Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ

Latest

ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ

Public TV
Last updated: August 21, 2025 7:59 pm
Public TV
Share
3 Min Read
Group of Ministers GST
SHARE

ನವದೆಹಲಿ: ಸರಕು ಮತ್ತು ಸೇವಾ ತೆರಿಗೆಯಲ್ಲಿ (GST) 12% ಮತ್ತು 28% ಸ್ಲ್ಯಾಬ್‌ಗಳನ್ನು ತೆಗೆದು ಹಾಕಲು ಸಚಿವರ ಸಮಿತಿ (Group of Ministers) ಒಪ್ಪಿಗೆ ನೀಡಿದೆ.

 ಸಚಿವರ ಸಮಿತಿಯ ಸಂಚಾಲಕ ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಕ್ರಿಯಿಸಿ ಕೇಂದ್ರವು ಮಾಡಿದ ಪ್ರಸ್ತಾವನೆಗಳ ಕುರಿತು ಕೆಲ ರಾಜ್ಯಗಳು ಸಲಹೆಗಳನ್ನು ನೀಡಿವೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ (GST Council) ಇವುಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಸಚಿವರ ಸಮಿತಿ ಒಪ್ಪಿಗೆ ನೀಡದ ಬಳಿಕ  ಪ್ರಸ್ತಾಪ  ಅಂತಿಮವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಮತ್ತು ಎಲ್ಲಾ ರಾಜ್ಯಗಳ ಮಂತ್ರಿಗಳನ್ನು ಸದಸ್ಯರನ್ನಾಗಿ ಹೊಂದಿರುವ ಜಿಎಸ್‌ಟಿ ಮಂಡಳಿಗೆ ಹೋಗಲಿದೆ. ಈ ಮಂಡಳಿಯೂ ರಾಜ್ಯಗಳ ಪಾಲು ಮತ್ತು ಆದಾಯ ನಷ್ಟಕ್ಕೆ ಪರಿಹಾರದ ಕುರಿತಾದ ಪ್ರಶ್ನೆಗಳನ್ನು ಒಳಗೊಂಡಂತೆ ಪ್ರತಿಕ್ರಿಯೆಯನ್ನು ಪರಿಗಣಿಸುತ್ತದೆ.

Union Minister for Finance and Corporate Affairs Smt. @nsitharaman today addressed the Group of Ministers (GoMs) constituted by the GST Council on Compensation Cess, Health & Life Insurance, and Rate Rationalisation at Vigyan Bhawan, New Delhi. Union Minister of State for… pic.twitter.com/hMRFOCwXBF

— Ministry of Finance (@FinMinIndia) August 20, 2025

 

ಪಶ್ಚಿಮ ಬಂಗಾಳ ಆರೋಗ್ಯ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಮಾತನಾಡಿ, ರಾಜ್ಯಗಳು ಆದಾಯವನ್ನು ಕಳೆದುಕೊಳ್ಳುವುದರಿಂದ ನಮಗೆ ಹೇಗೆ ಪರಿಹಾರ ನೀಡಲಾಗುವುದು ಎಂದು ನಾವು ತಿಳಿದುಕೊಳ್ಳಲು ಬಯಸುತ್ತೇವೆ ಎಂದು ನಾನು ಸಭೆಯಲ್ಲಿ ಎತ್ತಿದ್ದೇನೆ. ಎಷ್ಟು ಪ್ರಮಾಣದ ಆದಾಯ ನಷ್ಟವಾಗಬಹುದು ಎನ್ನುವುದು ನಮಗೆ ತಿಳಿದಿಲ್ಲ. ಈ ವಿವರ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ತಿಳಿಯಬಹುದು ಎಂದು ಅವರು ತಿಳಿಸಿದರು.

ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಖನ್ನಾ ಪ್ರತಿಕ್ರಿಯಿಸಿ, ಕೇಂದ್ರದಲ್ಲಿ ನೀಡಲಾದ ಪ್ರಸ್ತಾಪದಲ್ಲಿ ಎಷ್ಟು ನಷ್ಟ ಉಂಟಾಗುತ್ತಿದೆ ಎಂಬುದನ್ನು ಉಲ್ಲೇಖಿಸಲಾಗಿಲ್ಲ. ಆದರೆ ಸಾಮಾನ್ಯ ಜನರು ಇದರಿಂದ ಪ್ರಯೋಜನ ಪಡೆಯಬೇಕು ಎಂಬುದು ನಮ್ಮ ಉದ್ದೇಶ ಎಂದರು.  ಇದನ್ನೂ ಓದಿ: 3 ವರ್ಷದಿಂದ ಅಶ್ಲೀಲ ಮೆಸೇಜ್‌ ಕಳಿಸ್ತಿದ್ದಾರೆ, ಹೋಟೆಲ್‌ಗೆ ಕರೀತಿದ್ದಾರೆ – ರಾಜಕಾರಣಿ ವಿರುದ್ಧ ನಟಿ ರಿನಿ ಜಾರ್ಜ್ ಆರೋಪ

