ದಾವಣಗೆರೆ: ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಮೊಬೈಲ್ ನೀಡಿ ವಿದ್ಯಾಭ್ಯಾಸಕ್ಕೆ ಆಸರೆಯಾಗಿದ್ದಾರೆ.
ಶಾಸಕ ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದು, ಬಡ ವಿದ್ಯಾರ್ಥಿಗಳಿಗೆ ಮೊಬೈಲ್ ನೀಡಿ ಮಾನವೀಯತೆ ಮೆರೆದಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಟಿ.ಗೋಪಗೊಂಡನಹಳ್ಳಿ ಗ್ರಾಮದ ಬಿಂದು, ಸುಂಕದಕಟ್ಟೆ ಗ್ರಾಮದ ನರ್ಮದಗೆ ಮೊಬೈಲ್ ನೀಡಿ ವಿದ್ಯಾರ್ಥಿನಿಯರ ಸಂತಸದಲ್ಲಿ ಭಾಗಿಯಾದರು. ಇದನ್ನೂ ಓದಿ: RSS ಬಗ್ಗೆ ಮಾತನಾಡೋದು ಬೆಂಕಿ ಜೊತೆ ಸರಸವಿದ್ದಂತೆ: ಈಶ್ವರಪ್ಪ
ಬಿಂದು ಹಾಗೂ ನರ್ಮದ ಮನೆಯಲ್ಲಿ ಕಡು ಬಡತನ ಇರುವುದರಿಂದ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ರೇಣುಕಾಚಾರ್ಯ ಅವರ ಬಳಿ ವಿದ್ಯಾರ್ಥಿನಿಯರು ಅಳಲನ್ನು ತೋಡಿಕೊಂಡು ಮೊಬೈಲ್ ನೀಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಸಚಿವ ಯಶಪಾಲ್ ಆರ್ಯ, ಶಾಸಕ ಸಂಜೀವ್ ಆರ್ಯ
ಮನವಿ ಸ್ವೀಕರಿಸಿದ ರೇಣುಕಾಚಾರ್ಯ ಅವರು ವಿದ್ಯಾರ್ಥಿನಿಯರಿಗೆ ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಕೊಟ್ಟ ಮಾತಿನಂತೆ ಇಂದು ರೇಣುಕಾಚಾರ್ಯ ಮೊಬೈಲ್ ನೀಡಿ ತಮ್ಮ ಮಾತು ಉಳಿಸಿಕೊಂಡಿದ್ದಾರೆ. ಮೊಬೈಲ್ ಪಡೆದು ರೇಣುಕಾಚಾರ್ಯ ಕಾರ್ಯಕ್ಕೆ ವಿದ್ಯಾರ್ಥಿನಿಯರು ಮೆಚ್ಚುಗೆ ವ್ಯಕ್ತಪಡಿಸಿದರು.