Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
Last updated: February 18, 2026 1:01 pm
Public TV
Share
4 Min Read
Vidhana Soudha
SHARE

ಬೆಂಗಳೂರು: ವಿಧಾನಸಭೆ ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧದ (Media Restrictions) ಬಳಿಕ ಮತ್ತೆ ವಿಧಾನಸೌಧದಲ್ಲಿ ಭದ್ರತೆಯ ನೆಪವೊಡ್ಡಿ ಮಾಧ್ಯಮಗಳಿಗೆ ನಿರ್ಬಂಧ ಹಾಕುವ ಕೆಲಸಕ್ಕೆ ರಾಜ್ಯ ಸರ್ಕಾರ (Karnataka Government) ಮುಂದಾಗಿದೆ.

ಸೂಚಿಸಿದ ಸ್ಥಳದಲ್ಲಿ ಮಾತ್ರ ಜನಪ್ರತಿನಿಧಿಗಳನ್ನ ಮಾತನಾಡಿಸಬೇಕು ಎಂಬ ನಿಯಮ ತಂದು ಮಾಧ್ಯಮಗಳ ಸ್ವಾತಂತ್ರ‍್ಯ (Media Freedom) ಕಸಿಯೋ ಕೆಲಸಕ್ಕೆ ಕೈ ಹಾಕಿದೆ. ಇದನ್ನೂ ಓದಿ: ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ
ಪ್ರಜಾಪ್ರಭುತ್ವದ 4ನೇ ಸ್ತಂಭ ಎಂದೇ ಕರೆಯಲ್ಪಡುವ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯ ಮತ್ತು ಮಾಧ್ಯಮ ಸ್ವಾತಂತ್ರ‍್ಯದ ಬಗ್ಗೆ ಮಾತನಾಡುವ ಸರ್ಕಾರವೇ ಈಗ ಮಾಧ್ಯಮಗಳ ಮೇಲೆ ಸವಾರಿ ಮಾಡಲು ಹೊರಟಿದೆ. ವಿಧಾನಸೌಧದಲ್ಲಿ ಮಾಧ್ಯಮಗಳನ್ನ ಹತ್ತಿಕ್ಕುವ ಕೆಲಸಕ್ಕೆ ರಾಜ್ಯ ಸರ್ಕಾರ ಮತ್ತೆ ಮುಂದಾಗಿದೆ. ಭದ್ರತೆಯ ನೆಪವೊಡ್ಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಾಧ್ಯಮಗಳಿಗೆ ಹೊಸ ಲಕ್ಷ್ಮಣ ರೇಖೆ ಎಳೆದಿದೆ.

ಮಾಧ್ಯಮಗಳನ್ನ ನಿಗದಿತ ಸ್ಥಳಕ್ಕೆ ಮಾತ್ರ ನಿಯಂತ್ರಣ ಮಾಡುವ ಹುನ್ನಾರ ಮಾಡಿದೆ. ಮಾಧ್ಯಮಗಳಿಂದ ಭದ್ರತೆಗೆ ಸಮಸ್ಯೆ ಆಗ್ತಿದೆ ಅಂತ ಹೇಳಿ ಇನ್ನು ಮುಂದೆ ವಿಧಾನಸೌಧದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಜನಪ್ರತಿನಿಧಿಗಳ ಪ್ರತಿಕ್ರಿಯೆ ಪಡೆಯಬೇಕು ಅಂತ ನಿಯಮ ಮಾಡಿದೆ. ಇದನ್ನೂ ಓದಿ: Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ವಾರ್ತಾ ಇಲಾಖೆಗೆ ಈ ಸಂಬಂಧ ಪತ್ರ ಬರೆದಿದ್ದು, ಭದ್ರತೆಯ ನೆಪವೊಡ್ಡಿ ಮಾಧ್ಯಮಗಳ ಮೇಲೆ ಸರ್ಕಾರ ಸವಾರಿ ಮಾಡಲು ಹೊರಟಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರೋ ಕೆಲಸಕ್ಕೆ ಸರಕಾರವೇ ಮುಂದಾಗಿದೆ.

ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದದ್ದೇ ತಪ್ಪಾ..?
ಪದೇ ಪದೇ ವಿಧಾನಸೌಧದಲ್ಲಿ ಭದ್ರತೆಯ ಲೋಪ ಕಂಡು ಬರ್ತಿದೆ. ಇದನ್ನ ಮಾಧ್ಯಮಗಳು ತೋರಿಸುತ್ತಿರೋದೆ ದೊಡ್ಡ ಅಪರಾಧವಾಗಿದೆ. ಕಳೆದ ವಾರ ಸಿಬ್ಬಂದಿ ಮತ್ತು ಆಡಳಿತ ಸುಧಾಕರಣೆ ಇಲಾಖೆ ಸಿಬ್ಬಂದಿಯಿಂದಲೇ 300 ಗ್ರಾಂ ಚಿನ್ನದ ಸರ ಸಚಿವರ ಕೊಠಡಿಯಿಂದ ಕಳ್ಳತನ ಆಗಿತ್ತು. ಈಗ ತನ್ನ ಲೋಪದೋಷಗಳನ್ನ ಮುಚ್ಚಿಕೊಳ್ಳಲು ಮಾಧ್ಯಮಗಳ ಮೇಲೆ ನಿರ್ಬಂಧ ಅಸ್ತ್ರವನ್ನ ಡಿಪಿಎಆರ್ ಬಳಕೆ ಮಾಡಿದೆ. ಡಿಪಿಎಆರ್ ತಾಳಕ್ಕೆ ತಕ್ಕಂತೆ ವಾರ್ತಾ ಇಲಾಖೆ ಕುಣಿಯಲು ಹೊರಟಿದೆ.

ಹೊಸ ನಿಯಮದಲ್ಲಿ ಏನಿದೆ?
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ವಾರ್ತಾ ಇಲಾಖೆಗೆ ಪತ್ರ ಬರೆದಿದ್ದು, ಮಾಧ್ಯಮಗಳಿಗೆ ಕೆಲವು ಕಠಿಣ ಸೂಚನೆಗಳನ್ನ ನೀಡುವಂತೆ ತಿಳಿಸಿದೆ. ಇನ್ಮುಂದೆ ವಿಧಾನಸೌಧದಲ್ಲಿ ಎಲ್ಲೆಂದರಲ್ಲಿ ರಾಜಕೀಯ ನಾಯಕರ ಹೇಳಿಕೆ ಪಡೆಯುವಂತಿಲ್ಲ. ಕೇವಲ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಬೈಟ್ ಪಡೆಯಬೇಕು. ವಿಧಾನಸೌಧದ ಕಾರಿಡಾರ್‌ಗಳು ಅಥವಾ ಇತರ ಪ್ರಮುಖ ಸ್ಥಳಗಳಲ್ಲಿ ನಾಯಕರ ಅಭಿಪ್ರಾಯ ಪಡೆಯುವುದಕ್ಕೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

ಮಾಧ್ಯಮಗಳ ಚಲನವಲನಕ್ಕೆ ಬ್ರೇಕ್
ಇಲ್ಲಿಯವರೆಗೆ ಮಾಧ್ಯಮ ಪ್ರತಿನಿಧಿಗಳು ವಿಧಾನಸೌಧದ ಕಾರಿಡಾರ್‌ಗಳಲ್ಲಿ, ಸಚಿವರ ಕೊಠಡಿಗಳ ಬಳಿ ಅಥವಾ ಮುಖ್ಯಮಂತ್ರಿಗಳ ಕಚೇರಿಯ ಹೊರಗೆ ರಾಜಕೀಯ ನಾಯಕರನ್ನು ಕಂಡಾಗ ತಕ್ಷಣವೇ ಪ್ರತಿಕ್ರಿಯೆ ಪಡೆಯುತ್ತಿದ್ದರು. ಆದರೆ, ಹೊಸ ನಿಯಮದ ಪ್ರಕಾರ ಮಾಧ್ಯಮದವರು ಎಲ್ಲೆಂದರಲ್ಲಿ ಕ್ಯಾಮೆರಾ ಹಿಡಿದು ನಿಲ್ಲುವಂತಿಲ್ಲ. ಇದು ರಾಜಕೀಯ ಬೆಳವಣಿಗೆಗಳ ಮೇಲೆ ಕ್ಷಣಕ್ಷಣದ ನಿಗಾ ಇಡುವ ಮಾಧ್ಯಮಗಳ ವೇಗಕ್ಕೆ ಅಡ್ಡಿಯಾಗಲಿದೆ.

ನಿಗದಿತ ಸ್ಥಳದಲ್ಲೇ ಬೈಟ್
ಸರ್ಕಾರವು ವಿಧಾನಸೌಧದಲ್ಲಿ ನಿರ್ದಿಷ್ಟವಾದ ಒಂದು ಅಥವಾ ಎರಡು ಸ್ಥಳಗಳನ್ನು ಮಾತ್ರ ‘ಮೀಡಿಯಾ ಪಾಯಿಂಟ್’ ಎಂದು ಗುರುತಿಸಲಿದೆ. ರಾಜಕೀಯ ನಾಯಕರು ಅಥವಾ ಸಚಿವರು ತಮಗೆ ಇಷ್ಟವಿದ್ದರೆ ಮಾತ್ರ ಆ ಸ್ಥಳಕ್ಕೆ ಬಂದು ಹೇಳಿಕೆ ನೀಡಬೇಕಾಗುತ್ತದೆ.

