Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್ ಪ್ರಕರಣ: ಶಾಲಾ ವಿದ್ಯಾರ್ಥಿಗಳನ್ನು ಹೈಕೋರ್ಟ್ ಕೈದಿಗಳಿಗೆ ಹೋಲಿಸಿದೆ – ಸುಪ್ರೀಂಕೋರ್ಟ್‌ನಲ್ಲಿ 2 ಗಂಟೆ ಮಹತ್ವದ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಜಬ್ ಪ್ರಕರಣ: ಶಾಲಾ ವಿದ್ಯಾರ್ಥಿಗಳನ್ನು ಹೈಕೋರ್ಟ್ ಕೈದಿಗಳಿಗೆ ಹೋಲಿಸಿದೆ – ಸುಪ್ರೀಂಕೋರ್ಟ್‌ನಲ್ಲಿ 2 ಗಂಟೆ ಮಹತ್ವದ ವಿಚಾರಣೆ

Latest

ಹಿಜಬ್ ಪ್ರಕರಣ: ಶಾಲಾ ವಿದ್ಯಾರ್ಥಿಗಳನ್ನು ಹೈಕೋರ್ಟ್ ಕೈದಿಗಳಿಗೆ ಹೋಲಿಸಿದೆ – ಸುಪ್ರೀಂಕೋರ್ಟ್‌ನಲ್ಲಿ 2 ಗಂಟೆ ಮಹತ್ವದ ವಿಚಾರಣೆ

Public TV
Last updated: September 7, 2022 5:29 pm
Public TV
Share
5 Min Read
HIJAB SUPREME COURT
SHARE

ನವದೆಹಲಿ: ಶಾಲಾ ವಿದ್ಯಾರ್ಥಿಗಳನ್ನು ಕರ್ನಾಟಕ ಹೈಕೋರ್ಟ್ (Karnataka High Court) ಕೈದಿಗಳಿಗೆ ಹೋಲಿಸಿದೆ. ಜೈಲಿನಲ್ಲಿ ಕೈದಿಗಳಿಗೆ ಯಾವುದೇ ಹಕ್ಕುಗಳು ಇರುವುದಿಲ್ಲ, ಅದೇ ರೀತಿ ಶಾಲೆಗಳಿಗೆ ತೆರಳಿದಾಗ ಮಕ್ಕಳು ಶಿಕ್ಷಕರ ಕಸ್ಟಡಿಯಲ್ಲಿ ಇರುತ್ತಾರೆ. ಅವರಿಗೂ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದೆ‌. ಇದನ್ನು ಕೇಳಿ ನನಗೆ ಆಶ್ಚರ್ಯವಾಗಿದೆ. ಒಂದು ನ್ಯಾಯಾಂಗ ಸಂಸ್ಥೆಯಾಗಿ ಹೈಕೋರ್ಟ್ ಇದನ್ನೆಲ್ಲ ಹೇಗೆ ಹೇಳುತ್ತದೆ? ಎಂದು ಹಿರಿಯ ವಕೀಲ ದೇವದತ್ ಕಾಮತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ (Hijab Row) ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ದೇವದತ್ ಕಾಮತ್ ಹಲವು ಪ್ರಶ್ನೆಗಳನ್ನು ಸುಪ್ರೀಂಕೋರ್ಟ್ (Supreme Court) ಮುಂದಿಟ್ಟರು. ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಎರಡನೇ ದಿನದ ವಿಚಾರಣೆ ನಡೆಯಿತು. ವಕೀಲ ಕಾಮತ್ ಎರಡು ಗಂಟೆಗಳ ಕಾಲ ಸುದೀರ್ಘ ವಾದ ಮಂಡಿಸಿದರು. ಇದನ್ನೂ ಓದಿ: Hijab Row: ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲ್ಲ ಎಂದ ಶಿಕ್ಷಣ ಸಚಿವರ ನಿಲುವು ಖಂಡನೀಯ: ಕ್ಯಾಂಪಸ್ ಫ್ರಂಟ್

