Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
Last updated: April 11, 2026 9:31 pm
Public TV
Share
3 Min Read
Shobha Karandlaje 1
SHARE

– 10 ದಿನಗಳ ಕಾಲ ಮಹಿಳಾ ಜಾಗೃತಿ

ಬೆಂಗಳೂರು: ಮಹಿಳಾ ಮೀಸಲಾತಿ ಜಾರಿ ಸಂಬಂಧ ಸಂಸತ್ ಅಧಿವೇಶನ ನಡೆಯಲಿದೆ. ನಾರಿ ಶಕ್ತಿ ವಂದನ್ ಮಸೂದೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತಮ್ಮ ಹಕ್ಕಿನ ಬಗ್ಗೆ ಮುಂದಿನ 10 ದಿನಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುವುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆಯನ್ನು ಸ್ವೀಕಾರ ಮಾಡಿ, ಮುಂದೆ ವಿವಿಧ ಕ್ಷೇತ್ರಗಳ ತಜ್ಞರನ್ನು ಗುರುತಿಸಿ, ಅವರಿಗೆ ಟಿಕೆಟ್ ಕೊಡುವಂತಾಗಲಿದೆ. ಮಹಿಳಾ ಮೀಸಲಾತಿ ಜಾರಿಗಾಗಿ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಸಮರ್ಪಿಸಿದರು. ಇದನ್ನೂ ಓದಿ: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

ಮಹಿಳಾ ಮೀಸಲಾತಿ ಎಂಬುದು ಬಹಳ ವರ್ಷಗಳಿಂದ ಒಂದು ಕೂಗು, ಅಪೇಕ್ಷೆ, ಬೇಡಿಕೆಯಾಗಿತ್ತು. ಅದು ಈಡೇರುವ ವಿಚಾರದಲ್ಲಿ ಸಂಶಯವಿತ್ತು. ಸುಮಾರು 15 ವರ್ಷಗಳ ಹಿಂದೆ ಇದು ಸಂಸತ್ತಿನಲ್ಲಿ ಚರ್ಚೆಗೆ ಬಂದಾಗ ಕೆಲವು ರಾಜಕೀಯ ಪಕ್ಷದವರು ಮಸೂದೆಯ ಹಾಳೆಯನ್ನು ಹರಿದು ಹಾಕಿ, ಪ್ರಬಲ ವಿರೋಧ ವ್ಯಕ್ತಪಡಿಸಿದ್ದರು. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ವಿರೋಧಿ ಮಾನಸಿಕತೆ ಮತ್ತು ದಾಷ್ಟ್ರ‍್ಯ ಇವೆರಡನ್ನೂ ತೋರಿಸಲಾಗಿತ್ತು. ಬಳಿಕ ಈ ಮಸೂದೆ ನೆನೆಗುದಿಗೆ ಬಿದ್ದಿತ್ತು. ಯುಪಿಎ 10 ವರ್ಷಗಳ ಅಧಿಕಾರದ ಅವಧಿಯಲ್ಲಿ ಇದನ್ನು ಮುಂದಕ್ಕೆ ತರಲಾಗಲಿಲ್ಲ. ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯಾದ ಮೇಲೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸೇರಿ ಎಲ್ಲ ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದರು ಎಂದು ವಿಶ್ಲೇಷಿಸಿದರು.

ಕರ್ನಾಟಕದ ಗ್ರಾಮ ಪಂಚಾಯಿತಿಗಳ ಅತ್ಯುತ್ತಮ ಸಾಧನೆ ಗಣನೆಗೆ ತೆಗೆದುಕೊಂಡರೆ ಮಹಿಳೆ ಅಧ್ಯಕ್ಷೆ ಆಗಿರುವ ಕಡೆ ಉತ್ಕೃಷ್ಟ ಸಾಧನೆ ಇತ್ತು. ಅಂಥಲ್ಲೇ ಪ್ರಶಸ್ತಿ ಲಭಿಸಿತ್ತು. ಸಂಸತ್ ಟಿಕೆಟ್ ವಿಚಾರದಲ್ಲಿ ಈಗಾಗಲೇ ಜನಪ್ರತಿನಿಧಿ ಆಗಿರುವವರಿಗೆ ಎಲ್ಲ ಪಕ್ಷಗಳು ಆದ್ಯತೆ ಕೊಡಲಿವೆ. ಈಗಿನಿಂದಲೇ ಗುರುತಿಸುವ ಕಾರ್ಯ ನಡೆಯಬೇಕಿದೆ ಎಂದು ಹೇಳಿದರು.

