ಬೆಂಗಳೂರು: ಕೊಲೆ ಪ್ರಕರಣವೊಂದರ ಸಂಬಂಧ ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (ChallengingStar Darshan) ಬಂಧನದ ಬೆನ್ನಲ್ಲೇ ಇದೀಗ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಳಸಂಚು ಆರೋಪದ ಮೇಲೆ ನಟಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪವಿತ್ರಾ ಗೌಡ (Pavithra Gowda) ಹಾಗೂ ದರ್ಶನ್ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಪವಿತ್ರಾ ಗೌಡ ಸೋಶಿಯಲ್ ಮೀಡಿಯಾ ಪೋಸ್ಟ್ ಗೆ ರೇಣುಕಾಸ್ವಾಮಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗಿತ್ತಿದ್ದು, ಇದೇ ಕಾರಣಕ್ಕೆ ದರ್ಶನ್ ಬಾಡಿಗಾರ್ಡ್ಗಳು ಬೆದರಿಸಲು ಹೋಗಿ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಏನಿದು ಹತ್ಯೆ ಪ್ರಕರಣ? ದರ್ಶನ್ ಅರೆಸ್ಟ್ ಆಗಿದ್ದು ಯಾಕೆ? ಇಲ್ಲಿದೆ ಪೂರ್ಣ ವಿವರ