Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಷಬ್ ಶೆಟ್ಟರ ಕಥಾ ಸಂಗಮದ ಸಂಗೀತ ಸಮಾಗಮ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಿಷಬ್ ಶೆಟ್ಟರ ಕಥಾ ಸಂಗಮದ ಸಂಗೀತ ಸಮಾಗಮ!

Bengaluru City

ರಿಷಬ್ ಶೆಟ್ಟರ ಕಥಾ ಸಂಗಮದ ಸಂಗೀತ ಸಮಾಗಮ!

Public TV
Last updated: November 20, 2019 10:08 pm
Public TV
Share
2 Min Read
KATHASANGAMA A
SHARE

ಬೆಂಗಳೂರು: ವರ್ಷಾಂತರಗಳ ಹಿಂದೆ ಪುಟ್ಟಣ್ಣ ಕಣಗಾಲರು ನಿರ್ದೇಶನ ಮಾಡಿದ್ದ ಕಥಾ ಸಂಗಮ ಚಿತ್ರವನ್ನು ಕನ್ನಡದ ಪ್ರೇಕ್ಷಕರು ಇಂದಿಗೂ ನೆನಪಿಟ್ಟುಕೊಂಡಿದ್ದಾರೆ. ಅದು ಆ ಕಾಲಕ್ಕೊಂದು ಹೊಸ ಪ್ರಯೋಗ. ಅದೊಂದು ಸಾಹಸ. ಈಗ ಕಾಲಘಟ್ಟ ಬದಲಾಗಿದೆ. ಕನ್ನಡ ಚಿತ್ರರಂಗದಲ್ಲಿಯೂ ಹೊಸ ಹರಿವು ಜೋರಾಗಿದೆ. ಈ ಅಲೆಯಲ್ಲಿ ಮುಂಚೂಣಿಯಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇದೀಗ ಕಥಾ ಸಂಗಮವೆಂಬ ಶೀರ್ಷಿಕೆಯಲ್ಲಿಯೇ ಚಿತ್ರವೊಂದನ್ನು ಅಣಿಗೊಳಿಸಿದ್ದಾರೆ. ಏಳು ಮಂದಿ ನಿರ್ದೇಶಕರ ಏಳು ಕಥೆಗಳನ್ನೊಳಗೊಂಡಿರುವ ಈ ಸಿನಿಮಾದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮಕ್ಕೀಗ ಮುಹೂರ್ತ ನಿಗದಿಯಾಗಿದೆ. ಕಥಾಸಂಗಮ ಎಂಬುದು ಎಷ್ಟು ಹೊಸತನದ ಪ್ರಯೋಗವೋ ಅದಕ್ಕೆ ತಕ್ಕುದಾಗಿಯೇ ರಿಷಬ್ ಶೆಟ್ಟಿ ಮತ್ತವರ ಸಂಗಡಿಗರು ಧ್ವನಿಸುರುಳಿ ಕಾರ್ಯಕ್ರಮವನ್ನೂ ರೂಪಿಸಿದ್ದಾರೆ.

WhatsApp Image 2019 11 20 at 9.16.55 PM

ನವೆಂಬರ್ 21ರಂದು ಸಂಜೆ 5.30ಕ್ಕೆ ರವೀಂದ್ರ ಕಲಾ ಕ್ಷೇತ್ರದ ಹಿಂಭಾಗದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ಕಥಾಸಂಗಮದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ ನೆರವೇರಲಿದೆ. ಸಿನಿಮಾ ಸಂಬಂಧಿತ ಕಾರ್ಯಕ್ರಮಗಳಿಗೆ, ಧ್ವನಿ ಸುರುಳಿ ಬಿಡುಗಡೆಯಂಥಾದ್ದಕ್ಕೆ ಒಂದಷ್ಟು ಚೌಕಟ್ಟು, ಸಿದ್ಧ ಸೂತ್ರಗಳಿವೆ. ಆದರೆ ಕಥಾಸಂಗಮದ ಧ್ವನಿ ಸುರುಳಿ ಕಾರ್ಯಕ್ರಮವನ್ನು ರೂಪಿಸಿರೋ ರೀತಿಯೇ ನಿಜಕ್ಕೂ ಆಹ್ಲಾದಕರವಾಗಿದೆ. ನಾಟಕ, ಸಾಹಿತ್ಯ ಕಾರ್ಯಕ್ರಮಗಳ ಮೂಲಕ ರಂಗೇರಿಕೊಳ್ಳುವ ರವೀಂದ್ರ ಕಲಾಕ್ಷೇತ್ರದ ಪರಿಸರವನ್ನು ಸಿನಿಮಾ ಕಾರ್ಯಕ್ರಮದ ಮೂಲಕ ಕಳೆಗಟ್ಟಿಸುವಂತೆ ರಿಷಬ್ ಶೆಟ್ಟಿ ಮತ್ತು ತಂಡ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.