ಕಾರಿಡಾರ್‌ಗಳಲ್ಲಿ ‘ಕ್ಯಾಮೆರಾ’ ನಿಷೇಧ
ವಿಧಾನಸೌಧದ ಕಾರಿಡಾರ್‌ಗಳು (ಪಡಸಾಲೆಗಳು) ಪ್ರಮುಖ ಚರ್ಚೆಗಳು ನಡೆಯುವ ತಾಣಗಳು. ಇಲ್ಲಿ ನಾಯಕರನ್ನ ಪ್ರಶ್ನಿಸುವುದು ಪತ್ರಕರ್ತರಿಗೆ ಸುಲಭವಾಗಿತ್ತು. ಈಗ ಇಲ್ಲಿ ಬೈಟ್ ಪಡೆಯುವುದನ್ನು ನಿಷೇಧಿಸಿರುವುದರಿಂದ, ಒಳಗಡೆ ನಡೆಯುವ ಭ್ರಷ್ಟಾಚಾರ ಅಥವಾ ಭದ್ರತಾ ಲೋಪಗಳಂತಹ ವಿಚಾರಗಳನ್ನು ಪ್ರಶ್ನಿಸಲು ಮಾಧ್ಯಮಗಳಿಗೆ ಅವಕಾಶವೇ ಸಿಗದಂತೆ ಮಾಡುವ ತಂತ್ರ ಇದಾಗಿದೆ.

ವಿರೋಧ ಪಕ್ಷದ ಧ್ವನಿ ಹತ್ತಿಕ್ಕುವಿಕೆ
ಸರ್ಕಾರದ ತಪ್ಪುಗಳನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಥವಾ ಕಾರಿಡಾರ್‌ಗಳಲ್ಲಿ ನಿಂತು ಮಾಧ್ಯಮಗಳ ಮುಂದೆ ವಿರೋಧ ಪಕ್ಷದ ನಾಯಕರು ಬಿಚ್ಚಿಡುತ್ತಿದ್ದರು. ಈಗ ‘ನಿಗದಿತ ಸ್ಥಳ’ದ ನಿಯಮದಿಂದಾಗಿ ವಿರೋಧ ಪಕ್ಷದ ನಾಯಕರು ಮಾಧ್ಯಮಗಳಿಗೆ ಸಿಗದಂತೆ ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂಬ ಸಂಶಯ ದಟ್ಟವಾಗಿದೆ.

ಭದ್ರತಾ ಲೋಪಗಳ ಮರೆಮಾಚಲು ಈ ನಡೆ?
ಇತ್ತೀಚೆಗೆ ವಿಧಾನಸೌಧದ ಹೈ-ಸೆಕ್ಯೂರಿಟಿ ವಲಯದಲ್ಲೇ ನಡೆದ ಚಿನ್ನದ ಕಳ್ಳತನದಂತಹ ಪ್ರಕರಣಗಳು ಸರ್ಕಾರದ ಭದ್ರತಾ ವೈಫಲ್ಯವನ್ನ ತೋರಿಸಿದ್ದವು. ಮಾಧ್ಯಮಗಳು ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಸುಳಿದಾಡುವುದರಿಂದ ಈ ಲೋಪಗಳು ಪದೇ ಪದೇ ಜಗಜ್ಜಾಹೀರಾಗುತ್ತಿವೆ ಎಂಬುದು ಸರ್ಕಾರದ ಅಸಮಾಧಾನ.

ಕಳೆದ ವಾರವಷ್ಟೇ ವಿಧಾನಸೌಧದ ಒಳಗಡೆ 300 ಗ್ರಾಂ ಚಿನ್ನದ ಕಳ್ಳತನವಾಗಿತ್ತು. ಇದು ಸರ್ಕಾರದ ಭದ್ರತಾ ಲೋಪವನ್ನು ಜಗಜ್ಜಾಹೀರು ಮಾಡಿತ್ತು. ಪದೇ ಪದೇ ಬಹಿರಂಗವಾಗುತ್ತಿರುವ ಭದ್ರತಾ ಲೋಪಗಳ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಬಾರದು ಮತ್ತು ಸರ್ಕಾರದ ನಕಾರಾತ್ಮಕ ಸುದ್ದಿಗಳನ್ನು ಹತ್ತಿಕ್ಕಬೇಕು ಎಂಬ ಉದ್ದೇಶ ಈ ಆದೇಶದ ಹಿಂದೆ ಇದೆಯೇ ಎಂಬ ಸಂಶಯ ಮೂಡಿದೆ.

TAGGED:Karnataka GovernmentMedia BanNews Mediasiddaramaiahvidhana soudhaಕರ್ನಾಟಕ ಸರ್ಕಾರಮಾಧ್ಯಮ ನಿರ್ಬಂಧವಿಧಾನಸೌಧಸಿದ್ದರಾಮಯ್ಯಸುದ್ದಿ ಮಾಧ್ಯಮ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹಸಚಿವ ಅಮಿತ್‌ ಶಾ ಆಗಮನ

Public TV
By Public TV
33 seconds ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 minutes ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
24 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
41 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?