ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಇಲ್ಲ ಅವಕಾಶ – ಟ್ಯಾಬ್ಲೋ ಚಿತ್ರ ನೋಡಿ..

Public TV
1 Min Read
Karnataka tableau

-ವಸ್ತು ಪ್ರದರ್ಶನ ಗ್ರೌಂಡ್‌ನಲ್ಲಿ ಟ್ಯಾಬ್ಲೋ ಇಡಲು ಸೂಚನೆ
-ಸಿಎಂ ಸಿದ್ದರಾಮಯ್ಯ ಮನವಿಯಿಂದಲೂ ಆಗಿಲ್ಲ ಪ್ರಯೋಜನ

ಬೆಂಗಳೂರು: 75ನೇ ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯಲ್ಲಿ ಪಥ ಸಂಚಲನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅವಕಾಶ ನಿರಾಕರಿಸಲಾಗಿದೆ.

Karnataka tableau 1

ವಸ್ತು ಪ್ರದರ್ಶನ ಗ್ರೌಂಡ್‌ನಲ್ಲಿ ಟ್ಯಾಬ್ಲೋ ಇಡಲು ಸೂಚನೆ ನೀಡಲಾಗಿದೆ. ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕರ್ನಾಟಕವು ಸ್ತಬ್ಧಚಿತ್ರವನ್ನು ತಯಾರಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕರ್ತವ್ಯ ಪಥದಲ್ಲಿ ಪಥ ಸಂಚಲನ ನಡೆಯಲಿದೆ. ಇದನ್ನೂ ಓದಿ: ಕರ್ನಾಟಕ ಜನರ ಭಾವನೆಗಳಿಗೆ ನೋವುಂಟಾಗಿದೆ; ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಮನವಿ

karnataka tableau 1 1

ಕರ್ತವ್ಯ ಪಥದಲ್ಲಿ ನಡೆಯಲಿರುವ 2024ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕವನ್ನು ಸೇರಿಸಲಾಗಿಲ್ಲ. ಬದಲಾಗಿ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವ್ ವಿಭಾಗದಲ್ಲಿ ಇರಿಸಲಾಗಿದೆ. ಈ ಸಂಬಂಧ ಕೇಂದ್ರ ರಕ್ಷಣಾ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಟ್ಯಾಬ್ಲೋಗೆ ಅವಕಾಶ ನೀಡದಿರುವ ನಿರ್ಧಾರವು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ. ಸ್ತಬ್ಧಚಿತ್ರವನ್ನು ಪರೇಡ್‌ನಿಂದ ಹೊರಗಿಟ್ಟಿರುವುದು ಕರ್ನಾಟಕದ ಜನತೆಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ಏಳು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು, 2024 ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಾಂಡ್ ಬೆಂಗಳೂರು ಸ್ತಬ್ದಚಿತ್ರ ಪ್ರದರ್ಶಿಸಲು ಅನುವು ಮಾಡಿಕೊಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

Share This Article