ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಮತ್ತು ಇಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಕೇರಳ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಫೆ.12 ಮತ್ತು 13 ರಂದು ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು ಎಂದು ಕೇರಳ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಹಾಗಾಗಿ ನಿನ್ನೆ ಮತ್ತು ಇಂದು ವಿಚಾರಣೆಗಾಗಿ ಇಬ್ಬರೂ ಹಾಜರಾಗಿದ್ದಾರೆ.
ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕನ್ನಡದ ನಿರ್ದೇಶಕ ರಿಷಬ್ ಮತ್ತು ಕಾಂತಾರ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಮೇಲೆ ದೂರು ದಾಖಲಾಗಿತ್ತು. ದೂರಿನ ಅನ್ವಯ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಕೇರಳ ಪೊಲೀಸರು ನೋಟಿಸ್ ನೀಡಿದ್ದರು. ನಿನ್ನೆ ಮತ್ತು ಇಂದು ಇಬ್ಬರೂ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತನಿಖಾಧಿಕಾರಿ ಡಿಸಿಪಿ ಕೈಇ ಬೈಜು ತಿಳಿಸಿದ್ದಾರೆ. ಇದನ್ನೂ ಓದಿ: ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ
ಮೊನ್ನೆಯಷ್ಟೇ ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.
ಆದರೆ, ಸುಪ್ರೀಂ ಕೋರ್ಟ್ ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k