MNG HIJAB 2

ಬುರ್ಖಾ ಅಲ್ಲ, ಹಿಜಬ್ ಧರಿಸುತ್ತಿದ್ದಾರೆ
ವಿದ್ಯಾರ್ಥಿನಿಯರು ತರಗತಿಗಳಲ್ಲಿ ಧರಿಸುತ್ತಿರುವುದು ಬುರ್ಕಾ ಅಲ್ಲ, ಅವರು ಹಿಜಬ್ ಧರಿಸುತ್ತಿದ್ದಾರೆ. ಹಿಜಬ್ (Hijab) ಅಂದ್ರೆ ತಲೆಗೆ ಸುತ್ತಿಕೊಳ್ಳುವ ಒಂದು ಬಟ್ಟೆಯಾಗಿದೆ. ಇದು ಕಪ್ಪು ಸೇರಿ ಬೇರೆ ಬೇರೆ ಬಣ್ಣಗಳಲ್ಲಿ ಇರುತ್ತದೆ. ವಿದ್ಯಾರ್ಥಿನಿಯರು ಶಾಲೆಯಲ್ಲಿ ಸಮವಸ್ತ್ರ ಬಟ್ಟೆಯ ಬಣ್ಣದೇ ಹಿಜಬ್ ಧರಿಸುತ್ತಿದ್ದಾರೆ. ಅವರು ಸಮವಸ್ತ್ರ ಬಣ್ಣ ಬಿಟ್ಟು ಬೇರೆ ಬಣ್ಣದ ಬಟ್ಟೆ ಧರಿಸುತ್ತಿಲ್ವಲ್ಲ. ಇದರಲ್ಲಿ ನಿಯಮಗಳ ಉಲ್ಲಂಘನೆ ಏನಿದೆ ಎಂದು ಪ್ರಶ್ನಿಸಿದರು.

ಹಿಜಬ್ ವಿಚಾರದಲ್ಲಿ ಸರ್ಕಾರ ತನ್ನ ಕರ್ತವ್ಯ ಮರೆತಿದೆ. ವಿದ್ಯಾರ್ಥಿನಿಯರು ಜೀನ್ಸ್ ಪ್ಯಾಂಟ್ ಹಾಕಿ ಕಾಲೇಜಿಗೆ ಬಂದಿರಲಿಲ್ಲ. ಯೂನಿಫಾರಂ ಹಾಕದೇ ಬಂದಿರಲಿಲ್ಲ. ಅಥವಾ ಬುರ್ಕಾ ಹಾಕಿ ತರಗತಿಗೆ ಹಾಜರಾಗಿರಲಿಲ್ಲ. ಕೇವಲ ಹೆಡ್ ಸ್ಕಾರ್ಫ್ ಹಾಕಿಕೊಂಡು ಬಂದಿದ್ದರು. ಇದನ್ನೇ ದೊಡ್ಡ ಅಪರಾಧವೆನ್ನುವಂತೆ ಸರ್ಕಾರ ಬಿಂಬಿಸಿದೆ. ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕು ಕಸಿದುಕೊಂಡಿದ್ದಾರೆ. ಸಮವಸ್ತ್ರದ ಮಾದರಿಯ ಹೆಡ್ ಸ್ಕಾಫ್ ಹಾಕಿದ್ರೆ ತಪ್ಪೇನು ಎಂದು ಕೇಳಿದರು.

