ಚಿತ್ರದುರ್ಗ: ಅನಾರೋಗ್ಯ ಕಾರಣಕ್ಕೆ ದರ್ಶನ್ಗೆ (Darshan) ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ. ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ ಇದೆ ಎಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ರೇಣಕಾಸ್ವಾಮಿ ಚಿಕ್ಕಪ್ಪ ಷಡಕ್ಷರಿ ಮಾತನಾಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್ಗೆ ಹೈಕೋರ್ಟ್ (High Court) 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಚಿತ್ರದುರ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: Darshan Case File | ಜೂನ್ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?
ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ, ಭರವಸೆ ಇದೆ. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ, ಚೇತರಿಸಿಕೊಳ್ಳಲಿ. ಎಸ್ಪಿಪಿ ಪ್ರಸನ್ನ ಕುಮಾರ್ ಉತ್ತಮವಾಗಿ ವಾದ ಮಂಡಿಸಿದ್ದಾರೆ. ಪಾಸ್ಪೋರ್ಟ್ ವಶಕ್ಕೆ ಪಡೆದು ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗುವ ನಂಬಿಕೆ ನಮಗಿದೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ದರ್ಶನ್ಗೆ ಜಾಮೀನು – ಹೈಕೋರ್ಟ್ ವಿಧಿಸಿದ ಆ 8 ಷರತ್ತುಗಳೇನು?
ನಮಗೆ ಮೊದಲಿನಿಂದಲೂ ಮನಸ್ಸಿಗೆ ನೋವಾಗಿದೆ. ಜಾಮೀನು ಮಂಜೂರು ಆಗಿರುವುದು ಕಾನೂನು ವ್ಯವಸ್ಥೆಯಲ್ಲಿ. ಕೋರ್ಟ್ ತೀರ್ಪಿನ ಬಗ್ಗೆ ಮಾತನಾಡೋದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್ನಿಂದ 6 ವಾರಗಳ ಜಾಮೀನು ಮಂಜೂರು