Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಸಿಸಿಐ ಕಾಮೆಂಟರಿ ಪ್ಯಾನೆಲ್‍ನಿಂದ ಸಂಜಯ್ ಮಂಜ್ರೇಕರ್ ಔಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಬಿಸಿಸಿಐ ಕಾಮೆಂಟರಿ ಪ್ಯಾನೆಲ್‍ನಿಂದ ಸಂಜಯ್ ಮಂಜ್ರೇಕರ್ ಔಟ್

Cricket

ಬಿಸಿಸಿಐ ಕಾಮೆಂಟರಿ ಪ್ಯಾನೆಲ್‍ನಿಂದ ಸಂಜಯ್ ಮಂಜ್ರೇಕರ್ ಔಟ್

Public TV
Last updated: March 14, 2020 4:23 pm
Public TV
Share
3 Min Read
Sanjay Manjrekar
SHARE

ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರನ್ನು ಬಿಸಿಸಿಐ ಕಾಮೆಂಟರಿ ಪ್ಯಾನೆಲ್‍ನಿಂದ ಕೈಬಿಡಲಾಗಿದೆ. ಜೊತೆಗೆ ಐಪಿಎಲ್‍ನಿಂದಲೂ ಕೈಬಿಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಂಜಯ್ ಮಂಜ್ರೇಕರ್ ಅವರನ್ನು ಯಾಕೆ ಬಿಸಿಸಿಐ ಕೈಬಿಟ್ಟಿದೆ? ಈ ಸಮಯದಲ್ಲಿ ಇಂತಹ ನಿರ್ಧಾರ ಯಾಕೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಆದರೆ ವರದಿಗಳ ಪ್ರಕಾರ, ಬಿಸಿಸಿಐಗೆ ಸಂಜಯ್ ಮಂಜ್ರೇಕರ್ ಅವರ ಕೆಲಸ ತೃಪ್ತಿ ತಂದಿಲ್ಲ ಎನ್ನಲಾಗಿದೆ.

Sanjay Manjrekar A

ಈ ಹಿಂದೆ ಬಿಸಿಸಿಐ ಅಧ್ಯಕ್ಷರಾಗುವುದಕ್ಕೂ ಮೊದಲು ಸೌರವ್ ಗಂಗೂಲಿ ಮಂಜ್ರೇಕರ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. 2019ರ ಜೂನ್ 9 ರಂದು ಹೆಸರು ಪ್ರಸ್ತಾಪಿಸದೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸೌರವ್ ಗಂಗೂಲಿ, ಟ್ವಿಟ್ಟರ್ ನಲ್ಲಿ ಅವರು ಮಾಡಿದ ಕಾಮೆಂಟ್, ಬ್ಯಾಟಿಂಗ್ ಅರ್ಥಹೀನ. ಅವರಿಗೆ ಆಲೋಚನೆಗಳ ಕೊರತೆಯಿದೆ. ಅವರು ಕೇವಲ ನಕಾರಾತ್ಮಕ ರೀತಿಯಲ್ಲಿ ಗಮನ ಸೆಳೆಯುವವರಾಗಿರಬಹುದು ಎಂದು ಬರೆದುಕೊಂಡಿದ್ದರು.

His comments on Twitter is a bit like his batting meaningless and and lack of ideas .. may be just an attention seeker…in the negative way 😂

— Sourav Ganguly (@SGanguly99) June 9, 2019

ಮಂಜ್ರೇಕರ್ ಅವರು 1996ರಲ್ಲಿ ನಿವೃತ್ತಿಯಾದ ನಂತರ ಕಳೆದ 3 ವಿಶ್ವಕಪ್ ಮತ್ತು ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿಗಳಿಗೆ ಕಾಮೆಂಟರಿ ಪ್ಯಾನೆಲ್‍ನ ಭಾಗವಾಗಿದ್ದರು. ಆದರೆ ಮಂಡಳಿ ಮೂಲಗಳ ಪ್ರಕಾರ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಧರ್ಮಶಾಲಾದಲ್ಲಿ ಮಳೆಯಿಂದಾಗಿ ರದ್ದಾದ ಏಕದಿನ ಪಂದ್ಯದ ವೇಳೆ ಅವರು ಹಾಜರಿರಲಿಲ್ಲ. ಆದರೆ ಸುನೀಲ್ ಗವಾಸ್ಕರ್, ಲಕ್ಷ್ಮಣ್ ಶಿವರಾಮಕೃಷ್ಣನ್, ಮುರಳಿ ಕಾರ್ತಿಕ್ ಅವರು ಬಿಸಿಸಿಐ ಕಾಮೆಂಟರಿ ಪ್ಯಾನೆಲ್ ಸೇರಿದ ಸ್ಥಳದಲ್ಲಿದ್ದರು. ಹೀಗಾಗಿ ಅಂದಿನಿಂದ ಅವರನ್ನು ಕೈಬಿಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ.

