ಚಿಕ್ಕಮಗಳೂರು: ನಿವೃತ್ತ ಶಿಕ್ಷಕನೊಬ್ಬ ತನ್ನ ಪತ್ನಿಯನ್ನ ಪಿಸ್ತೂಲಿನಿಂದ ಗುಂಡಿಕ್ಕಿ ಕೊಂದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಕಂಚಿಗೂರು ಗ್ರಾಮದಲ್ಲಿ ನಡೆದಿದೆ.
ಕಂಚಿಗೂರು ನಿವಾಸಿ ಬಸಪ್ಪ(63) ಕೊಲೆಗೈದ ನಿವೃತ್ತ ಶಿಕ್ಷಕ. ಜಯಮ್ಮ(53) ಪತಿಯಿಂದ್ಲೇ ಕೊಲೆಯಾದ ದುರ್ದೈವಿ. ಹಲವು ವರ್ಷಗಳಿಂದ ದಂಪತಿ ನಡುವೆ ವೈಮನಸಿತ್ತು. ಆದರೂ ಹೇಗೋ ಇಬ್ಬರು ಮನಸ್ತಾಪದ ನಡುವೆಯೂ ಜೀವನ ಸಾಗಿಸುತ್ತಿದ್ದರು. ಯಾವಾಗಲು ಇವರಿಬ್ಬರ ನಡುವೆ ಜಗಳವಾಗುತ್ತಲೇ ಇದರಿಂದ ಬಸಪ್ಪ ಬೇಸತ್ತು ಹೋಗಿದ್ದನು.
ಆದರೆ ಸೋಮವಾರ ಬಸಪ್ಪ ಹಾಗೂ ಆತನ ಪತ್ನಿ ಜಯಮ್ಮನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಅಲ್ಲದೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ವೇಳೆ ಕೋಪಗೊಂಡ ಬಸಪ್ಪ ಇದಕ್ಕೆಲ್ಲ ಒಂದು ಅಂತ್ಯ ಹಾಡಬೇಕೆಂದು ಪಿಸ್ತೂಲಿನಿಂದ ಗುಂಡು ಹಾರಿಸಿ ಪತ್ನಿಯನ್ನು ಕೊಂದು ಹಾಕಿದ್ದಾನೆ. ಅಷ್ಟೇ ಅಲ್ಲದೆ ತಾನೇ ಪತ್ನಿಯನ್ನು ಕೊಲೆ ಮಾಡಿದ್ದು ಅಂತ ಪೋಲೀಸ್ ಠಾಣೆಗೆ ಬಂದು ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv