ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಂಡು ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೊನ್ನಾಳಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಶಾಸಕ ರೇಣುಕಾಚಾರ್ಯ ಅವರು ಯಡಿಯೂರಪ್ಪನವರ ಮತ್ತೊಂದು ಬಾರಿ ಚುನಾವಣೆಗೆ ಸ್ಪರ್ಧಿಸಲು ಮನವಿ ಮಾಡಿ ಭಾವುಕರಾದರು.
ಈ ವೇಳೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಕೂರಬೇಕು. ಅದಕ್ಕಾಗಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಎಲ್ಲಾ ವರ್ಗದ ಜನರು ಯಡಿಯೂರಪ್ಪನವರಿಗೆ ಬೆಂಬಲ ನೀಡಿದ್ದಾರೆ. ಬಿಎಸ್ವೈ ಇನ್ನೊಂದು ಬಾರಿ ಶಾಸಕರಾಗಬೇಕೆಂಬುದು ಎಲ್ಲಾ ಶಾಸಕ ಇಂಗಿತ ಎಂದರು.
ಬಿಎಸ್ವೈ ಮತ್ತೊಮ್ಮೆ ಸ್ಪರ್ಧೆ ಮಾಡಬೇಕು. ವಿಜಯೇಂದ್ರ ಸ್ಪರ್ಧೆ ಬಗ್ಗೆ ವಿರೋಧ ಮಾಡಲ್ಲ. ವಿಜಯೇಂದ್ರ ಚುನಾವಣೆ ಸ್ಪರ್ಧೆ ಬಗ್ಗೆ ರಾಜ್ಯ ನಾಯಕರು, ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಯಡಿಯೂರಪ್ಪನವರ ಬಗ್ಗೆ ಅಪಾರವಾದ ಗೌರವ ಇದೆ. ರಾಜ್ಯದಲ್ಲಿ ಪ್ರವಾಸ ಮಾಡಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ. ಅಷ್ಟೇ ಅಲ್ಲದೇ ಯಡಿಯೂರಪ್ಪನವರು ನೂರಾರು ಹೋರಾಟ ಮಾಡಿ, ಕೇಸ್ಗಳನ್ನು ಹಾಕಿಸಿಕೊಂಡ ನಾಯಕರಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದೇಶಕ್ಕಾಗಿ ಮನೆಯವರನ್ನೇ ಕಳೆದುಕೊಂಡವರು ಹಣಕ್ಕಾಗಿ ಅವ್ಯವಹಾರ ಮಾಡುತ್ತಾರೇನ್ರಿ: ಖರ್ಗೆ
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ, ಡಿಕೆಶಿ ನಡುವೆ ಸಿಎಂ ಆಗಬೇಕೆಂಬ ಕಚ್ಚಾಟ ಆರಂಭವಾಗಿದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕೆಂದು ಹಗಲುಗನಸು ಕಾಣುತ್ತಿದ್ದಾರೆ. ಇದು ನೂರಕ್ಕೆ ನೂರು ಸಾಧ್ಯವಿಲ್ಲ. ರಮೇಶ್ ಕುಮಾರ್ ಅಪರೂಪಕ್ಕೆ ಸತ್ಯ ಹೇಳಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಹೈಕಮಾಂಡ್ ಅಂಗಳಕ್ಕೆ ಬಿಎಸ್ವೈ ನಿರ್ಧಾರ