Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

Bengaluru City

ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

Public TV
Last updated: August 14, 2025 9:24 pm
Public TV
Share
3 Min Read
Darshan 2
SHARE

– ಆರೋಪಿಗಳು ಜೈಲು ಆವರಣದಲ್ಲಿ ಸಿಗರೇಟ್‌, ಮದ್ಯ ಸೇವಿಸಿದ್ರೆ ರಾಜ್ಯ ಸರ್ಕಾರಕ್ಕೆ ಸಮನ್ಸ್ ಗ್ಯಾರಂಟಿ
– ಆರೋಪಿಗಳಿಗೆ ಜೈಲಲ್ಲಿ ರಾಜಾತಿಥ್ಯ ನೀಡಕೂಡದು ಅಂತ ಎಚ್ಚರಿಕೆ

ಬೆಂಗಳೂರು: ದರ್ಶನ್, ಪವಿತ್ರಾ ಸೇರಿ ಆರೋಪಿಗಳ ಬೇಲ್ ರದ್ದು ಮಾಡಿರುವ ಸುಪ್ರೀಂ ಕೋರ್ಟ್ (Supreme Court), ಈ ಹಿಂದೆ ಕರ್ನಾಟಕ ಹೈಕೋರ್ಟ್ (Karnataka Highcourt) ಆದೇಶದ ಹುಳುಕುಗಳನ್ನು ಎತ್ತಿ ತೋರಿದೆ. ಜಾಮೀನು ನೀಡಲು ಹೈಕೋರ್ಟ್ ಆದೇಶದಲ್ಲಿ ಸಕಾರಣಗಳನ್ನು ನೀಡಿಲ್ಲ. ಯಾಂತ್ರಿಕವಾಗಿ ತನ್ನ ಅಧಿಕಾರ ಬಳಕೆ ಮಾಡಿದೆ. ವಿಚಾರಣಾ ಹಂತದಲ್ಲಿರುವ ಪ್ರಕರಣದ ಸಾಕ್ಷ್ಯಗಳನ್ನು ಬಹುಮುಖ್ಯವಾಗಿ ಪರಿಗಣಿಸಿದೆ ಅಂತ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

Darshan 3

ಸುಪ್ರೀಂ ಆಕ್ಷೇಪಣೆಗಳೇನು? (ಆದೇಶ ಓದಿದ ನ್ಯಾ. ಮಹದೇವನ್)
* ಹೈಕೋರ್ಟ್ ಆದೇಶವು ವಿಕ್ಷಿಪ್ತ ದೋಷಗಳಿಂದ ಕೂಡಿದೆ.
* ಹೈಕೋರ್ಟ್ ಆದೇಶವು ಗಂಭೀರ ವೈರುಧ್ಯಗಳಿಂದ ಕೂಡಿದೆ.
* ಜಾಮೀನು ನೀಡಲು ಹೈಕೋರ್ಟ್ ಆದೇಶದಲ್ಲಿ ವಿಶೇಷ ಅಥವಾ ಸಕಾರಣಗಳನ್ನು ನೀಡಲಾಗಿಲ್ಲ.
* ನ್ಯಾಯಾಲಯವು ಯಾಂತ್ರಿಕವಾಗಿ ತನ್ನ ಅಧಿಕಾರ ಬಳಕೆ ಮಾಡಿದೆ.
* ಕಾನೂನಾತ್ಮಕವಾಗಿ ಬಹುಮುಖ್ಯವಾದ ವಾಸ್ತವಾಂಶಗಳನ್ನ ಕೈಬಿಟ್ಟಿದೆ.
* ವಿಚಾರಣಾ ಹಂತದಲ್ಲಿರುವ ಪ್ರಕರಣದ ಸಾಕ್ಷ್ಯಗಳನ್ನು ಬಹುಮುಖ್ಯವಾಗಿ ಪರಿಗಣಿಸಿದೆ.
* ಸಾಕ್ಷಿಗಳ ಪ್ರಾಮಾಣಿಕತೆ, ನಂಬಲರ್ಹತೆಯನ್ನು ನಿರ್ಧರಿಸಬೇಕಿರುವುದು ವಿಚಾರಣಾ ನ್ಯಾಯಾಲಯ ಮಾತ್ರ.
* ಇಂಥ ಗಂಭೀರವಾದ ಪ್ರಕರಣದ ಸ್ವರೂಪ ಮತ್ತು ಆರೋಪಿಗಳ ಪಾತ್ರವನ್ನು ಪರಿಗಣಿಸಬೇಕು.
* ಪರಿಗಣಿಸದೇ ವಿಚಾರಣೆಯಲ್ಲಿ ಮಧ್ಯಪ್ರವೇಶಿಸುವುದು ಅನಗತ್ಯವಾಗಿ ವ್ಯಾಪ್ತಿ ಮೀರಿದ ಚಟುವಟಿಕೆ.
* ಸಕ್ಷಮ ಪ್ರಾಧಿಕಾರಿಗಳು ತಕ್ಷಣ ಆರೋಪಿಗಳನ್ನ ವಶಕ್ಕೆ ಪಡೆಯಬೇಕು.
* ತುರ್ತಾಗಿ ವಿಚಾರಣೆ ನಡೆಸಿ, ಮೆರಿಟ್ ಮೇಲೆ ಪ್ರಕರಣವನ್ನ ವಿಚಾರಣಾ ನ್ಯಾಯಾಲಯ ನಿರ್ಧರಿಸಬೇಕು.
* ಇಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಜಾಮೀನಿಗೆ ಸೀಮಿತವಾಗಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ (Karnataka Government) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿದೆ. ಆರೋಪಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಿರೋದಾಗಿ ಹೇಳಿದೆ. ಅಲ್ಲದೇ, ಫೈವ್ ಸ್ಟಾರ್ ಟ್ರೀಟ್‌ಮೆಂಟ್‌ಗೂ ವಾರ್ನಿಂಗ್ ಕೊಟ್ಟಿದೆ. ಮಹಾದೇವನ್ ಆದೇಶದ ಬಳಿಕ ಅದಕ್ಕೆ ಪೂರಕವಾಗಿ ನ್ಯಾ. ಪಾರ್ದಿವಾಲಾ… ನನ್ನ ಗೌರವಾನ್ವಿತ ಸಹೋದರ, ನ್ಯಾಯಮೂರ್ತಿ ಆರ್ ಮಹಾದೇವನ್ ಪ್ರೌಢಿಮೆಯಿಂದ ಕೂಡಿರುವ ತೀರ್ಪು ನೀಡಿದ್ದು, ಇದು ಅಮೋಘವಾದದ್ದಾಗಿದೆ ಅಂತ ಇದಕ್ಕೆ ಹೆಚ್ಚುವರಿ ಆದೇಶ ಸೇರ್ಪಡೆ ಮಾಡಿದ್ದಾರೆ.

ನ್ಯಾ. ಪಾರ್ದಿವಾಲಾ ಪ್ರಸ್ತಾಪಿಸಿದ ಅಂಶಗಳೇನು…?
* ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು/ಅವಳು ಕಾನೂನಿಗಿಂತ ಮೇಲಲ್ಲ.
* ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ.
* ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಹಂತದಲ್ಲಿ ಯಾವುದೇ ಬೆಲೆ ತೆತ್ತಾದರೂ ಕಾನೂನಾತ್ಮಕ ಆಡಳಿತವನ್ನು ಎತ್ತಿಹಿಡಿಯಬೇಕು.
* ಎಲ್ಲಾ ಸಮಯದಲ್ಲೂ ಕಾನೂನಾತ್ಮಕ ಆಡಳಿತವನ್ನ ಕಾಪಾಡಿಕೊಳ್ಳುವುದು ಇಂದಿನ ಅಗತ್ಯ.
* ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿದ್ದು ನಮಗೆ ತಿಳಿದಿದೆ.
* ಈ ಸಂಬಂಧ ಜೈಲು ಮೇಲ್ವಿಚಾರಕರು ಸೇರಿ ಎಲ್ಲರ ಅಮಾನತು ಕೂಡ ಗೊತ್ತಾಗಿದೆ.
* ಇದು ಮತ್ತೆ ಪುನರಾವರ್ತನೆ ಆಗಬಾರದು.
* ಆರೋಪಿಗಳು ಜೈಲು ಆವರಣದಲ್ಲಿ ಸಿಗರೇಟು, ಮದ್ಯಸೇವನೆ ಮಾಡಿದರೆ ರಾಜ್ಯ ಸರ್ಕಾರಕ್ಕೆ ಸಮನ್ಸ್ ಕೊಡ್ತೇವೆ

