Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬದಲಾವಣೆಗೇಕೆ ಹೊಸ ವರ್ಷ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬದಲಾವಣೆಗೇಕೆ ಹೊಸ ವರ್ಷ?

Latest

ಬದಲಾವಣೆಗೇಕೆ ಹೊಸ ವರ್ಷ?

Public TV
Last updated: December 31, 2024 7:37 pm
Public TV
Share
3 Min Read
new year copy
SHARE

ಬದಲಾವಣೆ ಜಗದ ನಿಯಮ. ಜಗತ್ತಿನಲ್ಲಿ ದಿನೇ ದಿನೇ ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಂದು ವಸ್ತು, ಜೀವಿ ಮುಂತಾದವು ಯಾವುದೋ ಒಂದು ರೀತಿಯಲ್ಲಿ ಬದಲಾವಣೆ ಆಗುತ್ತಲೇ ಇರುತ್ತದೆ.

new year 3

ಬದಲಾವಣೆಗಳಲ್ಲಿ ಕೆಲವೊಂದು ಕಣ್ಣಿಗೆ ಕಾಣಿಸುವ ಬದಲಾವಣೆ, ಕೆಲವೊಂದು ಕಣ್ಣಿಗೆ ಕಾಣಿಸದಿರುವ ಬದಲಾವಣೆ. ಆದರೆ ಎಲ್ಲದಕ್ಕೂ ತಾಳ್ಮೆಯಿಂದ ಕಾಯಬೇಕು ಅಷ್ಟೆ. ಆದರೆ ಮನುಷ್ಯನಲ್ಲಿ ತಾಳ್ಮೆ ಅನ್ನೋದೇ ಇಲ್ಲ. ಯಾವುದೋ ಒಂದು ರೀತಿಯ ನಿರ್ಧಾರದಿಂದ ಇಲ್ಲಸಲ್ಲದ ಅಚಾತುರ್ಯಗಳನ್ನು ಮಾಡಿಕೊಳ್ಳುತ್ತಾನೆ. ಇದು ಒಂದು ರೀತಿ ಮೊದಲಿನಿಂದಲೂ ನಡೆದುಕೊಂಡು ಬಂದ ಬಳುವಳಿಯಾಗಿದೆ. ಯಾರಿಗೂ ಒಂದುಕ್ಷಣ ಸುಮ್ಮನೇ ಕುಳಿತು ಯೋಚಿಸುವ ತಾಳ್ಮೆಯೇ ಇಲ್ಲ. ದೇವರು ಇದ್ದಾನೋ ಇಲ್ವೋ ಗೊತ್ತಿಲ್ಲ? ಹಣೆಬರಹ ಇದೆಯೋ ಇಲ್ವೋ ಗೊತ್ತಿಲ್ಲ? ದೇವರು ಏನಾದರೂ ಮಾಡಬಹುದು, ಹಣೆಬರಹದಲ್ಲಿ ಇದ್ದ ಹಾಗೆಯೇ ಆಗುತ್ತದೆ ಎಂದು ನಂಬಿ ಕುಳಿತುಕೊಳ್ಳುವವರೂ ಇದ್ದಾರೆ. ಆದರೆ ಅದನ್ನೆಲ್ಲಾ ನಂಬಿ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ.