Katha Sangama A

ಇದರ ಆಹ್ವಾನ ಪತ್ರಿಕೆ ಗಮನಿಸಿದರೇನೇ ಈ ಧ್ವನಿ ಸುರುಳಿ ಬಿಡುಗಡೆ ಸಮಾರಂಭದ ವೈಶಿಷ್ಟ್ಯವೇನೆಂಬುದು ಅರ್ಥವಾಗುತ್ತದೆ. ಇದನ್ನೂ ಒಂದು ಸಾಹಿತ್ಯದ ಕಾರ್ಯಕ್ರಮದಂತೆ, ಸಂಗೀತದ ಹಬ್ಬದಂತೆ ನಡೆಸಲು ನೀಲನಕ್ಷೆ ರೆಡಿ ಮಾಡಿಕೊಳ್ಳಲಾಗಿದೆ. ಅಂದು ಸಂಸ ಬಯಲು ರಂಗಮಂದಿರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಥಾಸಂಗಮದ ಧ್ವನಿಸುರುಳಿಯನ್ನು ಸಂಜೆ ಆರು ಗಂಟೆಗೆ ಲೋಕಾರ್ಪಣೆಗೊಳಿಸಲಿದ್ದಾರೆ. ಆ ನಂತರ 6.15ರಿಂದ ಪ್ರದೀಪ್ ಬಿ.ವಿ ಮತ್ತು ಸಂಗಡಿಗರಿಂದ ಪುಟ್ಟಣ್ಣ ಕಣಗಾಲ್ ಚಿತ್ರಗಳಿಂದ ಆಯ್ದ ಗೀತೆಗಳ ಸಂಗೀತ ಸುಧೆ ಹರಿಯಲಿದೆ. 7.15ರಿಂದ ಕಥಾ ಸಂಗಮ ಚಿತ್ರದ ದೃಶ್ಯ ಗೀತೆ, ದೃಶ್ಯದ ತುಣುಕು ಮತ್ತು ತೆರೆಯ ಹಿಂದಿನ ಚಿತ್ರಗಳ ಪ್ರದರ್ಶನ ಕಾರ್ಯಕ್ರಮ ಜರುಗಲಿದೆ. 7.30ರಿಂದ ಎಂಟು ಗಂಟೆಯವರೆಗೆ ಸಂಗೀತಾ ಕಟ್ಟಿ, ವಾಸು ದೀಕ್ಷಿತ್, ಡಾಸ್ ಮೋಡ್, ರಾಜ್ ಬಿ ಶೆಟ್ಟಿ ಮತ್ತು ಅದಿತಿ ಸಾಗರ್ ಮುಂತಾದವರಿಂದ ಕಥಾ ಸಂಗಮ ಚಿತ್ರದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.

Katha Sangama B

ಇದು ನಿಜಕ್ಕೂ ಹೊಸ ರೀತಿಯ ಬೆಳವಣಿಗೆ. ಸಿನಿಮಾ ಸಂಬಂಧಿ ಕಾರ್ಯಕ್ರಮಗಳೂ ಸಾಹಿತ್ಯಾತ್ಮಕ ಗಂಧ ಮೆತ್ತಿಕೊಂಡು ನಡೆಯುವುದು ಖುಷಿಯ ವಿಚಾರ. ಇದಕ್ಕೆ ಕಾರಣರಾದ ರಿಷಬ್ ಶೆಟ್ಟಿ ಮತ್ತು ತಂಡವನ್ನು ಅಭಿನಂದಿಸಲೇ ಬೇಕು. ಈ ಕಾರ್ಯಕ್ರಮ ಎಷ್ಟು ವಿಶಿಷ್ಟವಾಗಿ ನಡೆಯಲಿದೆಯೋ ಅದಕ್ಕೆ ತಕ್ಕುದಾದ ರೀತಿಯಲ್ಲಿಯೇ ಕಥಾ ಸಂಗಮ ಚಿತ್ರ ಮೂಡಿ ಬಂದಿದೆಯಂತೆ. ವಿಶೇಷವೆಂದರೆ ಇದರಲ್ಲಿ ಏಳು ಮಂದಿ ಬರೆದ ಏಳು ಕಥೆಗಳಿವೆ. ಅದನ್ನು ಒಟ್ಟುಗೂಡಿಸಿ ನಿರ್ದೇಶನ ಮಾಡುವ ಜವಾಬ್ದಾರಿಯನ್ನು ರಿಷಬ್ ಶೆಟ್ಟಿ ಹೊತ್ತುಕೊಂಡಿದ್ದಾರೆ. ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಮೋದ್ ಶೆಟ್ಟಿ, ಹರಿಪ್ರಿಯಾ, ಯಜ್ಞಾ ಶೆಟ್ಟಿ, ಕಿಶೋರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನಲವತ್ತು ಮಂದಿ ತಂತ್ರಜ್ಞರು ಸೇರಿ ರೂಪಿಸಿರೋ ಈ ಸಿನಿಮಾ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದ ಮೂಲಕ ಮತ್ತಷ್ಟು ಕಳೆಗಟ್ಟಿಕೊಳ್ಳಲಿದೆ.

