Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಚಿವ ಸಂಪುಟದ ಉಪಸಮಿತಿಯ ತೀರ್ಮಾನವನ್ನು ವಾಪಸ್ ಪಡೆಯಿರಿ: ಪ್ರಿಯಾಂಕ್ ಖರ್ಗೆ

Public TV
Last updated: March 10, 2022 8:56 pm
Public TV
Share
2 Min Read
PRIYANK KHARGE
SHARE

ಕಲಬುರಗಿ: ಮಾರ್ಚ್ 3ರ ಸಚಿವ ಸಂಪುಟದ ಉಪಸಮಿತಿಯ ತೀರ್ಮಾನವನ್ನು ವಾಪಸ್ ಪಡೆಯುವಂತೆ ಮಾಜಿ ಸಚಿವರು, ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ, ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಇದೇ ಮಾರ್ಚ್ 3 ರಂದು ಕಲ್ಯಾಣ ಕರ್ನಾಟಕ ಪ್ರಗತಿ ಪರಿಶೀಲನಾ ಸಚಿವ ಸಂಪುಟದ ಸಭೆ ನಡೆಯಿತು. ಈ ವೇಳೆ ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರ ಅರ್ಹ ಹೈದರಾಬಾದ್ ಕರ್ನಾಟಕದ ಅಧಿಕಾರಿ ಅಥವಾ ನೌಕರರು ಲಭ್ಯವಿಲ್ಲದಿದ್ದಾಗ, ಖಾಲಿ ವೃಂದದ ಹುದ್ದೆಗಳನ್ನು ಸ್ಥಳೀಯ ವೃಂದದ ಹುದ್ದೆಗಳನ್ನು ಹೈಕ ವೃಂದಕ್ಕೆ ಸೇರದವರಿಂದ(ಉಳಿಕೆ ಮೂಲ ವೃಂದದ) ಭರ್ತಿಮಾಡಬಹುದಾಗಿದೆ ಎಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಲಾಗಿದೆ. ಇದರಂತೆ ಹುದ್ದೆಗಳ ಭರ್ತಿ ಮಾಡಿದರೆ ಸ್ಥಳೀಯ ವೃಂದದ ಅಭ್ಯರ್ಥಿಗಳಿಗೆ ತೊಂದರೆಯಾಗಲಿದೆ. ಅದಕ್ಕೆ ಈ ಕೂಡಲೇ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಹಿಂಪಡೆದು ಸ್ಥಳೀಯ ವೃಂದದ ನೌಕರರಿಗೆ ನ್ಯಾಯ ಒದಗಿಸುವಂತೆ ಪ್ರಿಯಾಂಕ್ ಖರ್ಗೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿ ಆಡಳಿತಕ್ಕೆ ಸಿಕ್ಕ ಜನಮನ್ನಣೆ: ಜಗದೀಶ್ ಶೆಟ್ಟರ್ 

bommai 3

ಈ ಕುರಿತು ಸಿಎಂ ಅವರಿಗೆ ಸುದೀರ್ಘ ಪತ್ರ ಬರೆದು ಮನವಿ ಸಲಿಸಿರುವ ಅವರು, ಹೈಕ ಭಾಗದ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿ ಗಾಗಿ ಕಲಂ 371(ಜೆ) ಜಾರಿಗೊಳಿಸಲಾಗಿದೆ. ಈ ಭಾಗದ ಅಭಿವೃದ್ದಿಗೆ ಅಗತ್ಯ ಅನುದಾನ ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ ಆದೇಶ 2013ರ ಪ್ರಕಾರ ಈ ಪ್ರದೇಶದ ನೌಕರರಿಗೆ ಮುಂಬಡ್ತಿ/ ನೇರ ನೇಮಕಾತಿ ಅಡಿ ಮೀಸಲಾತಿ ಕಲ್ಪಿಸಲಾಗಿದೆ. ಅದರಂತೆ ರಾಜ್ಯದ ಸಿವಿಲ್ ಸೇವೆಗಳಲ್ಲಿ ಈ ಭಾಗದ ಅಭ್ಯರ್ಥಿಗಳಿಗೆ ಪ್ರಾದೇಶಿಕ ಸ್ಥಳೀಯ ವೃಂದದಲ್ಲಿ ಕ್ರಮವಾಗಿ ಶೇ.75, ಶೇ.80 ಹಾಗೂ ಶೇ.85 ರಷ್ಟು ಹಾಗೂ ರಾಜ್ಯ ಮಟ್ಟದ ವೃಂದದಲ್ಲಿ ಶೇ.8 ರಷ್ಟು ಹುದ್ದೆಗಳನ್ನು ನೇರ ಹಾಗೂ ಮುಂಬಡ್ತಿ ನೇಮಕಾತಿಗೆ ಮೀಸಲಾತಿ ನೀಡಲಾಗಿದೆ ಎಂದು ವಿವರಿಸಿದರು.

