Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

Latest

ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

Public TV
Last updated: September 28, 2021 3:45 pm
Public TV
Share
3 Min Read
Navjot singh sidhu 2
SHARE

ಚಂಡಿಗಢ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ  (PPCC) ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಸಿಧು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.

NAVJOT SINGH SIDHU

ಮನುಷ್ಯನ ಸ್ವಭಾವದ ಕುಸಿತವು ರಾಜಿ ಮೂಲೆಯಿಂದ ಹುಟ್ಟಿಕೊಂಡಿದೆ. ಪಂಜಾಬ್‍ನ ಭವಿಷ್ಯ ಮತ್ತು ಪಂಜಾಬ್‍ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಕಾಂಗ್ರೆಸ್ ಸೇವೆಯನ್ನು ಮುಂದುವರಿಸುತ್ತೇನೆ ಎಂದು ನವಜೋತ್ ಸಿಧು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

Punjab Congress chief Navjot Singh Sidhu resigns pic.twitter.com/KbDbderXeo

— ANI (@ANI) September 28, 2021

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ದೆಹಲಿ ಭೇಟಿಗೆ ಮುನ್ನ ಅವರ ಮುಂದಿನ ಕ್ರಮದ ಬಗ್ಗೆ ಊಹಾಪೋಹಗಳ ನಡುವೆಯೇ ಸಿಧು ರಾಜೀನಾಮೆ ನೀಡಿದ್ದಾರೆ. ಸೆಪ್ಟೆಂಬರ್ 18 ರಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆರಾಜೀನಾಮೆ ನೀಡಿದ ನಂತರ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮೊದಲ ರಾಜಧಾನಿಗೆ ಭೇಟಿ ಇದಾಗಲಿದೆ. ಪಂಜಾಬ್ ಕಾಂಗ್ರೆಸ್‍ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು.

Navjot Singh Sidhu

2004ರಲ್ಲಿ ಬಿಜೆಪಿ ಸೇರಿದ್ದ ಸಿಧು ಲೋಕಸಭಾ ಚುನಾವಣೆಯಲ್ಲಿ ಅಮೃತಸರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. 2004, 2009 ರಲ್ಲಿ ಸಿಧು ಜಯಗಳಿಸಿದ್ದರೆ 2014ರ ಲೋಕಸಭಾ ಚುನಾವಣೆಯಲ್ಲಿ ಅರುಣ್ ಜೇಟ್ಲಿ ಅವರಿಗೆ ಅಮೃತಸರದ ಟಿಕೆಟ್ ನೀಡಲಾಗಿತ್ತು. ಇದರಿಂದ ಬಹಿರಂಗವಾಗಿ ಬಂಡಾಯ ಸಾರಿದ್ದ ಸಿಧು ಬಿಜೆಪಿಯನ್ನು ತೊರೆದು 2017ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದನ್ನೂ ಓದಿ:  ಆಗಾಗ ‘ಸಿಕ್ಸರ್’ ಹೇಳಿಕೆ ನೀಡಿ ಕೊನೆಗೂ ಕ್ಯಾಪ್ಟನನ್ನು ಕೆಳಗೆ ಇಳಿಸಿದ ಸಿಧು

Navjot Singh Sidhu medium

2017ರಲ್ಲಿ ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯಗಳಿಸಿದ್ದ ಸಿಧು ಡಿಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದರು. ಆದರೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಿಧು ಆಸೆಗೆ ಕೊಕ್ಕೆ ಹಾಕಿದ್ದರು. ಆದರೂ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಇಷ್ಟ ಇಲ್ಲದೇ ಇದ್ದರೂ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಇಲ್ಲಿಂದ ಸಿಧು ಮತ್ತು ಅಮರಿಂದರ್ ಮಧ್ಯೆ ಸಂಘರ್ಷದ ಕಿಡಿ ಹೊತ್ತಿಕೊಂಡಿತ್ತು. ಇದನ್ನೂ ಓದಿ: ತಾಲಿಬಾನ್‍ಗೂ, RSSಗೂ ವ್ಯತ್ಯಾಸ ಇದೆ: ಸಿದ್ದರಾಮಯ್ಯಗೆ ಅರಗ ಜ್ಞಾನೇಂದ್ರ ತಿರುಗೇಟು

navjot singh sidhu fwice calls for ban 759

2019ರ ಲೋಕಸಭೆ ಚುನಾವಣಾ ಸಮಯದಲ್ಲಿ ಸಿಧು ಪತ್ನಿ ನವಜೋತ್ ಕೌರ್ ಚಂಡೀಗಢ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗದಕ್ಕೆ ಅಮರಿಂದರ್ ಕಾರಣ ಎಂದು ಆರೋಪಿಸುವುದರೊಂದಿಗೆ ಸಂಘರ್ಷ ಮತ್ತಷ್ಟು ಜಾಸ್ತಿಯಾಯಿತು. 2019ರ ಜುಲೈನಲ್ಲಿ ಸಿಧು ಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬಳಿಕವೂ ಪಂಜಾಬ್ ಸರ್ಕಾರ, ಅಮರಿಂದರ್ ವಿರುದ್ಧ ಸಿಧು ಟೀಕೆ ಮುಂದುವರಿಸಿದರು. ಈ ನಡುವೆ ಪಂಜಾಬ್‍ನಲ್ಲಿ ಬಲ ಜಾಸ್ತಿ ಆಗುತ್ತಿದ್ದು, ಸಿಧು ಆಪ್ ಸೇರುವ ಸಾಧ್ಯತೆಯಿದೆ ಎಂಬ ವದಂತಿಗಳು ಹರಿದಾಡತೊಡಗಿತು. ಇದನ್ನೂ ಓದಿ: ಸಿಎಂಗೆ ಮುಖ ತೋರಿಸಲು ಆಗುತ್ತಿಲ್ಲ: ಶಾಸಕ ಹರ್ಷವರ್ಧನ್

1542999640 Navjot Singh Sidhu PTI

ಮುಂದಿನ ವಿಧಾಸಭಾ ಚುನಾವಣೆಯಲ್ಲಿ ನಾಯಕರೇ ಬಡಿದಾಡುವುದು ಬೇಡ ಎಂದು ತೀರ್ಮಾನಿಸಿ ಸಿಧು ಆಸೆಯಂತೆ ಅವರನ್ನು ಹೈಕಮಾಂಡ್ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ತನ್ನ ವಿರುದ್ಧವೇ ಬಂಡಾಯ ಸಾರಿದ್ದ ಸಿಧುವನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಅಮರಿಂದರ್ ಸಿಟ್ಟಾಗಿದ್ದರು. ಈ ನಡುವೆ ಸಿಧು ಸಲಹೆಗಾರರಾಗಿದ್ದ ಮಾಲ್ವಿಂದರ್ ಸಿಂಗ್ ಕಾಶ್ಮೀರ ವಿಚಾರವಾಗಿ ವಿವಾದಿತ ಹೇಳಿಕೆ ನೀಡಿದ್ದರು. ಇದರಿಂದ ಸಿಟ್ಟಾದ ಅಮರಿಂದರ್ ಅವರನ್ನು ವಜಾ ಮಾಡುವಲ್ಲಿ ಯಶಸ್ವಿಯಾಗಿದ್ದರು. ತನ್ನ ಆಪ್ತನನ್ನು ವಜಾ ಮಾಡಿದ ವಿಚಾರದಲ್ಲಿ ಸಿಟ್ಟಾಗಿದ್ದ ಸಿಧು ಅಮರಿಂದರ್ ಆಡಳಿತದ ವಿರುದ್ಧ ಹೈಕಮಾಂಡ್‍ಗೆ ದೂರು ನೀಡುತ್ತಲೇ ಇದ್ದರು.

Navjot Singh Sidhu

ಪಂಜಾಬ್‍ನಲ್ಲಿ ಆಡಳಿತ ವಿರೋಧಿ ಅಲೆ ಇದೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಅಮರಿಂದರ್ ಸಿಂಗ್ ಅವರನ್ನು ಕೆಳಗಡೆ ಇಳಿಸಲೇ ಬೇಕು ಎಂದು ಸಿಧು ಬಣ ಹೈಕಮಾಂಡ್‍ಗೆ ದೂರು ನೀಡಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಂತರಿಕ ಸಮೀಕ್ಷೆಯನ್ನು ಮಾಡಿತ್ತು ಎನ್ನಲಾಗುತ್ತಿದೆ. ಕೊನೆಗೆ ಹಲವು ನಾಯಕರ ಅಪಸ್ವರಕ್ಕೆ ಮಣಿದ ಕಾಂಗ್ರೆಸ್ ಬಿಜೆಪಿಯಂತೆ ಅಮರಿಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಹೀಗಾಗಿ ಕೊನೆಗೆ ಅಮರಿಂದರ್ ಮುಖ್ಯಮಂತ್ರಿ ಪಟ್ಟಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಸಿಧು ಸಹ ಅಧ್ಯಕ್ಷ ಪಟ್ಟಕ್ಕೆ ರಾಜೀನಾಮೆ ನೀಡಿ ಕುತೂಹಲ ಮೂಡಿಸಿದ್ದಾರೆ.

TAGGED:congressNavjot Singh Sidhupresidentpublictvpunjabresignಅಧ್ಯಕ್ಷನವಜೋತ್ ಸಿಂಗ್ ಸಿಧುರಾಜೀನಾಮೆ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Odishas Cuttack Hospital Fire
Latest

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

Public TV
By Public TV
12 minutes ago
Hotel Association Meeting With Govt
Bengaluru City

20% ಗ್ಯಾಸ್ ವಿತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್ – ಇಂದು ಹೋಟೆಲ್ ಸಂಘದಿಂದ ಸರ್ಕಾರದ ಭೇಟಿ

Public TV
By Public TV
22 minutes ago
UAE attack
Latest

ಇರಾನ್‌ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌ – 19 ಭಾರತೀಯರ ಬಂಧನಕ್ಕೆ UAE ಆದೇಶ

Public TV
By Public TV
43 minutes ago
Benjamin Netanyahu
Latest

7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅನುಮೋದನೆ

Public TV
By Public TV
56 minutes ago
iran and israel
Latest

ಮಧ್ಯಪ್ರಾಚ್ಯ ಸಂಘರ್ಷ –  ಕೈಗಾರಿಕೆಗಳಿಗೆ ಭಾರೀ ಹೊಡೆತ!

Public TV
By Public TV
9 hours ago
Woman murdered by sugarcane plantation Athani Belagavi
Belgaum

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?