TAGGED:HK PrakashKairam VashiKatha SangamaPublic TVrishab shettyಕಥಾ ಸಂಗಮ ಆಡಿಯೋ ರಿಲೀಸ್ಕಿಶೋರ್ಪ್ರಮೋದ್ ಶೆಟ್ಟಿಯಜ್ಞಾ ಶೆಟ್ಟಿರಾಜ್ ಬಿ.ಶೆಟ್ಟಿರಿಷಭ್ ಶೆಟ್ಟಿಹರಿಪ್ರಿಯಾ
Share This Article
Facebook Whatsapp Whatsapp Telegram

Cinema news

katrina Kaif and vicky kaushal
ಪುತ್ರನಿಗೆ `ವಿಹಾನ್‌ʼ ಎಂದು ಹೆಸರಿಟ್ಟ ಕತ್ರೀನಾ-ವಿಕ್ಕಿ ಕೌಶಲ್ 
Bollywood Cinema Latest Top Stories
Koragajja Sudheer Atthavar
ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್: ನಿರ್ದೇಶಕ ಸುಧೀರ್ ಅತ್ತಾವರ್ ಸ್ಪಷ್ಟನೆ
Cinema Latest Sandalwood Top Stories
Yash Toxic
ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಾಯ್ತು – ಯಶ್ ದೊಡ್ಡ ಸಿಗ್ನಲ್ ಕೊಟ್ಟಾಯ್ತು
Cinema Latest Sandalwood Top Stories
gautam srivatsa gave music to the hindi film azad bharat 1
ಹಿಂದಿಯ ಆಜಾದ್ ಭರತ್ ಚಿತ್ರಕ್ಕೆ ಜೀವ ತುಂಬಿದ ಗೌತಮ್ ಶ್ರೀವತ್ಸ
Cinema Latest Sandalwood

You Might Also Like

A.Chandrashekhar Udupa
Latest

ಸಾಲಿಗ್ರಾಮ ಡಿವೈನ್‌ ಪಾರ್ಕ್‌ ಸಂಸ್ಥಾಪಕ ಎ.ಚಂದ್ರಶೇಖರ್‌ ಉಡುಪ ಹೃದಯಾಘಾತದಿಂದ ನಿಧನ

Public TV
By Public TV
13 minutes ago
supreme Court 1
Court

ನಾಯಿಯ ಮನಸ್ಸು ಓದಲು ಸಾಧ್ಯವಿಲ್ಲ – ಬೀದಿ ನಾಯಿಗಳ ಬಗ್ಗೆ ಸುಪ್ರೀಂ ಅಭಿಪ್ರಾಯ

Public TV
By Public TV
13 minutes ago
Train
Bengaluru City

ಸಂಕ್ರಾಂತಿ; ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
41 minutes ago
Bengaluru Bagalgunte Techie Suicide
Bengaluru City

Bengaluru | ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ

Public TV
By Public TV
53 minutes ago
Koppal Gavi Mutt Fair
Districts

ಗವಿಮಠ ಜಾತ್ರೆಯ ಪ್ರಸಾದದಲ್ಲಿ ವಿಶೇಷ – 2 ಲಕ್ಷಕ್ಕೂ ಹೆಚ್ಚು ಹಪ್ಪಳ ವಿತರಣೆ

Public TV
By Public TV
1 hour ago
siddaramaiah 5
Haveri

ಇನ್ನೆಷ್ಟು ದಿನ ಇರ್ತೀವೋ ಗೊತ್ತಿಲ್ಲ, ನನ್ನ ಆಡಳಿತ ತೃಪ್ತಿಯಿದೆ: ಸಿದ್ದರಾಮಯ್ಯ ವಿದಾಯದ ಮಾತು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?