ಕರ್ನಾಟಕ ಸರ್ಕಾರ ಸಚಿವಾಲಯ ರಾಜ್ಯ ಮಟ್ಟದ ಸಂಸ್ಥೆಯಾಗಿರುವುದರಿಂದ ಶೇ.8ರಷ್ಟು ಹುದ್ದೆಗಳನ್ನು ಪ್ರತ್ಯೇಕವಾಗಿ ತೆಗೆದಿರಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಉದ್ಯೋಗ ಆದೇಶ 2013ರ ಕಂಡಿಕೆ 8, ಉಪಕಂಡಿಕೆ 5, ಉದೃತ ಭಾಗದಲ್ಲಿ, ಯಾವುದೇ ಸಮಯದಲ್ಲಿ ಯಾವುದೇ ಹುದ್ದೆಗಾಗಿ ಲಭ್ಯ ಸ್ಥಳೀಯ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅಂತಹ ಖಾಲಿ ಹುದ್ದೆಗಳನ್ನು ಬ್ಯಾಕ್ ಲಾಗ್ ಎಂದು ತೆಗೆದುಕೊಳ್ಳಬೇಕು. ಮುಂದಿನ ನೇಮಕಾತಿವರೆಗೆ ಅದನ್ನ ಮುಂದುವರೆಸತಕ್ಕದ್ದು. ನಂತರ ಅದನ್ನು ಮೀಸಲಾತಿಯಲ್ಲವೆಂದು ಭಾವಿಸಬಹುದು ಹಾಗೂ ಅದಕ್ಕನುಗುಣವಾಗಿ ಭರ್ತಿ ಮಾಡತಕ್ಕದ್ದು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

Priyank Kharge

ಈ ಹಿಂದೆ ಹೈಕ ಕಾಯಿದೆ 2013 ರ ವಿರುದ್ಧ ಕೆ.ಎ.ಟಿಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಆ ಅರ್ಜಿಯನ್ನು ವಜಾಗೊಳಿಸಿದ ಕೆಎಟಿ ಹೈದರಾಬಾದ್ ಕರ್ನಾಟಕ ಪ್ರದೇಶದ ನೌಕರರಿಗೆ ನೀಡಿರುವ ಮೀಸಲಾತಿಯನ್ನು ಎತ್ತಿಹಿಡಿದಿತ್ತು. ಇದಲ್ಲದೇ ಮಾಜಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲೂ ಕೂಡಾ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅಕ್ಷೇಪಣೆ ಬಂದಾಗಿ ಪಾಟೀಲರು ತಿರಸ್ಕಾರಗೊಳಿಸಿದ್ದರು. ಈ ಕುರಿತು ದಾಖಲೆಗಳು ಹೈಕ ಕೋಶದಲ್ಲಿ ಲಭ್ಯವಿದೆ ಎಂದು ವಿವರಿಸಿದರು. ಇದನ್ನೂ ಓದಿ: ಜನರು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನ ಗೆಲ್ಲಿಸಿದ್ದಾರೆ: ಯೋಗಿ 

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ 03-03-2022 ರಂದು ನಡೆದ ಸಂಪುಟದ ಉಪಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಈ ಕೂಡಲೇ ಹಿಂದೆಪಡೆದು ಸ್ಥಳೀಯ ವೃಂದದ ನೌಕರರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಶಾಸಕರು ತಾವು ಬರೆದ ಪತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೋರಿದ್ದಾರೆ.

TAGGED:CM Basavaraj BommaiKalaburagiPriyank Khargeಕಲಬುರಗಿಪ್ರಿಯಾಂಕ್ ಖರ್ಗೆಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

You Might Also Like

basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
1 hour ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
1 hour ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
2 hours ago
Raichuru Heart Attack Death
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
2 hours ago
EGG
Bengaluru City

ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Public TV
By Public TV
2 hours ago
Punjab Mini Bus Overturn
Crime

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?