ಹಳದಿ ಗ್ಲಾಸ್ ಹಾಕಿಕೊಂಡ ಕಾಂಗ್ರೆಸ್:
ಕಾಂಗ್ರೆಸ್‌  ಹಳದಿ ಗ್ಲಾಸ್ ಹಾಕಿಕೊಂಡಿದೆ. ಅದರಿಂದ ಯಾವುದನ್ನು ನೋಡಿದರೂ ಹಳದಿ, ಚುನಾವಣೆಯೇ ಅವರಿಗೆ ಗೋಚರಿಸುತ್ತಿದೆ. ಮಹಿಳಾ ಮೀಸಲಾತಿ ಮಸೂದೆಯು ರಾಜ್ಯಗಳ ಚುನಾವಣೆ ಮೇಲೆ ಪ್ರಭಾವ ಬೀರುವುದೆಂದು ನನಗೆ ಅನಿಸುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಈ ಮಸೂದೆಗೆ ವಿರೋಧ ಇದ್ದಾರಾ ಅಥವಾ ಈಗ ಚರ್ಚೆ ಮಾಡುವುದಕ್ಕೆ ವಿರೋಧ ಇದ್ದಾರಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಮಸೂದೆಗೆ ವಿರೋಧ, ಮೊಸಳೆ ಕಣ್ಣೀರು:
ಇಂದಿರಾ ಗಾಂಧಿಯವರು ಪ್ರಧಾನಿ ಆಗಿದ್ದ ಪಕ್ಷದಲ್ಲಿ ಸೋನಿಯಾ ಗಾಂಧಿಯವರು ಯುಪಿಎಯನ್ನು ನಿಯಂತ್ರಿಸುತ್ತಿದ್ದಾಗ ಮಹಿಳಾ ಮೀಸಲಾತಿ ಕುರಿತು ಚರ್ಚೆ ನಡೆಯಿತ. ಮೊಸಳೆ ಕಣ್ಣೀರು ಸುರಿಸಿದ್ದರು. ಕೆಲವು ಬಾರಿ ವಿರೋಧಿಸಿದ್ದರು. ಅವರಿಗೆ ಮಹಿಳೆ ಎಂದರೆ ಈಗ ಪ್ರಿಯಾಂಕ ಗಾಂಧಿ ಮಾತ್ರ. ಬೇರೆ ಮಹಿಳೆಯರು ಬರುವುದು ಅವರಿಗೆ ಅಗತ್ಯ ಇಲ್ಲ. ಪ್ರಿಯಾಂಕ ಗಾಂಧಿ ಬೇಕು. ಬೇರೆ ಮಹಿಳೆಯರಿಗೆ ಅವಕಾಶ ಬೇಡ ಎಂಬುದು ಕಾಂಗ್ರೆಸ್ಸಿನ ಮಾನಸಿಕತೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಹೊರತುಪಡಿಸಿ ಸಾಮಾನ್ಯ ಮಹಿಳೆಯರು ಸಂಸತ್ತಿಗೆ ಬರುವುದು ಅವರಿಗೆ ಬೇಕಾಗಿಲ್ಲ. ಈ ಮಾನಸಿಕತೆಯನ್ನು ಅವರು ಬದಲಿಸಿಕೊಳ್ಳಲಿ ಎಂದರು.

ಸಹಿ ಸಂಗ್ರಹ, ಮಿಸ್ಡ್ ಕಾಲ್ ಅಭಿಯಾನ: ಕು. ಸಿ.ಮಂಜುಳಾ
ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಸಿ.ಮಂಜುಳಾ ಅವರು ಮಾತನಾಡಿ, ನಾರಿ ಶಕ್ತಿ ವಂದನ್ ಎಂಬ ಕಾಯ್ದೆ ತರಲು ಪ್ರಧಾನಿಯವರು ಮುಂದಾಗಿದ್ದು, ಅವರಿಗೆ ಅಭಿನಂದನೆಗಳು. ಈ ಸಂಬಂಧ ಎಲ್ಲ ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾದಿಂದ ಮಹಿಳಾ ಸಮಾವೇಶ ಆಯೋಜಿಸಲಾಗುವುದು. ಸಹಿ ಸಂಗ್ರಹವೂ ನಡೆಯಲಿದೆ. ನಾಳೆ ಕೆ.ಆರ್.ಪುರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಸಹಿ ಸಂಗ್ರಹ ಆರಂಭವಾಗುತ್ತದೆ. ಇದು ರಾಜ್ಯದಾದ್ಯಂತ ನಡೆಯಲಿದೆ. ಮಸೂದೆ ಬೆಂಬಲಿಸಲು ಮಿಸ್ಡ್ ಕಾಲ್ ಅಭಿಯಾನ ಮಾಡುತ್ತಿದ್ದೇವೆ. ವಿಭಾಗ ಮಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಗುತ್ತದೆ. ಯುವ ಮೋರ್ಚಾದಿಂದ ಬೈಕ್, ಸ್ಕೂಟಿ ರ್ಯಾಲಿಗಳನ್ನು ಆಯೋಜಿಸಲಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

TAGGED:bengalurubjpReservation LawWomen Conferencesಬಿಜೆಪಿ ಮಹಿಳಾ ಮೋರ್ಚಾಬೆಂಗಳೂರುಮೀಸಲು ಕಾನೂನುಶೋಭಾ ಕರಂದ್ಲಾಜೆಸ್ತ್ರೀ ಸಮಾವೇಶ
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories

You Might Also Like

Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
9 minutes ago
Shashi Tharoor 1
Latest

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು – ಮೋದಿ, ಅಮಿತ್ ಶಾರನ್ನ ಹೊಗಳಿದ ಶಶಿ ತರೂರ್

Public TV
ByPublic TV
37 minutes ago
Siddaramaiah 15
Bengaluru City

ತಮಿಳುನಾಡು ಫಲಿತಾಂಶ ಆಶ್ಚರ್ಯಕರವಾಗಿದೆ: ಸಿದ್ದರಾಮಯ್ಯ

Public TV
ByPublic TV
53 minutes ago
Panchamasali Peetha
Davanagere

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Public TV
ByPublic TV
54 minutes ago
RB Timmapur Slams Murugesh Nirarni 6 months validity govt Comments
Bengaluru City

ಹೈಕಮಾಂಡ್ ಹಂತದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಿಲ್ಲ: ಆರ್.ಬಿ.ತಿಮ್ಮಾಪುರ್

Public TV
ByPublic TV
59 minutes ago
Santosh Lad
Bengaluru City

ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?