ಕನ್ನಡದ ಹೆಸರಾಂತ ನಟ ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರನ್ನು ಭೇಟಿ ಮಾಡಿದ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ. ಹರೀಶ್, ಮನವಿ ಪತ್ರವನ್ನು ನೀಡಿದರು. ಕನ್ನಡ ಸಿನಿಮಾ ರಂಗಕ್ಕೆ ಸಾಕಷ್ಟು ಸೇವೆ ಸಲ್ಲಿಸಿರುವ ಅಂಬರೀಶ್ ಅವರಿಗೆ ರಸ್ತೆಗೆ ನಾಮಕರಣ ಮಾಡುವ ಮೂಲಕ ಗೌರವ ಸಲ್ಲಿಸುವಂತೆ ಮನವಿ ಮಾಡಿದೆ.
ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಕೊಟ್ಟಿರುವ ಮನವಿ ಪತ್ರದಲ್ಲಿ, ‘ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಸಾಧಕರಾದ ಪದ್ಮಭೂಷಣ ಡಾ.ರಾಜ್ ಕುಮಾರ್, ಶ್ರೀಮತಿ ಪಾರ್ವತಮ್ಮ ರಾಜಕುಮಾರ್, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇವರುಗಳ ಜ್ಞಾಪಕಾರ್ಥವಾಗಿ ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ರಸ್ತೆಗಳಿಗೆ ಅವರ ಹೆಸರನ್ನು ಘನ ಸರ್ಕಾರವು ಈಗಾಗಲೇ ನಾಮಕರಣ ಮಾಡಿರುವುದು ಇಡೀ, ಚಿತ್ರೋದ್ಯಮಕ್ಕೆ ಸಂದ ಗೌರವವಾಗಿದೆ. ಅದಕ್ಕಾಗಿ ಚಿತ್ರೋದ್ಯಮ ಆಭಾರಿಯಾಗಿದೆ’ ಎಂದು ಬರೆದಿದ್ದಾರೆ. ಇದನ್ನೂ ಓದಿ: ಹಿಂದಿ ಸೇರಿ ಏಳು ಸಿನಿಮಾಗಳಲ್ಲಿ ರಾಗಿಣಿ ದ್ವಿವೇದಿ ಬ್ಯುಸಿ
ಮುಂದುವರೆದ ಪತ್ರದಲ್ಲಿ ‘ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಖ್ಯಾತ ಕಲಾವಿದ ರೆಬೆಲ್ ಸ್ಟಾರ್ ಡಾ.ಅಂಬರೀಶ್ ಅವರಿಗೆ 70 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹಾನ್ ಸಾಧಕರಾದ ಅಂಬರೀಶ್ ಹೆಸರನ್ನು ಪರಿಗಣಿಸಿ, ರಾಂ ನಾರಾಯಣ ಚಲರಾಮ್ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕೆಂದು ಚಿತ್ರೋದ್ಯಮದ ಮಹಾಸಾದೆಯಾಗಿದೆ. ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳಿಗೂ ಮನವಿ ಪತ್ರ ಸಲ್ಲಿಸಲಾಗಿದೆ’ ಎಂದು ಬರೆಯಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k