ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಆರಂಭವಾದ ಗಲಾಟೆಯು ಯುವಕನ(Young Man) ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ(Belagavi) ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನಗೌಡ ಪಾಟೀಲ್ (20) ಕೊಲೆಯಾದ ಯುವಕನಾಗಿದ್ದಾನೆ. ನಿನ್ನೆ ಸಂಜೆ ನಡೆದ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ ಮಾಜಿ ಮೇಯರ್
ಮತ್ತೊಂದು ಗುಂಪಿನ ಯುವಕನೊಬ್ಬ ಅರ್ಜುನಗೌಡನಿಗೆ ಚಾಕು ಇರಿದಿದ್ದಾರೆ. ಈ ವೇಳೆ ಅರ್ಜುನಗೌಡ ಕುಸಿದು ನೆಲಕ್ಕೆ ಬೀಳುತ್ತಿದ್ದಂತೆ ಹಂತಕರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೊಲೆಯಾದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಗಣೇಶೋತ್ಸವದಲ್ಲಿ ಡಿಜೆ ಹಾಡಿಗೆ ಸಖತ್ ಸ್ಟೆಪ್ ಹಾಕಿದ ACP