ಬೆಂಗಳೂರು: ಚಾಮುಂಡೇಶ್ವರಿ ವಿಧಾನಸಭೆ ಮತ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ನಡುವೆ ಮತ್ತೆ ಜಟಾಪಟಿ ಪ್ರಾರಂಭವಾಗಿದೆ.
ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರ ಬದಲಾವಣೆಗೆ ಮುಂದಾಗಿರುವ ಜಿ.ಟಿ.ದೇವೇಗೌಡರ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?: ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳಿಗೆ ನಮ್ಮ ಹಿಂದಿನ ಸರ್ಕಾರ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ಪರಿಣಿತರಾದ ಎಲ್ಲಾ ವರ್ಗದವರನ್ನು ಸಿಂಡಿಕೇಟ್ ಸದಸ್ಯರು/ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳನ್ನಾಗಿ ನೇಮಕ ಮಾಡಲಾಗಿದೆ. ಈ ಎಲ್ಲಾ ಸದಸ್ಯರನ್ನು ಬದಲಾವಣೆ ಮಾಡದೆ ಮುಂದುವರೆಸುವಂತೆ ಕೋರುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.