ಚಿತ್ರದುರ್ಗ: ಕಂದಾಯ ಇಲಾಖೆ (Department of Revenue) ಪ್ರಧಾನ ಕಾರ್ಯದರ್ಶಿ (Principal Secretary) ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ (Holalkere) ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ.
ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಎಂಬವರಿಗೆ ಸೇರಿದ ಕಾರು (Car) ರಿವರ್ಸ್ ತೆಗೆಯುವ ಸಂದರ್ಭ ಕುನಗಲಿ ಗ್ರಾಮದ ಬಸವರಾಜಪ್ಪ (68) ಅವರ ಬೈಕ್ಗೆ (Bike) ಡಿಕ್ಕಿಯಾಗಿದೆ. ಘಟನೆಯಿಂದ ಬೈಕ್ ಸವಾರ ಬಸವರಾಜಪ್ಪಗೆ ಗಂಭೀರ ಗಾಯಗಳಾಗಿದ್ದವು. ಇದನ್ನೂ ಓದಿ: ಮಾಜಿ ಸಂಸದರ ಪತ್ನಿಯ ಕತ್ತಿಗೆ ಕೈ ಹಾಕಿ ಮಾಂಗಲ್ಯ ಸರ ಕಳ್ಳತನ
ಗಂಭೀರ ಗಾಯಗೊಂಡಿದ್ದ ಪರಿಣಾಮ ಬಸವರಾಜಪ್ಪನನ್ನು ಶಿವಮೊಗ್ಗ (Shivamogga) ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕಂದಾಯ ಸಚಿವರಾದ ಕೃಷ್ಣಭೈರೇಗೌಡರ ಜೊತೆಗೆ ಮುಖ್ಯ ಕಾರ್ಯದರ್ಶಿ ತೆರಳಿದ್ದ ವೇಳೆ ಅಪಘಾತವಾಗಿದೆ (Accident) ಎಂದು ತಿಳಿದುಬಂದಿದೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಧನುಷ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟಿಬೆಟಿಯನ್ ಕಾಲೋನಿಯಲ್ಲಿ ಮಾಜಿ ಸೈನಿಕನಿಂದ ಯುವಕನ ಹತ್ಯೆ
Web Stories