ಇಸ್ರೇಲ್‌ನಲ್ಲಿರುವ ಭಾರತೀಯರು ಎಚ್ಚರದಲ್ಲಿರಿ – ರಾಯಭಾರ ಕಚೇರಿ ಸೂಚನೆ

Public TV
1 Min Read
Israel

ನವದೆಹಲಿ: ಇಸ್ರೇಲ್‌ನಲ್ಲಿರುವ (Israel) ಭಾರತೀಯರು ಎಚ್ಚರಿಕೆಯಿಂದಿರಿ ಮತ್ತು ಸುರಕ್ಷತಾ ನಿಯಮಗಳ ಬಗ್ಗೆ ಗಮನ ಹರಿಸಲು ಭಾರತೀಯ ರಾಯಭಾರ ಕಚೇರಿ (Indian Embassy) ಸೂಚನೆ ನೀಡಿದೆ. ಇಸ್ರೇಲ್‌ ಮತ್ತು ಹಮಾಸ್ ಬಂಡುಕೋರರ‌ ನಡುವೆ ಯುದ್ಧ ಘೋಷಣೆಯಾದ ಮೇಲೆ ಈ ಸಲಹೆ ನೀಡಲಾಗಿದೆ.

Israel 1

ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು (Indians) ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದಂತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು, ಅನಗತ್ಯ ಓಡಾಟ ತಪ್ಪಿಸಬೇಕು ಮತ್ತು ಸುರಕ್ಷತಾ ಆಶ್ರಯಕ್ಕೆ ಹತ್ತಿರದಲ್ಲಿರಿ ಎಂದು ರಾಯಭಾರ ಕಚೇರಿ ಸಲಹೆ ನೀಡಿದೆ. ತುರ್ತು ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: Asian Games 2023: ಚಿನ್ನದ ಮಳೆ – ಚೊಚ್ಚಲ ಚಾಂಪಿಯನ್‌ ಕಿರೀಟ ಧರಿಸಿದ ಭಾರತ

Israel 1

ಘಾಜಾಪಟ್ಟಿಯಿಂದ ಹಮಾಸ್ ಬಂಡುಕೋರರು 5,000 ರಾಕೆಟ್‌ಗಳನ್ನು (Rocket Attack) ಇಸ್ರೇಲ್ ನತ್ತ ಉಡಾಯಿಸಿದ ಬಳಿಕ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ. ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ. ಇದನ್ನೂ ಓದಿ: ಮಕ್ಕಳ ಮೇಲಿನ ದೌರ್ಜನ್ಯ ದೃಶ್ಯ – ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಖಡಕ್ ಸೂಚನೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿ ನಾವು ಯುದ್ಧದಲ್ಲಿದ್ದೇವೆ, ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಶತ್ರುಗಳು ಸೂಕ್ತ ಬೆಲೆ ತೆರಲಿದ್ದಾರೆ ಎಂದು ತಮ್ಮ ನಾಗರಿಕರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನ ಚೀಪ್ ಯೋಜನೆಗಳಿಂದಾಗಿ ಸಿದ್ದರಾಮಯ್ಯನವ್ರು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಸುರೇಶ್ ಗೌಡ

Web Stories

Share This Article