New Year 2

ಮನುಷ್ಯ ಬದಲಾವಣೆಯನ್ನು ಬಯಸುತ್ತಾನೆ. ಆದರೆ ಅದಕ್ಕಾಗಿ ಕಾಯುವುದೂ ಇಲ್ಲ, ಅದಕ್ಕೆ ಬೇಕಾದ ಪರಿಶ್ರಮವನ್ನೂ ಪಡುವುದಿಲ್ಲ. ಮನುಷ್ಯ ಬಯಸುವುದು ದಿಡೀರ್ ಬದಲಾವಣೆ ಮತ್ತು ಪರಿಶ್ರಮ ರಹಿತ ಬದಲಾವಣೆ. ಇದು ಎಲ್ಲಾ ಸಮಯದಲ್ಲೂ ಸಾಧ್ಯವಿಲ್ಲ. ಜೀವನ ಎನ್ನುವುದು ಇಲ್ಲಿ ನಾವು ಏನು ಮಾಡುತ್ತೇವೆ? ಯಾಕೆ ಮಾಡುತ್ತೇವೆ? ಹೇಗೆ ಮಾಡುತ್ತೇವೆ? ಯಾರಿಗೋಸ್ಕರ ಮಾಡುತ್ತೇವೆ? ಎನ್ನುವುದರ ಮೇಲೆ ನಿಂತಿದೆ. ಒಂದು ಮಾತು ಮಾತ್ರ ಸತ್ಯ, ಇವತ್ತು ನಾವು ಮಾಡುವ ಪ್ರತಿಯೊಂದು ಕೆಲಸ ಕೂಡ ನಾಳಿನ ಭವಿಷ್ಯ ಆಗುತ್ತದೆ. ಏನೇ ಮಾಡಬೇಕು ಎಂದುಕೊಂಡಿದ್ದರೂ ಒಳ್ಳೆಯದನ್ನು ಮಾಡಿ, ಅದು ನಿಮ್ಮ ಭವಿಷ್ಯವನ್ನು ಒಳ್ಳೆಯದನ್ನಾಗಿ ಮಾಡುತ್ತದೆ. ಕೆಟ್ಟದ್ದನ್ನೇ ಮಾಡುವುದಾದರೆ ಮಾಡಿ, ಅದನ್ನು ಮುಂದೆ ನೀವು ಅನುಭವಿಸುತ್ತೀರಿ. ಅಷ್ಟೇ ಬೇರೆ ಯಾರಿಗೂ ಯಾವುದೇ ರೀತಿ ತೊಂದರೆಯಿಲ್ಲ. ಬೇರೆಯವರಿಗಾಗಿ ಒಳ್ಳೆಯದನ್ನು ಮಾಡಬೇಕಾ? ಬಿಡಬೇಕಾ? ನಿಮ್ಮ ಇಷ್ಟ. ಆದರೆ ಮಾಡಿದ ಮೇಲೆ ಅವರಿಂದ ಯಾವತ್ತೂ ಕೂಡ ಅದರ ಪ್ರತಿಫಲಕ್ಕಾಗಿ ಕಾಯಬೇಡಿ. ಸಿಗಬಹುದು, ಸಿಗದೇ ಇರಬಹುದು.

ಭವಿಷ್ಯ ಎನ್ನುವುದು ಮಾತ್ರ ನಿಮ್ಮ ಇಂದಿನ ನಡೆವಳಿಕೆಯನ್ನು ಅವಲಂಬಿಸಿದೆ. ಭವಿಷ್ಯದಲ್ಲಿ ಉತ್ತಮ ರೀತಿಯಲ್ಲಿ, ಖುಷಿಯಿಂದ ಬದುಕಬೇಕು ಎಂದುಕೊಂಡಿದ್ದರೆ ಅದಕ್ಕೆ ಇಂದಿನಿಂದಲೇ ಪರಿಶ್ರಮ ಪಡಿ. ಏನೇ ಸಿಗುವುದಾದರೂ ಅದು ನಿಮಗೆ. ನೀವು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗದೇ ಇದ್ದರೆ, ಮುಂದುವರಿಯಿರಿ. ಒಂದಲ್ಲ ಒಂದಿನ ನಿಮ್ಮ ಭೂತಕಾಲದ ಪರಿಶ್ರಮ ಅವಶ್ಯವಾಗಿ ಭವಿಷ್ಯವಾಗುತ್ತದೆ. ಆದರೆ ತಾಳ್ಮೆಯಿಂದ ಕಾಯುತ್ತಲಿರಿ.

