ಹುಬ್ಬಳ್ಳಿ: ತಂದೆಯೇ ತನ್ನ ಮಗಳನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸಂತೋಷ ನಗರದಲ್ಲಿ ನಡೆದಿದೆ.
ಆರೋಪಿ ತಂದೆಯಾದ ಯನಗಣ್ಣ ಮಗಳಾದ ನಿಖಿತಾ (16)ಳನ್ನು ಕೊಲೆ ಮಾಡಿದ್ದಾನೆ. ಇದೇ ವೇಳೆ ಪತ್ನಿ ಸುಜಾತಾ ಹಾಗೂ ಮಾವ ರಾಗಪ್ಪ ಎಂಬವರ ಮೇಲೆಯೂ ಮೋಹನ್ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಏನಿದು ಘಟನೆ: ಮೋಹನ್ ಯನಗಣ್ಣವರ ನಿವೃತ್ತ ನೌಕಾ ಸೇನೆ ಉದ್ಯೋಗಿಯಾಗಿದ್ದು, ಕೆಲ ವರ್ಷಗಳಿಂದ ಗಂಡ ಹೆಂಡತಿ ನಡುವೆ ಕೌಟುಂಬಿಕ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅದ್ದರಿಂದ ದಂಪತಿಗಳಿಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ಸೋಮವಾರ ಏಕಾಏಕಿ ಬಂದು ಆಗಮಿಸಿದ ಮೋಹನ್ ಇಡೀ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾನೆ.
ಘಟನೆಯ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಮಗಳು ನಿಖಿತಾಳನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಆಸ್ಪತ್ರೆಗೆ ಕೊಂಡ್ಯೊಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ. ಈ ವೇಳೆ ಗಾಯಗೊಂಡಿರುವ ಪತ್ನಿ ಸುಜಾತಾ ಹಾಗೂ ಮಾವ ರಾಗಪ್ಪ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಗಳ ಮತ್ತು ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಬಳಿಕ ವಿಷ ಕುಡಿದು ಆತ್ನಹತ್ಯೆಗೆ ಯತ್ನಿಸಿರುವ ಆಶೋಕ್ ಸಹ ಅಸ್ವಸ್ಥರಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನೆ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಅಶೋಕ ನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.