– ಶೌರ್ಯ ಚಕ್ರ ಪ್ರಶಸ್ತಿ ಪಡೆದಿದ್ದ ಮುದಾಸಿರ್
ನವದೆಹಲಿ: ಪಹಲ್ಗಾಮ್ ದಾಳಿ (Pahalgam Attack) ಬಳಿಕ ಪಾಕಿಸ್ತಾನದ (Pakistan) ವೀಸಾ ಸ್ಥಗಿತಗೊಳಿಸಿರುವ ಕಾರಣ ಭಾರತದಲ್ಲಿದ್ದ (India) ಪಾಕಿಸ್ತಾನೀಯರು ತಮ್ಮ ದೇಶಕ್ಕೆ ವಾಪಸ್ ಆಗುತ್ತಿದ್ದಾರೆ. ಇನ್ನೂ ಪಾಕ್ಗೆ ಗಡೀಪಾರಾಗುವ ಭೀತಿ ಎದುರಿಸಿದ್ದ ಕಾಶ್ಮೀರದ ಶೌರ್ಯ ಚಕ್ರ (Shaurya Chakra) ಪ್ರಶಸ್ತಿ ಪುರಸ್ಕೃತ ಪೊಲೀಸ್ ಪೇದೆಯ ತಾಯಿಯನ್ನು ಈ ಕ್ರಮದಿಂದ ಕೈಬಿಡಲಾಗಿದೆ.
ಕೇಂದ್ರದ ಆದೇಶದಿಂದ ಮರಣೋತ್ತರ ಶೌರ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಪೇದೆ ಮುದಾಸಿರ್ ಅಹ್ಮದ್ ಶೇಖ್ ಅವರ ತಾಯಿ ಶಮೀಮಾ ಅಖ್ತರ್ ಅವರು ಗಡೀಪಾರು ಕ್ರಮಕ್ಕೆ ಒಳಗಾಗಿದ್ದರು. ಈಗ ಸರ್ಕಾರ ಅವರಿಗೆ ಭಾರತದಲ್ಲಿಯೇ ಇರಲು ಅನುಮತಿ ನೀಡಿದೆ. ಇದರಿಂದ ಶಮೀಮಾ ಮನೆಗೆ ಮರಳಿದ್ದಾರೆ. 1990ರಲ್ಲಿ ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳು ಭುಗಿಲೇಳುವುದಕ್ಕೂ ಮುನ್ನವೇ ಶಮೀಮಾ ಕಾಶ್ಮೀರದ ವ್ಯಕ್ತಿಯನ್ನು ಮದುವೆಯಾಗಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ನೇತೃತ್ವದಲ್ಲಿಂದು 4 ಹೈವೋಲ್ಟೇಜ್ ಸರಣಿ ಸಭೆ – ಪಾಕ್ ಬಗ್ಗುಬಡಿಯೋಕೆ ಮಾಸ್ಟರ್ ಪ್ಲ್ಯಾನ್!
2022ರ ಮೇನಲ್ಲಿ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪೊಲೀಸ್ ಪೇದೆಯಾಗಿದ್ದ ಶಮೀಮಾ ಅವರ ಮಗ ಮುದಾಸಿರ್ ಸಾವನ್ನಪ್ಪಿದ್ದರು. ಮಗನ ಶೌರ್ಯ ಚಕ್ರ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶಮೀಮಾ ಅವರು ಸ್ವೀಕರಿಸಿದ್ದರು.
ಇಲ್ಲಿಯವರೆಗೆ ಕಾಶ್ಮೀರದಿಂದ 60 ಪಾಕಿಸ್ತಾನಿಯರನ್ನು ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟ ಮೋದಿ