ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿದ್ದ ಹಿಂದೂ ಮಹಾಸಭಾ ನಾಯಕಿ ಅರೆಸ್ಟ್

Public TV
1 Min Read
hindu mahasabha

ಅಲಿಘಡ: ಮಹಾತ್ಮ ಗಾಂಧೀಜಿಯವರ ಪ್ರತಿಕೃತಿಗೆ ಗುಂಡಿಟ್ಟು ಸಂಭ್ರಮಾಚರಣೆ ನಡೆಸಿದ್ದ ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದ ದಿನದ ಬಳಿಕ ನಾಪತ್ತೆಯಾಗಿದ್ದ ಹಿಂದೂ ಮಹಾಸಭಾ ನಾಯಕಿ ಶಕುನ್ ಪಾಂಡೆಯನ್ನು ಪೊಲೀಸರು ಪತ್ತೆ ಮಾಡಿ ಬಂಧನ ಮಾಡಿದ್ದಾರೆ. ಅಲ್ಲದೇ ಆಕೆಯ ಪತಿ ಅಶೋಕ್ ಪಾಂಡ್ಯರನ್ನು ಕೂಡ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜನವರಿ 30 ರಂದು ನಾಥೂರಾವ್ ಗೋಡ್ಸೆ ಗಾಂಧೀಜಿ ಅವರನ್ನು ಹತ್ಯೆ ಮಾಡಿದ್ದ ಸನ್ನಿವೇಶವನ್ನು ಮರು ನಿರ್ಮಿಸಿದ್ದರು, ಅಲ್ಲದೇ ಆಟಿಕೆ ಗನ್ ಮೂಲಕ ಗಾಂಧೀಜಿ ಅವರ ಪ್ರತಿಕೃತಿಗೆ ಗುಂಡಿಟ್ಟು ಪೋಸ್ ಕೊಟ್ಟಿದ್ದರು. ಅಲ್ಲದೇ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ದಸರಾ ದಿನದಂದು ರಾವಣನನ್ನು ಸುಟ್ಟು ಸಂಭ್ರಮ ಪಡುವಂತೆ ಇಂದು ಕೂಡ ನಡೆಸಲಾಯಿತು ಎಂದು ತಿಳಿಸಿದ್ದರು. ಈ ವೇಳೆ ಸಂಘಟನೆಯ ಕಾರ್ಯಕರ್ತರಿಗೆ ಗಾಂಧೀಜಿ ಅವರ ಸಾವನ್ನಪ್ಪಿದ ದಿನವನ್ನು ಶೌರ್ಯ ದಿನ ಎಂದು ಆಚರಣೆ ಮಾಡಿ ಸಿಹಿ ಕೂಡ ಹಂಚಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 12 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಲ್ಲದೇ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಮೂವರನ್ನು ಕೂಡಲೇ ವಶಕ್ಕೆ ಪಡೆದಿದ್ದರು.

ಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *