Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

Bengaluru City

ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

Public TV
Last updated: August 14, 2025 9:24 pm
Public TV
Share
3 Min Read
Darshan 2
SHARE

– ಆರೋಪಿಗಳು ಜೈಲು ಆವರಣದಲ್ಲಿ ಸಿಗರೇಟ್‌, ಮದ್ಯ ಸೇವಿಸಿದ್ರೆ ರಾಜ್ಯ ಸರ್ಕಾರಕ್ಕೆ ಸಮನ್ಸ್ ಗ್ಯಾರಂಟಿ
– ಆರೋಪಿಗಳಿಗೆ ಜೈಲಲ್ಲಿ ರಾಜಾತಿಥ್ಯ ನೀಡಕೂಡದು ಅಂತ ಎಚ್ಚರಿಕೆ

ಬೆಂಗಳೂರು: ದರ್ಶನ್, ಪವಿತ್ರಾ ಸೇರಿ ಆರೋಪಿಗಳ ಬೇಲ್ ರದ್ದು ಮಾಡಿರುವ ಸುಪ್ರೀಂ ಕೋರ್ಟ್ (Supreme Court), ಈ ಹಿಂದೆ ಕರ್ನಾಟಕ ಹೈಕೋರ್ಟ್ (Karnataka Highcourt) ಆದೇಶದ ಹುಳುಕುಗಳನ್ನು ಎತ್ತಿ ತೋರಿದೆ. ಜಾಮೀನು ನೀಡಲು ಹೈಕೋರ್ಟ್ ಆದೇಶದಲ್ಲಿ ಸಕಾರಣಗಳನ್ನು ನೀಡಿಲ್ಲ. ಯಾಂತ್ರಿಕವಾಗಿ ತನ್ನ ಅಧಿಕಾರ ಬಳಕೆ ಮಾಡಿದೆ. ವಿಚಾರಣಾ ಹಂತದಲ್ಲಿರುವ ಪ್ರಕರಣದ ಸಾಕ್ಷ್ಯಗಳನ್ನು ಬಹುಮುಖ್ಯವಾಗಿ ಪರಿಗಣಿಸಿದೆ ಅಂತ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

Darshan 3

ಸುಪ್ರೀಂ ಆಕ್ಷೇಪಣೆಗಳೇನು? (ಆದೇಶ ಓದಿದ ನ್ಯಾ. ಮಹದೇವನ್)
* ಹೈಕೋರ್ಟ್ ಆದೇಶವು ವಿಕ್ಷಿಪ್ತ ದೋಷಗಳಿಂದ ಕೂಡಿದೆ.
* ಹೈಕೋರ್ಟ್ ಆದೇಶವು ಗಂಭೀರ ವೈರುಧ್ಯಗಳಿಂದ ಕೂಡಿದೆ.
* ಜಾಮೀನು ನೀಡಲು ಹೈಕೋರ್ಟ್ ಆದೇಶದಲ್ಲಿ ವಿಶೇಷ ಅಥವಾ ಸಕಾರಣಗಳನ್ನು ನೀಡಲಾಗಿಲ್ಲ.
* ನ್ಯಾಯಾಲಯವು ಯಾಂತ್ರಿಕವಾಗಿ ತನ್ನ ಅಧಿಕಾರ ಬಳಕೆ ಮಾಡಿದೆ.
* ಕಾನೂನಾತ್ಮಕವಾಗಿ ಬಹುಮುಖ್ಯವಾದ ವಾಸ್ತವಾಂಶಗಳನ್ನ ಕೈಬಿಟ್ಟಿದೆ.
* ವಿಚಾರಣಾ ಹಂತದಲ್ಲಿರುವ ಪ್ರಕರಣದ ಸಾಕ್ಷ್ಯಗಳನ್ನು ಬಹುಮುಖ್ಯವಾಗಿ ಪರಿಗಣಿಸಿದೆ.
* ಸಾಕ್ಷಿಗಳ ಪ್ರಾಮಾಣಿಕತೆ, ನಂಬಲರ್ಹತೆಯನ್ನು ನಿರ್ಧರಿಸಬೇಕಿರುವುದು ವಿಚಾರಣಾ ನ್ಯಾಯಾಲಯ ಮಾತ್ರ.
* ಇಂಥ ಗಂಭೀರವಾದ ಪ್ರಕರಣದ ಸ್ವರೂಪ ಮತ್ತು ಆರೋಪಿಗಳ ಪಾತ್ರವನ್ನು ಪರಿಗಣಿಸಬೇಕು.
* ಪರಿಗಣಿಸದೇ ವಿಚಾರಣೆಯಲ್ಲಿ ಮಧ್ಯಪ್ರವೇಶಿಸುವುದು ಅನಗತ್ಯವಾಗಿ ವ್ಯಾಪ್ತಿ ಮೀರಿದ ಚಟುವಟಿಕೆ.
* ಸಕ್ಷಮ ಪ್ರಾಧಿಕಾರಿಗಳು ತಕ್ಷಣ ಆರೋಪಿಗಳನ್ನ ವಶಕ್ಕೆ ಪಡೆಯಬೇಕು.
* ತುರ್ತಾಗಿ ವಿಚಾರಣೆ ನಡೆಸಿ, ಮೆರಿಟ್ ಮೇಲೆ ಪ್ರಕರಣವನ್ನ ವಿಚಾರಣಾ ನ್ಯಾಯಾಲಯ ನಿರ್ಧರಿಸಬೇಕು.
* ಇಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಜಾಮೀನಿಗೆ ಸೀಮಿತವಾಗಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ (Karnataka Government) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿದೆ. ಆರೋಪಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಿರೋದಾಗಿ ಹೇಳಿದೆ. ಅಲ್ಲದೇ, ಫೈವ್ ಸ್ಟಾರ್ ಟ್ರೀಟ್‌ಮೆಂಟ್‌ಗೂ ವಾರ್ನಿಂಗ್ ಕೊಟ್ಟಿದೆ. ಮಹಾದೇವನ್ ಆದೇಶದ ಬಳಿಕ ಅದಕ್ಕೆ ಪೂರಕವಾಗಿ ನ್ಯಾ. ಪಾರ್ದಿವಾಲಾ… ನನ್ನ ಗೌರವಾನ್ವಿತ ಸಹೋದರ, ನ್ಯಾಯಮೂರ್ತಿ ಆರ್ ಮಹಾದೇವನ್ ಪ್ರೌಢಿಮೆಯಿಂದ ಕೂಡಿರುವ ತೀರ್ಪು ನೀಡಿದ್ದು, ಇದು ಅಮೋಘವಾದದ್ದಾಗಿದೆ ಅಂತ ಇದಕ್ಕೆ ಹೆಚ್ಚುವರಿ ಆದೇಶ ಸೇರ್ಪಡೆ ಮಾಡಿದ್ದಾರೆ.

ನ್ಯಾ. ಪಾರ್ದಿವಾಲಾ ಪ್ರಸ್ತಾಪಿಸಿದ ಅಂಶಗಳೇನು…?
* ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು/ಅವಳು ಕಾನೂನಿಗಿಂತ ಮೇಲಲ್ಲ.
* ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ.
* ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಹಂತದಲ್ಲಿ ಯಾವುದೇ ಬೆಲೆ ತೆತ್ತಾದರೂ ಕಾನೂನಾತ್ಮಕ ಆಡಳಿತವನ್ನು ಎತ್ತಿಹಿಡಿಯಬೇಕು.
* ಎಲ್ಲಾ ಸಮಯದಲ್ಲೂ ಕಾನೂನಾತ್ಮಕ ಆಡಳಿತವನ್ನ ಕಾಪಾಡಿಕೊಳ್ಳುವುದು ಇಂದಿನ ಅಗತ್ಯ.
* ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿದ್ದು ನಮಗೆ ತಿಳಿದಿದೆ.
* ಈ ಸಂಬಂಧ ಜೈಲು ಮೇಲ್ವಿಚಾರಕರು ಸೇರಿ ಎಲ್ಲರ ಅಮಾನತು ಕೂಡ ಗೊತ್ತಾಗಿದೆ.
* ಇದು ಮತ್ತೆ ಪುನರಾವರ್ತನೆ ಆಗಬಾರದು.
* ಆರೋಪಿಗಳು ಜೈಲು ಆವರಣದಲ್ಲಿ ಸಿಗರೇಟು, ಮದ್ಯಸೇವನೆ ಮಾಡಿದರೆ ರಾಜ್ಯ ಸರ್ಕಾರಕ್ಕೆ ಸಮನ್ಸ್ ಕೊಡ್ತೇವೆ

ಇದಕ್ಕೆ ರಾಜ್ಯ ಸರ್ಕಾರಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರು ಪೂರಕ ತೀರ್ಪಿನಲ್ಲಿ ನೀವು ಪ್ರಸ್ತಾಪಿಸಿರುವ ವಿಚಾರಗಳು ದೇಶಾದ್ಯಂತ ಪರಿಣಾಮ ಬೀರಲಿದ್ದು, ಈ ತೀರ್ಪನ್ನ ದೇಶದ ಎಲ್ಲಾ ಜೈಲುಗಳಿಗೆ ಕಳುಹಿಸಿಕೊಡಬೇಕಿದೆ. ಗಂಭೀರ ವಿಚಾರ ಇದಾಗಿದೆ ಅಂದ್ರು. ಅದಕ್ಕೆ ಪೀಠವು ಜೈಲು ಆತಿಥ್ಯದ ಫೋಟೊ, ವಿಡಿಯೋಗಳನ್ನ ನಾವು ನೋಡಿದ್ರೆ ನಿಮಗೆ ಮೊದಲು ಸಮನ್ಸ್ ನೀಡಲಾಗುತ್ತದೆ ಅಂದರು. ಈ ಸಂಬಂಧ ಅಡ್ವೊಕೇಟ್ ಜನರಲ್ ಜೊತೆ ಮಾತನಾಡಿ, ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ರವಾನಿಸಲಾಗುವುದು ಅಂತ ಲೂಥ್ರಾ ಪೀಠಕ್ಕೆ ಹೇಳಿದರು.

TAGGED:darshaninstagrampavithra gowdaRenukaswamy Murder caseSupreme Courtಕರ್ನಾಟಕ ಹೈಕೋರ್ಟ್ದರ್ಶನ್ಪವಿತ್ರಾಗೌಡರೇಣುಕಾಸ್ವಾಮಿ ಕೊಲೆ ಕೇಸ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
5 minutes ago
Mysuru Crime
Crime

ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ

Public TV
By Public TV
25 minutes ago
Iranian Plane 2
Latest

ಅಮೆರಿಕ ಏರ್‌ಸ್ಟ್ರೈಕ್‌ – ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ತೆರಳುತ್ತಿದ್ದ ವಿಮಾನಕ್ಕೆ ಹಾನಿ

Public TV
By Public TV
35 minutes ago
Udupi Husband Suicide
Crime

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ

Public TV
By Public TV
41 minutes ago
Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
9 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?