ಮಂಗಳೂರು: ಲಾರಿ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯ ತೊಕ್ಕೊಟ್ಟಿನಲ್ಲಿ ನಡೆದಿದೆ.
ತಲಪಾಡಿ ಕೆ.ಸಿ. ರೋಡ್ ನಿವಾಸಿ ಸಲೀಂ (30) ಮೃತ ದುರ್ದೈವಿ. ಸಲೀಂ ಅವರು ಬೈಕನ ಸ್ಟಾಂಡ್ ತೆಗೆಯದೇ ಚಲಾಯಿಸಿದ್ದರಿಂದ ಆಯತಪ್ಪಿ ರಸ್ತೆಗೆ ಉರುಳಿ ಬಿದ್ದಿದ್ದು, ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಲಾರಿ ಅವರ ಮೇಲೆ ಹರಿದು ಹೋಗಿದೆ.
ಸಲೀಂ ತಲೆಯ ಭಾಗ ಜಜ್ಜಿ ಹೋಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಲೀಂ ಅವರ ಜೇಬಿನಲ್ಲಿ ಎರಡು ಪ್ಯಾಕೆಟ್ ಗಾಂಜಾ ಪತ್ತೆಯಾಗಿದ್ದು, ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.