-ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಜನರ ಅರೆಸ್ಟ್ ಬಳಿಕ ಕ್ರಮಕ್ಕೆ ಮುಂದಾದ ಪೊಲೀಸರು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್ಲ್ಲಿ ಜಾಮೀನಿನ ಮೇಲೆ ಹೊರಗಿರುವ 5 ಆರೋಪಿಗಳಿಗೂ ಇದೀಗ ಸಂಕಷ್ಟ ಶುರುವಾಗಿದೆ.ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ – ನಿವೃತ್ತ ಲೋಕೋಪೈಲೆಟ್ ಅರೆಸ್ಟ್
ಇತ್ತೀಚಿಗಷ್ಟೇ ಆ.14ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಜನರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗಳಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪೊಲೀಸರು ಮತ್ತೆ 5 ಆರೋಪಿಗಳ ಜಾಮೀನು ರದ್ದು ಮಾಡೋದಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಪೂರ್ವಾನುಮತಿ ಕೇಳಿದ್ದರು. ಅದರಂತೆ ಸರ್ಕಾರ ಅನುಮತಿ ನೀಡಿದೆ.
ಇದೀಗ ಸೆಷನ್ ಕೋರ್ಟ್ನಲ್ಲಿ ಜಾಮೀನು ಪಡೆದುಕೊಂಡಿದ್ದ ಐದು ಆರೋಪಿಗಳಾದ ಪವನ್, ರಾಘವೇಂದ್ರ, ವಿನಯ್, ಧನ್ರಾಜ್ ಮತ್ತು ನಂದೀಶ್ ಜಾಮೀನು ರದ್ದುಗಳಿಸುವಂತೆ ಪೊಲೀಸರು ಶುಕ್ರವಾರ (ಆ.21) ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಕೆ ಮಾಡಲಿದ್ದಾರೆ.ಇದನ್ನೂ ಓದಿ: ಚಿತ್ರದುರ್ಗ ವರ್ಷಿತಾ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಪರಮೇಶ್ವರ್