pm modi 79th Independence Day

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಭಾಷಣ ಮಾಡಿದ ನರೇಂದ್ರ ಮೋದಿ (Narendra Modi) ಜಿಎಸ್‌ಟಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಲಿದೆ. ದೀಪಾವಳಿಗೆ ಡಬಲ್‌ ಗಿಫ್ಟ್‌ ಸಿಗಲಿದೆ ಎಂದು ಹೇಳಿದ್ದರು.

ಪ್ರಸ್ತುತ ಈಗ ಅಗತ್ಯ ವಸ್ತುಗಳಿಗೆ 0%, ಮೂಲಭೂತ ಅಗತ್ಯಗಳಿಗೆ ಬೇಕಾದ ವಸ್ತುಗಳಿಗೆ 5%, ಪ್ರಮಾಣಿತ ಸರಕುಗಳಿಗೆ 12%, ಹೆಚ್ಚಿನ ಗ್ರಾಹಕ ಉತ್ಪನ್ನಗಳಿಗೆ 18%, ಐಷಾರಾಮಿ ಸರಕುಗಳಿಗೆ 28% ಜಿಎಸ್‌ಟಿ ವಿಧಿಸಲಾಗುತ್ತಿದೆ.  ಇದನ್ನೂ ಓದಿ: ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

ಸದ್ಯ ಈಗ ಇರುವ ಸ್ಲ್ಯಾಬ್‌ಗಳ ಪೈಕಿ 5% ಮತ್ತು 18% ಸ್ಲ್ಯಾಬ್‌ ಮಾತ್ರ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಈ ಪ್ರಸ್ತಾವನೆಯಡಿಯಲ್ಲಿ 28% ನಲ್ಲಿರುವ 90% ರಷ್ಟು ವಸ್ತುಗಳನ್ನು 18%ಕ್ಕೆ ವರ್ಗಾಯಿಸಲಾಗುತ್ತದೆ, 12% ರಷ್ಟು ಸ್ಲ್ಯಾಬ್‌ನಲ್ಲಿರುವ 99% ರಷ್ಟು ವಸ್ತುಗಳನ್ನು 5% ಸ್ಲ್ಯಾಬ್‌ಗೆ ವರ್ಗಾಯಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಐಷಾರಾಮಿ ಸರಕುಗಳಿಗೆ 40% ದರ ಅನ್ವಯಿಸುತ್ತದೆ. ಇದರಲ್ಲಿ ತಂಬಾಕು, ಗುಟ್ಕಾ ಮತ್ತು ಸಿಗರೇಟ್ ಸೇರಿವೆ. ಸರ್ಕಾರಿ ಮೂಲಗಳ ಪ್ರಕಾರ 40% ವರ್ಗವು ಕೇವಲ 5-7 ವಸ್ತುಗಳನ್ನು ಮಾತ್ರ ಹೊಂದಿರುತ್ತದೆ. ರೆಫ್ರಿಜರೇಟರ್, ಎಸಿ, ವಾಷಿಂಗ್‌ ಮಷೀನ್‌ನಂತ ವಸ್ತುಗಳನ್ನು ಇದರಿಂದ ಹೊರಗಿಡಲಾಗುತ್ತದೆ.

ಒಟ್ಟು ಜಿಎಸ್‌ಟಿ ಆದಾಯದ ಪೈಕಿ 67% ಆದಾಯ 18% ಸ್ಲ್ಯಾಬ್‌ನಲ್ಲಿರುವ ವಸ್ತುಗಳಿಂದ ಬರುತ್ತಿದೆ. 11% ಮತ್ತು 5% ಆದಾಯ ಕ್ರಮವಾಗಿ 28% ಮತ್ತು 12% ಬಂದರೆ, 12% ಆದಾಯ 5% ಸ್ಲ್ಯಾಬ್‌ನಲ್ಲಿರುವ ವಸ್ತುಗಳಿಂದ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ತೆರಿಗೆ ಪರಿಷ್ಕರಣೆಯಾದರೂ ಪೆಟ್ರೋಲ್‌, ಡೀಸೆಲ್‌ ದರಗಳು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗೆ ಇಡಲಾಗುತ್ತದೆ.

TAGGED:gstnarendra moditaxಕೆಂಪುಕೋಟೆಜಿಎಸ್‍ಟಿನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
27 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?