karnataka high court

ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್‌ಗೆ ಅವಕಾಶ
ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿದೆ. ಈವರೆಗೂ ಕೇಂದ್ರೀಯ ವಿದ್ಯಾನಿಲಯಗಳಲ್ಲಿ ನಿಯಮ ಬದಲಿಸಿಲ್ಲ. ಸಿಖ್‌ರಿಗೆ ಸಮವಸ್ತ್ರದ ಬಣ್ಣ ಟರ್ಬೈನ್‌ಗೆ ಅವಕಾಶ ನೀಡಿದೆ. ಅದೇ ರೀತಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸಮವಸ್ತ್ರ ಬಣ್ಣದ ಹಿಜಬ್ ಧರಿಸಲು ಅವಕಾಶ ನೀಡಿದೆ. ರಾಜ್ಯಗಳಲ್ಲಿ ಮಾತ್ರ ಹಿಜಬ್‌ಗೆ ಅವಕಾಶ ಯಾಕಿಲ್ಲ ಎಂದರು. ಇದನ್ನೂ ಓದಿ: Hijab Row: ಅನ್ಯ ಧರ್ಮೀಯರು ಜಾತ್ರೆಯಲ್ಲಿ ವ್ಯಾಪಾರ ಮಾಡಬಾರದು – ಕಾಪು ಮಾರಿಗುಡಿಗೆ ಪತ್ರ

ಇದಕ್ಕೆ ಪೂರಕವಾಗಿ ಹಳೆ ಸುಪ್ರೀಂಕೋರ್ಟ್ ಕೋರ್ಟ್ ಆದೇಶವನ್ನು ಉಲ್ಲೇಖಿಸಿದ ಕಾಮತ್, ಬಿಜೋಯ್ ಇಮ್ಯಾನುವೆಲ್ ಪ್ರಕರಣದಲ್ಲಿ ವಿದ್ಯಾರ್ಥಿಗಳು ಧರ್ಮವನ್ನು ಮನೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗಬೇಕು ಎಂಬ ವಾದವನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಲು ಇಷ್ಟಪಡದ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್ ಈ ಆದೇಶ ನೀಡಿತ್ತು. ರಾಷ್ಟ್ರಗೀತೆ ಹಾಡದಿದ್ದರೇ ದೇಶದ್ರೋಹವಲ್ಲ, ಆದರೆ ರಾಷ್ಟ್ರಗೀತೆಯ ವೇಳೆ ಎದ್ದು ನಿಲ್ಲಬೇಕು ಎಂದು ಕೋರ್ಟ್ ಹೇಳಿತ್ತು. ಈ ಆದೇಶ ಪ್ರಕಾರ ಧಾರ್ಮಿಕ ನಂಬಿಕೆಗಳನ್ನು ಶಾಲೆಯಲ್ಲಿ ಪಾಲಿಸಬಹುದು. ಈ ಆದೇಶದ ಅನ್ವಯ ಶಾಲೆಯಲ್ಲಿ ವಿದ್ಯಾರ್ಥಿನಿಯರು ಧಾರ್ಮಿಕ ನಂಬಿಕೆ ಪಾಲಿಸಬಹುದು ಎಂದರು.

SUPREME COURT

ದಕ್ಷಿಣ ಆಫ್ರಿಕಾ ಕೋರ್ಟ್ ಮೂಗುತಿಗೆ ಅವಕಾಶ ಕೊಟ್ಟಿತ್ತು
ದಕ್ಷಿಣ ಆಫ್ರಿಕಾದ ಕೋರ್ಟ್ ಆದೇಶವನ್ನು ಉಲ್ಲೇಖಿಸಿ, ಶಾಲಾ ನಿಯಮಗಳಿಗೆ ವಿರುದ್ಧವಾಗಿ ಶಾಲೆಯಲ್ಲಿ ಮೂಗುತಿ ಧರಿಸಲು ತಮಿಳು ಹಿಂದೂ ವಿದ್ಯಾರ್ಥಿನಿಗೆ ದಕ್ಷಿಣ ಆಫ್ರಿಕಾದಲ್ಲಿ ನಿರಾಕರಿಸಲಾಗಿತ್ತು. ಆ ವಿದ್ಯಾರ್ಥಿನಿ ಕೋರ್ಟ್ ಮೆಟ್ಟಿಲೇರಿದ್ದಳು. ಆಕೆಗೆ ದಕ್ಷಿಣ ಆಫ್ರಿಕಾದ ಸಂವಿಧಾನದ ಪ್ರಕಾರ ಮೂಗುತಿ ಧರಿಸಲು ಕೋರ್ಟ್ ಅವಕಾಶ ನೀಡಿತು. ಅಲ್ಲದೆ ಅಮೆರಿಕಾ, ಕೆನಡಾ ಸೇರಿದಂತೆ ಹಲವು ದೇಶದ ಪೂರಕ ಆದೇಶಗಳನ್ನು ಪ್ರಸುತ್ತ ಪಡಿಸಿದರು.

