ತಿರುಪತಿ ಲಡ್ಡು ವಿವಾದ – ಬೆಂಗಳೂರಿನ ದೇವಸ್ಥಾನದಲ್ಲಿ ಆಗಮಶಾಸ್ತ್ರದಂತೆ ಶುದ್ಧಿಕಾರ್ಯ

Public TV
2 Min Read
Bengaluru TTD 2

ಬೆಂಗಳೂರು: ತಿರುಪತಿ ಲಡ್ಡು (Tirupati Laddu) ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಅರ್ಚಕರು ಸಂಪ್ರೋಕ್ಷಣೆ ಮಾಡಿ ಶುದ್ಧೀಕರಣ ಮಾಡಿದರು. ಆಗಮಶಾಸ್ತ್ರದಂತೆ ಶುದ್ಧಿಕಾರ್ಯ (Ritualistic Cleansing) ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಬೆಳಗ್ಗೆ 10:30 ರಿಂದ ಆರಂಭವಾಗಿರುವ ಶುದ್ಧಿಕಾರ್ಯ ಸಂಜೆ 4:30ರ ವೇಳೆಗೆ ಮುಕ್ತಾಯಗೊಳ್ಳಲಿದೆ. ಸಂಜೆ 6:30ರ ಬಳಿಕ ಭಕ್ತರು ಎಂದಿನಂತೆ ದೇವರ ದರ್ಶನ ಪಡೆಯಬಹುದಾಗಿದೆ. ಲಡ್ಡು ಕೌಂಟರ್‌ ಸಹ 6 ಗಂಟೆಯ ನಂತರ ಓಪನ್‌ ಇರಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ನನ್ನ ಮಗ ಪಟಾಕಿ ಹಾರಿಸಲು ಹೆದರುತ್ತಿದ್ದ, ಗುಂಡು ಹಾರಿಸಲು ಸಾಧ್ಯವೇ – ಮೃತ ರೇಪ್ ಆರೋಪಿಯ ತಾಯಿ ಕಣ್ಣೀರು

Bengaluru TTD

ಒಂದು ದಿನದ ಹಿಂದೆಯಷ್ಟೇ ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿದ್ದರು. ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ದೇವಾಲಯ ಶುದ್ಧೀಕರಣ ಮಾಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನಲ್ಲೂ ಶುದ್ಧೀಕರಣ ಕಾರ್ಯ ನಡೆದಿದೆ.

ಈ ಕುರಿತು ಮಾತನಾಡಿರುವ ಟಿಟಿಡಿ ಸಿಬ್ಬಂದಿ, ಈ ಹಿಂದೆ ಕಡಿಮೆ ಲಡ್ಡು ಸೇಲ್ ಆಗ್ತಿತ್ತು. ಇದೀಗ ಹೆಚ್ಚು ಲಡ್ಡನ್ನು ಭಕ್ತರು ತೆಗೆದುಕೊಂಡು ಹೋಗ್ತಿದ್ದಾರೆ. ಯಾರು ತಿರುಪತಿಯಲ್ಲಿ ಆದ ಘಟನೆ ಬಗ್ಗೆ ಕೇಳ್ತಿಲ್ಲ. ಲಡ್ಡು ತೆಗೆದುಕೊಂಡು ಹೋಗ್ತಿದ್ದಾರೆ. ಪ್ರತಿನಿತ್ಯ ಒಂದು ಸಾವಿರ ಲಡ್ಡು ಮಾರಾಟವಾಗ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

Bengaluru TTD 3

ಅಕ್ರಮಗಳ ತನಿಖೆಗೆ SIT ರಚನೆ:
ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ (Tirupati) ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ (Tirupati Laddu Row) ಎಂಬ ವಿವಾದದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು (Chandrababu Naidu) ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಇದನ್ನೂ ಓದಿ: ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

ಈ ಹಿಂದೆ ಆಡಳಿತಾರೂಢ ತೆಲುಗು ದೇಶಂ ಪಕ್ಷವು (TDP), ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು. ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

Share This Article