new year 1

ಯಾವುದಾದರೂ ಒಳ್ಳೆಯ ಕೆಲಸ ಮಾಡಬೇಕು ಎಂದುಕೊಂಡಿದ್ದರೆ ನಾಳೆಗಾಗಿ ಕಾಯಬೇಡಿ. ರಾತ್ರಿ ಮಲಗಿದ ಮೇಲೆ ಬೆಳಿಗ್ಗೆ ಎದ್ದೇಳುತ್ತೆವಾ ಎಂದು ಗೊತ್ತಿಲ್ಲ. ಶುರು ಮಾಡಿ. ಕೆಲವೊಮ್ಮೆ ಯಾವುದೋ ಕೆಲಸ ಬಂದಾಗ ಇನ್ನೇನು 2 ತಿಂಗಳಲ್ಲಿ ವರ್ಷಾನೇ ಮುಗಿಯತ್ತದೆ ಎಂದು ಮುಂದಿನ ವರ್ಷ ಮಾಡಿದರೆ ಆಯಿತು ಎಂದು ಮುಂದಕ್ಕೆ ಹಾಕಬೇಡಿ. ಒಳ್ಳೆಯದನ್ನು ಮಾಡುವುದೇ ಆದರೆ ಯಾಕೆ ಮುಂದಕ್ಕೆ ತಳ್ಳಬೇಕು. ಈಗಲೇ ಬದಲಾಗಿ ನಾಳೆಗೋಸ್ಕರ ಕಾಯೋದು ಬೇಡ, ನಾಳೆನೇ ನಮಗೋಸ್ಕರ ಬೇಗ ಬರಲಿ ಎನ್ನುವ ಮನೋಭಾವ ಇರಬೇಕು. ಆಗುವುದೆಲ್ಲ ಒಳ್ಳೆಯ ಕಾರಣಕ್ಕೆ ಎಂದು ನಂಬಿ ತಾಳ್ಮೆಯಿಂದ ಕಾಯಿರಿ. ಅವಶ್ಯವಾಗಿ ನಿಮ್ಮಿಂದ ಯಾವುದೋ ರೀತಿಯಲ್ಲಿ ಒಂದು ಒಳ್ಳೆಯ ಬದಲಾವಣೆ ತರುವ ಕೆಲಸ ನಡೆಯುತ್ತದೆ. ನಿಮ್ಮ ಜೀವನದಲ್ಲಿ ಬದಲಾವಣೆ ಬಯಸುತ್ತಿದ್ದರೆ ತಡ ಮಾಡಬೇಡಿ, ಈಗಲೇ ಶುರು ಮಾಡಿ. ಕೆಲವೊಮ್ಮೆ ನಾಳೆ ಏನು ಆಗುತ್ತದೆ ಎಂದು ಗೊತ್ತಿರಲ್ಲ. ಇನ್ನೂ ಮುಂದಿನ ವರ್ಷದ ಬಗ್ಗೆ ಮಾತನಾಡುವುದು ಯಾಕೆ? ಈಗಿನ ಕ್ಷಣವನ್ನು ಅನುಭವಿಸಿ. ಖುಷಿಯಿಂದ ಇರಿ.

ಬದಲಾವಣೆ ಎನ್ನುವುದು ಸುಲಭ ಕಾರ್ಯವಲ್ಲ. ಆದರೆ ಅದು ಯಾವಾಗಲೂ ಸಾಧ್ಯವಾಗುವಂತಹ ಸಂಗತಿ. ಅವಶ್ಯವಾಗಿ ಈಗಿನ ಬದಲಾವಣೆ ಭವಿಷ್ಯದ ಬದಲಾವಣೆಯನ್ನೆ ಮಾಡಬಹುದು ಯಾರಿಗೊತ್ತು? ಹೊಸ ವರ್ಷದಲ್ಲಿ ಮಾಡಬಹುದಾದ ವಿಷಯಗಳ ಕುರಿತು ಸಂಕಲ್ಪವಿರಲಿ. ಆದರೆ ತಡ ಬೇಡ. ಪ್ರತಿ ಕ್ಷಣವೂ ನಿಮ್ಮದು. ಅದೇ ನಿಮ್ಮ ಕೊನೆಕ್ಷಣ ಎಂದು ಅಂದುಕೊಂಡು ಮುಂದುವರೆಯಿರಿ.

2025

ಸರ್ವರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು!

TAGGED:New YearNew Year 2025new year celebrationNew Year Resolutionಹೊಸ ವರ್ಷಹೊಸ ವರ್ಷ 2025ಹೊಸ ವರ್ಷ ಆಚರಣೆಹೊಸ ವರ್ಷಕ್ಕೆ ಸಂಕಲ್ಪ
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
46 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
1 hour ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?