ಸಾಮಾನ್ಯವಾಗಿ ಮಹಿಳೆಯರು ಸ್ಕಾಫ್ ಹಾಕಿಕೊಳ್ಳುತ್ತಾರೆ ಈ ರೀತಿಯ ಸಮಸ್ಯೆಗಳು ಎದುರಾದಾಗ ನ್ಯಾಯಾಲಯವು ಹೇಗೆ ವ್ಯವಹರಿಸುತ್ತದೆ ಎಂಬುದಕ್ಕೆ ಸ್ಪಷ್ಟವಾದ ಆದೇಶಗಳಿದೆ. ಇದು ಸಮುದಾಯದ ನಂಬಿಕೆಯಾಗಿದ್ದರೆ, ಒಬ್ಬ ಜಾತ್ಯತೀತ ನ್ಯಾಯಾಧೀಶರು ನಂಬಿಕೆಯನ್ನು ಒಪ್ಪಿಕೊಳ್ಳಲು ಬದ್ಧರಾಗಿರುತ್ತಾರೆ. ಅವರಿಗೆ ಈ ಬಗ್ಗೆ ತೀರ್ಪು ನೀಡುವ ಯಾವುದೇ ಹಕ್ಕಿಲ್ಲ.

ಬಿಂದಿ, ಮೂಗುತಿ ಕೂಡಾ ಒಂದು ಧಾರ್ಮಿಕ ಗುರುತು. ಮಹಿಳೆಯರು ಉತ್ತಮ ಸದ್ಗುಣಗಳನ್ನು ವೃದ್ಧಿಪಡಿಸಲು ಮತ್ತು ಸಮೃದ್ಧಿ ತರಲು ಮೂಗುತಿಯನ್ನು ಧರಿಸುತ್ತಾರೆ ಎನ್ನುವ ಧಾರ್ಮಿಕ ನಂಬಿಕೆಗಳಿವೆ. ಈ‌ ನಂಬಿಕೆ ಸರಿ ತಪ್ಪು ಎನ್ನುವುದು ಬೇರೆ ಚರ್ಚೆ. ಅದೇ ರೀತಿ ಹಿಜಬ್ ಕೂಡಾ ಒಂದು ಧಾರ್ಮಿಕ ನಂಬಿಕೆಯಾಗಿದೆ.

