಮನವಿ ಹಿಂಪಡೆದ ಮನವಿಯನ್ನು ಹೈಕೋರ್ಟ್‌ ಪರಿಗಣಿಸಿತು. ಅಲ್ಲದೇ, ರಾಜ್ಯ ಸರ್ಕಾರದ ಆದೇಶವನ್ನು ಈವರೆಗೂ ಯಾರೂ ಪ್ರಶ್ನಿಸಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತೀರ್ಪಿನಲ್ಲಿ ತಿಳಿಸಿತು. ಈ ವೇಳೆ, ಕಾಜಿ ಡೋರ್ಜಿ ಪ್ರಕರಣ ಉಲ್ಲೇಖಿಸಿ ಸಿಬಿಐ ಪರ ವಕೀಲರು ವಾದಿಸಿದ್ದನ್ನು ಹೈಕೋರ್ಟ್‌ ಪರಿಗಣಿಸಲಿಲ್ಲ. ಹೈಕೋರ್ಟ್‌ ತೀರ್ಪಿನಿಂದ ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

ಹೈಕೋರ್ಟ್‌ನಲ್ಲಿ ಬಾಕಿ ಇದ್ದ ರಿಟ್‌ ಅರ್ಜಿ ಮತ್ತು ಈ ಸಂಬಂಧದ ಮೇಲ್ಮನವಿಯನ್ನು ಡಿಸಿಎಂ ಡಿಕೆಶಿ ಹಿಂಪಡೆದಿದ್ದಾರೆ. ವಿಚಾರಣೆ ವೇಳೆ ಸರ್ಕಾರದ ಪರ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಕಪಿಲ್‌ ಸಿಬಲ್‌ ಹಾಜರಾಗಿದ್ದರು. ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಂತೆಯೇ, ರಿಟ್‌ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿಯೂ ಶಿವಕುಮಾರ್‌ ಪರ ವಕೀಲರು ನ್ಯಾಯಪೀಠಕ್ಕೆ ಲಿಖಿತ ಮೆಮೊ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮೆಮೊ ಪರಿಗಣಿಸಿ ಅರ್ಜಿ ಹಿಂಪಡೆಯುವ ನಿರ್ಧಾರಕ್ಕೆ ಅಸ್ತು ಎಂದು ಆದೇಶಿಸಿತು.

TAGGED:cbid k shivakumarKarnataka High Courtಕರ್ನಾಟಕ ಹೈಕೋರ್ಟ್ಡಿ.ಕೆ.ಶಿವಕುಮಾರ್ರಾಜ್ಯ ಸರ್ಕಾರಸಿಬಿಐ
Share This Article
Facebook Whatsapp Whatsapp Telegram

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Salim Pistol
Latest

ಭಾರತದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌

Public TV
By Public TV
3 hours ago
BY Vijayendra
Bengaluru City

ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

Public TV
By Public TV
4 hours ago
Siddaramaiah
Bengaluru City

ರಾಜ್ಯ ಪಠ್ಯಕ್ರಮದಿಂದ ಹಿಂದಿಗೆ ಕೊಕ್ – ದ್ವಿಭಾಷಾ ಸೂತ್ರಕ್ಕೆ ಸರ್ಕಾರಕ್ಕೆ ತಜ್ಞರ ಶಿಫಾರಸು

Public TV
By Public TV
4 hours ago
R Ashoka 1
Chikkaballapur

ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಸುಧಾಕರ್‌ ಗುರಿಯಾಗಿಸಿ FIR: ಆರ್‌.ಅಶೋಕ್‌ ಕಿಡಿ

Public TV
By Public TV
4 hours ago
Agniveer Soldier
Chamarajanagar

ಚಾಮರಾಜನಗರ | ಎರಡು ಬೈಕ್ ನಡುವೆ ಡಿಕ್ಕಿ ಅಗ್ನಿವೀರ್ ಯೋಧ ಸಾವು

Public TV
By Public TV
4 hours ago
Raghavendraswamy
Districts

ಮಂತ್ರಾಲಯದಲ್ಲಿ ರಾಯರ ಆರಾಧನಾ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಸಪ್ತರಾತ್ರೋತ್ಸವಕ್ಕೆ ಚಾಲನೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?