ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು (CCB Cyber Police) ಬಂಧಿಸಿದ್ದಾರೆ.
ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ನಿವೃತ್ತಿ ಬಳಿಕ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದ. ಇದನ್ನೂ ಓದಿ: ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ ಯುವತಿ – ಮನನೊಂದು ಯುವಕ ಆತ್ಮಹತ್ಯೆ
ಮೈಸೂರಿನಲ್ಲಿ (Mysuru) ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನ ಕನ್ನಡ ಬರುತ್ತ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕೇಳಿದ್ದರು. ಇದಕ್ಕೆ ಹನುಮ ಭಕ್ತ ಅನ್ನೋ ಫೇಸ್ಬುಕ್ ಪೇಜ್ನಲ್ಲಿ ಸಿಎಂ ನಿಂದಿಸಿ ವಸಂತ್ ಕುಮಾರ್ ಪೋಸ್ಟ್ ಹಾಕಿದ್ದ.
ಸಿಎಂ ಕುರಿತು ಏಕವಚನದಲ್ಲೇ ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಿದ್ದ. ಈ ಸಂಬಂಧ ಸಿಸಿಬಿ ಸೈಬರ್ ಪೊಲೀಸರು ವಸಂತ್ ಕುಮಾರ್ನನ್ನು ಬಂಧಿಸಿ, ವಿಚಾರಣೆ ನಡೆಸ್ತಿದ್ದಾರೆ.