MNG HIJAB 2 1

ಓಲೆ, ಮೂಗುತಿ ಧಾರ್ಮಿಕತೆಯ ಭಾಗವೇ?
ದೇವದತ್ ಕಾಮತ್ ವಾದದ ವೇಳೆ ಮಧ್ಯಪ್ರದೇಶ ಮಾಡಿದ ನ್ಯಾ. ಹೇಮಂತ್ ಗುಪ್ತಾ, ಭಾರತ ಮಾತ್ರವಲ್ಲ ಪ್ರಪಂಚದಾದ್ಯಂತ ಮಹಿಳೆಯರು ಇಯರ್ ರಿಂಗ್ ಧರಿಸುತ್ತಾರೆ, ಮೂಗುತಿಯನ್ನು ಸಹ ಧರಿಸುತ್ತಾರೆ. ಆದರೆ ಇದು ಧಾರ್ಮಿಕ ಭಾಗವೇ? ನನಗೆ ತಿಳಿದ ಮಟ್ಟಿಗೆ ಮೂಗುತಿ ಧಾರ್ಮಿಕ ನಂಬಿಕೆಯ ಭಾಗವಲ್ಲ ಇದು ಫ್ಯಾಷನ್ ಆಗಿ ಬದಲಾಗಿದೆ ಎಂದು ಪ್ರಶ್ನಿಸಿದರು‌. ಇದನ್ನೂ ಓದಿ: Hijab Row: ನಾವು ಯಾವ ದೇಶದಲ್ಲಿ ಇರುತ್ತೇವೆಯೋ ಆ ದೇಶದ ನಿಯಮಗಳನ್ನು ಪಾಲಿಸಬೇಕು: ಅಬ್ದುಲ್ ಖಾದರ್ ನಡುಕಟ್ಟಿನ್

ಇದಕ್ಕೆ ಪ್ರತಿಯಾಗಿ ಮತ್ತೆ ವಾದ ಮಂಡಿಸಿದ ದೇವದತ್ ಕಾಮತ್, ವಿದ್ಯಾರ್ಥಿಗಳ ಸಮವಸ್ತ್ರ ಹೊರತಾಗಿ ಹಲವು ಧಾರ್ಮಿಕ ಗುರುತುಗಳೊಂದಿಗೆ ಶಾಲೆಗೆ ತೆರಳುತ್ತಾರೆ. ಹಣೆ ಮೇಲೆ ನಾಮ ಹಾಕಲಾಗುತ್ತೆ, ರುದ್ರಾಕ್ಷಿ ಧರಿಸಲಾಗುತ್ತೆ, ಕ್ರಿಶ್ಚಿಯನ್ ಕೊರಳಲ್ಲಿ ಕ್ರಾಸ್ ಹಾಕಿಕೊಳ್ತಾರೆ. ಇವು ಎಲ್ಲವೂ ಧಾರ್ಮಿಕ ಗುರುತುಗಳು ಎಂದರು. ಇದಕ್ಕೆ ಮತ್ತೆ ಪ್ರಶ್ನೆ ಮಾಡಿದ ನ್ಯಾಯಾಧೀಶರು, ರುದ್ರಾಕ್ಷಿ,‌ ಕ್ರಾಸ್ ಯೂನಿಫಾರಂ ಒಳಗಿರುತ್ತದೆ. ಅದನ್ನು ಗುರುತಿಸಲು ಇಲ್ಲಿ ಯಾರೂ ಶರ್ಟ್ ತೆಗೆಯುತ್ತಿಲ್ಲ. ಅದು ಹೇಗೆ ಸಮವಸ್ತ್ರ ನಿಯಮ ಉಲ್ಲಂಘನೆಯಾಗುತ್ತದೆ ಎಂದರು.

ಬಟ್ಟೆ ಬಿಚ್ಚುವ ಹಕ್ಕು ಕೂಡ ಮೂಲಭೂತ ಹಕ್ಕು?
ಮುಂದುವರಿದು, ನಾವು ಇದನ್ನು ತರ್ಕಬದ್ಧವಲ್ಲದ ತುದಿಗಳಿಗೆ ಕೊಂಡೊಯ್ಯಲು ಸಾಧ್ಯವಿಲ್ಲ. ನೀವು ಬಟ್ಟೆ ಧರಿಸುವುದು ಮೂಲಭೂತ ಹಕ್ಕು ಎಂದು ಹೇಳಿದರೆ, ಬಟ್ಟೆ ಬಿಚ್ಚುವ ಹಕ್ಕು ಕೂಡ ಮೂಲಭೂತ ಹಕ್ಕು ಆಗುತ್ತದೆ. ಆರ್ಟಿಕಲ್ 19 (1)a ರ ಭಾಗವಾಗಿ ಉಡುಗೆ ಮೂಲಭೂತ ಹಕ್ಕು ಎಂದು ಎಲ್ಲಿದೆ ಎಂಬುದನ್ನು ನಮಗೆ ತೋರಿಸಿ ಎಂದು ಪ್ರಶ್ನಿಸಿದರು‌.