"By bits 'n' pieces of sheer brilliance, he's ripped me apart on all fronts."@sanjaymanjrekar has something to say to @imjadeja after the all-rounder's fantastic performance against New Zealand.#INDvNZ | #CWC19 pic.twitter.com/i96h5bJWpE

— ICC (@ICC) July 10, 2019

ಜಡೇಜಾ ಬಗ್ಗೆ ವಿವಾದಾತ್ಮಕ ಹೇಳಿಕೆ:
ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಲ್‍ರೌಂಡರ್ ರವೀಂದ್ರ ಜಡೇಜಾ ಹಾಗೂ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಜರ್ ನಡುವೆ ವಾಕ್ ಯುದ್ಧ ನಡೆದಿತ್ತು. ಅಂದು ಜಡೇಜಾರಂತಹ `ಬಿಟ್ಸ್ ಅಂಡ್ ಪೀಸಸ್’ ಆಟಗಾರನಿಗೆ ನಾನು ಅಭಿಮಾನಿಯಲ್ಲ. ಜಡೇಜಾ ಟೆಸ್ಟ್ ಏಕದಿನ ಮಾದರಿ ಸಿಮೀತ ಓವರ್ ಗಳ ಕ್ರಿಕೆಟ್‍ಗೆ ಫಿಟ್ ಅಲ್ಲ. ಆತ ಟೆಸ್ಟ್ ಕ್ರಿಕೆಟ್ ಮಾತ್ರ ಅಗತ್ಯ ಎಂದು ವ್ಯಾಖ್ಯಾನಿಸಿದ್ದರು.

ಮಂಜ್ರೇಕರ್ ಅವರ ಈ ಕಾಮೆಂಟ್‍ಗಳಿಗೆ ತಿರುಗೇಟು ನೀಡಿದ್ದ ಜಡೇಜಾ, ತನ್ನ ಸ್ಥಾನ ಯಾವುದು ಎಂದು ತಿಳಿದುಕೊಂಡು ಮಾತನಾಡಿ. ನಿಮಗಿಂತ ಹೆಚ್ಚು ಪಂದ್ಯಗಳನ್ನು ದೇಶದ ಪರ ಆಡಿದ್ದೇನೆ ಎಂದಿದ್ದರು.

Ravindra Jadeja Sanjay Manjrekar

ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಪಡೆದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೆಎಲ್ ರಾಹುಲ್ ಅವರಿಗೆ ನೀಡಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಮಂಜ್ರೇಕರ್ ಅವರು, ಈ ಪಂದ್ಯದಲ್ಲಿ ಬೌಲರ್ ಗಳಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿರುತ್ತಿತ್ತು ಎಂದಿದ್ದರು. ಮಂಜ್ರೇಕರ್ ಅವರ ಅಭಿಪ್ರಾಯಕ್ಕೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದ ಜಡೇಜಾ, ಆ ಬೌಲರ್ ಹೆಸರನ್ನು ಹೇಳಿ ಎಂದು ಅಣಕಿಸಿದ್ದರು.

ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ಓವರ್ ಗಳಲ್ಲಿ 18 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದಿದ್ದರು. ಬೌಲರ್ ಗಳ ಪ್ರದರ್ಶನವನ್ನು ಪರಿಗಣಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ದರೆ ಜಡೇಜಾ ಅವರಿಗೆ ಲಭಿಸುತ್ತಿತ್ತು. ಜಡೇಜಾ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಮಂಜ್ರೇಕರ್ ಅವರು, ನಿನಗೆ ಅಥವಾ ಬುಮ್ರಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಬಹುದಿತ್ತು. ಬುಮ್ರಾಗೆ ಏಕೆ ಎಂದರೆ ಆತ ಮಾಡಿದ 3, 10, 18 ಮತ್ತು 20 ಓವರ್ ಗಳ ಎಕಾನಮಿ ತುಂಬಾ ಉತ್ತಮವಾಗಿದೆ ಎಂದು ತಮ್ಮ ಸಮರ್ಥನೆಯನ್ನು ತಿಳಿಸಿದ್ದರು.

Ha ha…Either you or Bumrah. Bumrah, because he was extremely economical while bowling overs no 3, 10, 18 and 20. https://t.co/r2Fa4Tdnki

— Sanjay Manjrekar (@sanjaymanjrekar) January 27, 2020

ಹರ್ಷ ಭೋಗ್ಲೆಗೆ ಅವಮಾನ:
ಮಂಜ್ರೇಕರ್ ತಮ್ಮ ಹೇಳಿಕೆಯೊಂದಿಗೆ ವಿವಾದವನ್ನು ಹುಟ್ಟುಹಾಕಿದ ಏಕೈಕ ಘಟನೆ ಹಲವು ಬಾರಿ ನಡೆದಿದೆ. ಕಳೆದ ವರ್ಷ ಕೋಲ್ಕತ್ತಾದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಸಹವರ್ತಿ ಹರ್ಷ ಭೋಗ್ಲೆ ಅವರನ್ನು ಅವಮಾನಿಸಲು ಪ್ರಯತ್ನಿಸಿದ್ದರು. ‘ನೀವು ಕ್ರಿಕೆಟ್ ಆಡಿಲ್ಲ. ಕ್ರಿಕೆಟ್ ಆಟಗಾರರು ಮಾತ್ರ ಮೈದಾನದಲ್ಲಿ ನಡೆಯುತ್ತಿರುವ ವಿಷಯಗಳ ಬಗ್ಗೆ ಮಾತನಾಡಬಹುದು’ ಎಂದು ಹೇಳಿ ಅಣಕಿಸಿದ್ದರು.

TAGGED:bcciCommentary PanelFormer India batsmanPublic TVSanjay Manjrekarಕಾಮೆಂಟರಿ ಪ್ಯಾನೆಲ್ಪಬ್ಲಿಕ್ ಟಿವಿಬಿಸಿಸಿಐರವೀಂದ್ರ ಜಡೇಜಾಸಂಜಯ್ ಮಂಜ್ರೇಕರ್ಸೌರವ್ ಗಂಗೂಲಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
16 minutes ago
DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
55 minutes ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
2 hours ago
Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
2 hours ago
kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
2 hours ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?