ಇದಕ್ಕೆ ರಾಜ್ಯ ಸರ್ಕಾರಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರು ಪೂರಕ ತೀರ್ಪಿನಲ್ಲಿ ನೀವು ಪ್ರಸ್ತಾಪಿಸಿರುವ ವಿಚಾರಗಳು ದೇಶಾದ್ಯಂತ ಪರಿಣಾಮ ಬೀರಲಿದ್ದು, ಈ ತೀರ್ಪನ್ನ ದೇಶದ ಎಲ್ಲಾ ಜೈಲುಗಳಿಗೆ ಕಳುಹಿಸಿಕೊಡಬೇಕಿದೆ. ಗಂಭೀರ ವಿಚಾರ ಇದಾಗಿದೆ ಅಂದ್ರು. ಅದಕ್ಕೆ ಪೀಠವು ಜೈಲು ಆತಿಥ್ಯದ ಫೋಟೊ, ವಿಡಿಯೋಗಳನ್ನ ನಾವು ನೋಡಿದ್ರೆ ನಿಮಗೆ ಮೊದಲು ಸಮನ್ಸ್ ನೀಡಲಾಗುತ್ತದೆ ಅಂದರು. ಈ ಸಂಬಂಧ ಅಡ್ವೊಕೇಟ್ ಜನರಲ್ ಜೊತೆ ಮಾತನಾಡಿ, ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ರವಾನಿಸಲಾಗುವುದು ಅಂತ ಲೂಥ್ರಾ ಪೀಠಕ್ಕೆ ಹೇಳಿದರು.

TAGGED:darshaninstagrampavithra gowdaRenukaswamy Murder caseSupreme Courtಕರ್ನಾಟಕ ಹೈಕೋರ್ಟ್ದರ್ಶನ್ಪವಿತ್ರಾಗೌಡರೇಣುಕಾಸ್ವಾಮಿ ಕೊಲೆ ಕೇಸ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Republic Day 1
Latest

ಪರೇಡ್‌ನಲ್ಲಿ ಕರ್ನಾಟಕ ಮುಧೋಳ ಶ್ವಾನ ಆಕರ್ಷಣೆ; ಗಮನ ಸೆಳೆದ ಬ್ಯಾಕ್ಟ್ರಿಯನ್ ಒಂಟೆ, ಶಿಕಾರಿ ಪಕ್ಷಿ; ಇವುಗಳ ವಿಶೇಷತೆ ಏನು?

Public TV
By Public TV
11 minutes ago
DRONE
Latest

ಕರ್ತವ್ಯ ಪಥದಲ್ಲಿ ಭಾರತ ಸೇನೆಯ ಶಕ್ತಿ ಪ್ರದರ್ಶನ – ಮೊದಲ ಬಾರಿಗೆ ಕಾಣಿಸಿಕೊಂಡ ಡ್ರೋನ್‌

Public TV
By Public TV
12 minutes ago
Sadananda Gowda
Bengaluru City

ಮೋದಿ, ಅಮಿತ್‌ ಶಾ ನಿರ್ಧಾರದಿಂದ ನಾವೆಲ್ಲ ನಿರ್ಭೀತರಾಗಿದ್ದೇವೆ: ಸದಾನಂದ ಗೌಡ

Public TV
By Public TV
57 minutes ago
Modi 2 1
Latest

ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

Public TV
By Public TV
59 minutes ago
Thawar Chand Gehlot 1
Bengaluru City

ರಾಜ್ಯದಲ್ಲಿ ಸಾಮಾಜಿಕ, ರಾಜಕೀಯ ಚೈತನ್ಯ ಉದಯಿಸುತ್ತಿದೆ: ಗೆಹ್ಲೋಟ್‌

Public TV
By Public TV
1 hour ago
Thawar Chand Gehlot 2
Bengaluru City

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್‌ರಿಂದ ಧ್ವಜಾರೋಹಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?