Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ಯಾಬ್ಲೋಗಳನ್ನು ಮೋದಿ ಸರ್ಕಾರ ಆಯ್ಕೆ ಮಾಡಲ್ಲ – ರಾಜ್ಯಗಳ ಆರೋಪಕ್ಕೆ ಕರಂದ್ಲಾಜೆ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಟ್ಯಾಬ್ಲೋಗಳನ್ನು ಮೋದಿ ಸರ್ಕಾರ ಆಯ್ಕೆ ಮಾಡಲ್ಲ – ರಾಜ್ಯಗಳ ಆರೋಪಕ್ಕೆ ಕರಂದ್ಲಾಜೆ ತಿರುಗೇಟು

Latest

ಟ್ಯಾಬ್ಲೋಗಳನ್ನು ಮೋದಿ ಸರ್ಕಾರ ಆಯ್ಕೆ ಮಾಡಲ್ಲ – ರಾಜ್ಯಗಳ ಆರೋಪಕ್ಕೆ ಕರಂದ್ಲಾಜೆ ತಿರುಗೇಟು

Public TV
Last updated: January 17, 2022 8:06 pm
Public TV
Share
2 Min Read
SHOBHA KARNDALAJE 1
SHARE

ನವದೆಹಲಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಯಾವುದು ಇರಬೇಕು? ಯಾವುದು ಇರಬಾರದು ಎನ್ನುವುದನ್ನು ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ನಿರ್ಧರಿಸುವುದಿಲ್ಲ. ಆದರೆ ರಾಜ್ಯಗಳು ವರ್ಷದಿಂದ ವರ್ಷಕ್ಕೆ ತಪ್ಪು ಮಾಹಿತಿಯನ್ನು ಬಳಸಿಕೊಂಡು ಕೇಂದ್ರದಿಂದ ಅವಮಾನವಾಗಿದೆ ಎಂಬ ಅದೇ ಹಳೆಯ ತಂತ್ರವನ್ನು ಮುಂದುವರಿಸಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಶ್ಚಿಮ, ಬಂಗಾಳ, ಕೇರಳ ಟ್ಯಾಬ್ಲೋಗಳಿಗೆ ಅನುಮತಿ ನೀಡದೇ ಅನ್ಯಾಯ ಮಾಡಲಾಗಿದೆ ಎಂಬ ಅರೋಪಕ್ಕೆ ಶೋಭಾ ಕರಂದ್ಲಾಜೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

Mamata 1

ಹೇಳಿಕೆಯಲ್ಲಿ ಏನಿದೆ?
ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಮ್ಮ ರಾಜ್ಯದ ಟ್ಯಾಬ್ಲೋಗಳನ್ನು ಹೊರಗಿಟ್ಟ ಬಗ್ಗೆ ರಾಜ್ಯದ ಸಿಎಂಗಳು ಇತ್ತೀಚೆಗೆ ಪತ್ರಗಳನ್ನು ಬರೆಯುತ್ತಿರುವುದನ್ನು ನಾವು ನೋಡಿದ್ದೇವೆ. ಇದು ಪ್ರಾದೇಶಿಕ ಅಭಿಮಾನದೊಂದಿಗೆ ತಪ್ಪಾಗಿ ತಳುಕು ಹಾಕಿಕೊಂಡಿದ್ದು, ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಬಿಂಬಿಸಲಾಗುತ್ತಿದೆ. ಇದನ್ನೂ ಓದಿ: ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು

ಬಹುಶಃ ಸಿಎಂಗಳಿಗೆ ತಮ್ಮದೇ ಆದ ಸಕಾರಾತ್ಮಕ ಅಜೆಂಡಾ ಇಲ್ಲ, ಅವರು ವರ್ಷದಿಂದ ವರ್ಷಕ್ಕೆ ತಪ್ಪು ಮಾಹಿತಿಯನ್ನು ಬಳಸಿಕೊಂಡು ಅದೇ ಹಳೆಯ ತಂತ್ರವನ್ನು ಮುಂದುವರಿಸಿ ಕೇಂದ್ರದಿಂದ ಅವಮಾನ ಆಗಿದೆ ಎಂಬಂತೆ ಬಿಂಬಿಸುತ್ತಿದ್ದಾರೆ. ಟ್ಯಾಬ್ಲೋಗಳನ್ನು ಮೋದಿ ಸರ್ಕಾರ ನಿರ್ಧಾರ ಮಾಡುತ್ತಿಲ್ಲ. ಕಲೆ, ಸಂಸ್ಕೃತಿ, ಶಿಲ್ಪಕಲೆ, ಸಂಗೀತ, ವಾಸ್ತುಶಿಲ್ಪ, ನೃತ್ಯ ಸಂಯೋಜನೆ ಇತ್ಯಾದಿ ಕ್ಷೇತ್ರದ ಗಣ್ಯರನ್ನು ಒಳಗೊಂಡ ತಜ್ಞರ ಸಮಿತಿ ಸರಣಿ ಸಭೆ ನಡೆಸಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳಿಂದ ಸ್ವೀಕರಿಸಲಾದ ಟ್ಯಾಬ್ಲೋಗಳ ಪ್ರಸ್ತಾಪಗಳನ್ನು ಪರಿಶೀಲಿಸುತ್ತದೆ. ಥೀಮ್, ಪರಿಕಲ್ಪನೆ, ವಿನ್ಯಾಸ ಮತ್ತು ದೃಶ್ಯ ಈ ಮಾನದಂಡಗಳ ಆಧಾರದ ಮೇಲೆ ಶಿಫಾರಸು ಮಾಡಲಾಗುತ್ತದೆ.