ಇದಕ್ಕೆ ಉತ್ತರಿಸಿದ ವಕೀಲ ದೇವದತ್ ಕಾಮತ್, ನಾನು ಕ್ಲೀಷೆ ವಾದಗಳನ್ನು ಮಾಡಲು ಇಲ್ಲಿಗೆ ಬಂದಿಲ್ಲ. ನಾನು ಒಂದು ಅಂಶವನ್ನು ಸಾಬೀತುಪಡಿಸುತ್ತಿದ್ದೇನೆ. ವಿದ್ಯಾರ್ಥಿನಿಯರು ಸಮವಸ್ತ್ರವನ್ನು ಧರಿಸುವುದಿಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಸಮವಸ್ತ್ರದ ಜೊತೆಗೆ ನಾನು ಸ್ಕಾರ್ಫ್ ಅನ್ನು ಧರಿಸಲು ಕೇಳುತ್ತಿದ್ದೇನೆ. ಅದು ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುತ್ತದೆಯೇ? ಹಿಜಬ್ ಧರಿಸುವುದನ್ನು ಆರ್ಟಿಕಲ್ 19 ರ ಆಧಾರದ ಮೇಲೆ ನಿರ್ಬಂಧಿಸಬಹುದೇ ಎಂದು ಮರು ಪ್ರಶ್ನಿಸಿದರು. ಇದನ್ನೂ ಓದಿ: Hijab Row – ಮಂಡ್ಯ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್‌

ಕೋರ್ಟ್ ಸಮಯ ಅಂತ್ಯವಾದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 11:30 ಕ್ಕೆ ವಿಚಾರಣೆ ಮುಂದೂಡಲಾಯಿತು. ಈ ವೇಳೆ ಮಧ್ಯಪ್ರವೇಶ ಮಾಡಿದ ಮತ್ತೋರ್ವ ವಕೀಲರು ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ಆದೇಶದ ಬಗ್ಗೆ ವಾದಿಸಲು ಮುಸ್ಲಿಂ ವಿದ್ವಾಂಸರೊಬ್ಬರು ಇಚ್ಛಿಸಿದ್ದಾರೆ, ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ಕೋರ್ಟ್ ಅನುಮತಿ ನೀಡಿದೆ.

Live Tv
[brid partner=56869869 player=32851 video=960834 autoplay=true]

TAGGED:Hijabhijab rowKarnataka High CourtNew DelhiSupreme Courtಕರ್ನಾಟಕ ಹೈಕೋರ್ಟ್ನವದೆಹಲಿಸುಪ್ರೀಂ ಕೋರ್ಟ್ಹಿಜಬ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Eshwar Khandre Sameeksha Reddy 1
Bengaluru City

ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ್‌ ಖಂಡ್ರೆ ಭರವಸೆ

Public TV
By Public TV
19 seconds ago
Karnataka grants Rs 10 crore to Wayanad landslide victims BJP JDS slams congress govt
Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
By Public TV
43 minutes ago
Chinnaswamy Stadium
Bengaluru City

ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು

Public TV
By Public TV
2 hours ago
Mojtaba Khamenei
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ

Public TV
By Public TV
2 hours ago
trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಯ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
2 hours ago
Air Canada Express Crew
Latest

Air Canada Plane Crash | 330 ಅಡಿ ದೂರಕ್ಕೆ ಬಿದ್ದರೂ ಉಳಿದ ಸಿಬ್ಬಂದಿ – ಸೀಟಿನಲ್ಲಿ ಸಿಲುಕಿ ಅದೃಷ್ಟವಶಾತ್ ಪಾರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?