MK Stalin

ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗಾಗಿ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳಿಂದ ಒಟ್ಟು 56 ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿತ್ತು. ಈ 56 ರಲ್ಲಿ ಅಂತಿಮವಾಗಿ 21 ಪ್ರಸ್ತಾವನೆಗಳನ್ನು ಆಯ್ಕೆ ಮಾಡಲಾಗಿದೆ. ಸಮಯದ ಕೊರತೆಯಿಂದ ಕೆಲ ಪ್ರಸ್ತಾವನೆಗಳನ್ನು ತಿರಸ್ಕರಿಸುವುದು ಸಹಜ. ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪ್ರಸ್ತಾವನೆಗಳನ್ನು ವಿಷಯ ತಜ್ಞರ ಸಮಿತಿಯು ಸರಿಯಾದ ಪ್ರಕ್ರಿಯೆ ಮತ್ತು ಸೂಕ್ತ ಚರ್ಚೆಯ ನಂತರ ತಿರಸ್ಕರಿಸಿದೆ. ಇದನ್ನೂ ಓದಿ: ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು

tableau

2018 ಮತ್ತು 2021 ರಲ್ಲಿ ಅದೇ ಮೋದಿ ಸರ್ಕಾರದ ಅಡಿಯಲ್ಲಿ ಅದೇ ಪ್ರಕ್ರಿಯೆ ಮತ್ತು ವ್ಯವಸ್ಥೆಯ ಮೂಲಕ ಕೇರಳದ ಪ್ರಸ್ತಾಪಗಳನ್ನು ಅಂಗೀಕರಿಸಲಾಗಿದೆ. ಅದೇ ರೀತಿ 2016, 2017, 2019, 2020 ಮತ್ತು 2021 ರಲ್ಲಿ ಅದೇ ಮೋದಿ ಸರ್ಕಾರ ಇದ್ದಾಗ ತಮಿಳುನಾಡಿನ ಟ್ಯಾಬ್ಲೋ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಗಿತ್ತು.

2016, 2017, 2019 ಮತ್ತು 2021 ರಲ್ಲಿ ಮೋದಿ ಸರ್ಕಾರ ಆಡಳಿತದಲ್ಲಿದ್ದಾಗ ಪಶ್ಚಿಮ ಬಂಗಾಳದ ಪ್ರಸ್ತಾಪಗಳಿಗೆ ಅನುಮತಿ ನೀಡಲಾಗಿತ್ತು ಎಂಬುದನ್ನು ಸಹ ಗಮನಿಸಬೇಕು. ಈ ಬಾರಿಯ ಪರೇಡ್‌ನಲ್ಲಿ ಕೇಂದ್ರ ಲೋಕೋಪಯೋಗಿ ಇಲಾಖೆಯ ಟ್ಯಾಬ್ಲೋ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರನ್ನು ಒಳಗೊಂಡಿದೆ. ಅದ್ದರಿಂದ ನೇತಾಜಿ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ.

TAGGED:republic dayshobha karandlajetableauಗಣರಾಜ್ಯೋತ್ಸವಟ್ಯಾಬ್ಲೋಪರೇಡ್ಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Siddaramaiah
Bengaluru City

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ – LPG ದರ ಏರಿಕೆಗೆ ಸಿಎಂ ಕಿಡಿ

Public TV
By Public TV
1 hour ago
Indias energy supplies
Latest

ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್‌ ಮಾತು

Public TV
By Public TV
1 hour ago
Gujarat Girls Suicide
Crime

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

Public TV
By Public TV
2 hours ago
Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
2 hours ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
3 hours ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?