Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದ ಈ ದೇಗುಲಗಳಲ್ಲಿ ಪುರುಷರಿಗಿಲ್ಲ ಪ್ರವೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇರಳದ ಈ ದೇಗುಲಗಳಲ್ಲಿ ಪುರುಷರಿಗಿಲ್ಲ ಪ್ರವೇಶ

Bengaluru City

ಕೇರಳದ ಈ ದೇಗುಲಗಳಲ್ಲಿ ಪುರುಷರಿಗಿಲ್ಲ ಪ್ರವೇಶ

Public TV
Last updated: January 2, 2019 3:52 pm
Public TV
Share
3 Min Read
Temple Men
SHARE

– ದೇಶದ ಒಟ್ಟು ಆರು ಕ್ಷೇತ್ರಗಳಲ್ಲೂ ಪುರುಷರಿಗೆ ನಿರ್ಬಂಧ

ಕೇರಳದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಕನಕದುರ್ಗ ಮತ್ತು ಬಿಂದು ಎಂಬ ಇಬ್ಬರು ಪ್ರವೇಶಿಸಿದ್ದಾರೆ. ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ದೇವರನಾಡಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ವರ್ಷಗಳ ಇತಿಹಾಸವುಳ್ಳ ಭಾರತದ ಸಂಸ್ಕೃತಿಯಲ್ಲಿ ಕೆಲವು ದೇಗುಲಗಳ ಪ್ರವೇಶಕ್ಕೆ ನಿರ್ಬಂಧವಿದ್ದರೆ ಮತ್ತೆ ಕೆಲ ದೇವಸ್ಥಾನಗಳಿಗೆ ಪ್ರವೇಶ ನಿಷೇಧವಿದೆ.

ಈಗ ಲಿಂಗಸಮಾನತೆ ಕೇಳುವ ಕಾಲವಾಗಿದ್ದು, ಸುಪ್ರೀಂಕೋರ್ಟ್ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ತೀರ್ಪು ಪ್ರಕಟಿಸಿತ್ತು. ತೀರ್ಪು ಬಂದ ಬಳಿಕ ಅಯ್ಯಪ್ಪ ದೇಗುಲ ಪ್ರವೇಶಿಸಲು ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾ, ತೃಪ್ತಿ ದೇಸಾಯಿ ಸೇರಿದಂತೆ ಹಲವರು ಪ್ರಯತ್ನಿಸಿ ವಿಫಲವಾಗಿದ್ದರು. ಕೊನೆಗೆ ಇಂದು ಕನಕದುರ್ಗ ಮತ್ತು ಬಿಂದು ದೇಗುಲ ಪ್ರವೇಶಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇದೇ ರೀತಿ ದೇಶದ ಕೆಲವು ದೇವಸ್ಥಾನಗಳಲ್ಲಿ ಪುರುಷರ ಅನುಮತಿಯನ್ನು ನಿಷೇಧಿಸಲಾಗಿದೆ. ಅಂತಹ ಎರಡು ದೇವಸ್ಥಾನದ ಕೇರಳದಲ್ಲಿಯೇ ಇದೆ. ಹಾಗಾದ್ರೆ ಆ ದೇವಸ್ಥಾನಗಳ ಮಾಹಿತಿ ಇಲ್ಲಿದೆ.

1. ಅತ್ತಕುಲ ಭಾಗ್ಯವತಿ ದೇವಾಲಯ:
ಇದು ಕೇರಳ ರಾಜ್ಯದ ತಿರುವನಂತಪುರ ಜಿಲ್ಲೆಯಲ್ಲಿದೆ. ಈ ದೇವಾಲಯದಲ್ಲಿ ಮಹಿಳೆಯರು ಅರ್ಚಕಿಯರಾಗಿದ್ದು, ಪುರುಷರಿಗೆ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ದೇವಸ್ಥಾನದ ಪೊಂಗಲ್ ಹಬ್ಬದಲ್ಲಿ 30 ಲಕ್ಷಕ್ಕೂ ಹೆಚ್ಚು ಮಹಿಳಾ ಭಕ್ತಾದಿಗಳು ಭಾಗಿಯಾಗಿ ಗಿನ್ನಿಸ್ ದಾಖಲೆಯನ್ನು ಸೇರಿತ್ತು. ಫೆಬ್ರವರಿ ಮತ್ತು ಮಾರ್ಚ್ ತಿಂಗಳದಲ್ಲಿ 10 ದಿನ ಪೊಂಗಲ್ ಆಚರಿಸಲಾಗುತ್ತದೆ.

Attukal Temple

2. ಚಕ್ಕುಲತುಕವು ದೇವಾಲಯ:
ಈ ದೇವಾಲಯ ಕೇರಳದ ಅಲಪುಳಾ ಜಿಲ್ಲೆಯ ನಿರಟ್ಟಪುರಂ ಎಂಬಲ್ಲಿದೆ. ಇಲ್ಲಿ ದುರ್ಗಾ ಮಾತೆಯ ಪ್ರತಿರೂಪ ಭಾಗ್ಯವತಿ ತಾಯಿಗೆ ಪೂಜೆ ಸಲ್ಲಿಸಲಾಗುತ್ತದೆ. ಪ್ರತಿನಿತ್ಯ ಮಹಿಳಾ ಅರ್ಚಕಿಯರೇ ಪೂಜೆಯನ್ನು ಸಲ್ಲಿಸುತ್ತಾರೆ. ಇಲ್ಲಿ ಆಚರಿಸುವ ಸಂಪ್ರದಾಯವನ್ನು ನಾರಿ ಪೂಜೆ ಎಂದು ಕರೆಯಲಾಗುತ್ತದೆ. ಡಿಸೆಂಬರ್ ತಿಂಗಳ ಮೊದಲ ಶುಕ್ರವಾರ ಇಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಪೂಜೆಯಲ್ಲಿ ಪಾಲ್ಗೊಳ್ಳುವ ಮಹಿಳಾ ಭಕ್ತಾದಿಗಳು 10 ದಿನ ಉಪವಾಸ ವ್ರತ ಆಚರಿಸಬೇಕಾಗುತ್ತದೆ.

Chakkulathukavu Temple

3. ಸಂತೋಷಿ ಮಾ ದೇವಾಲಯ:
ದೇಶದ ಹಲವೆಡೆ ಇರುವ ಸಂತೋಷಿ ಮಾ ದೇಗುಲಗಳಿಗೆ ಮಹಿಳೆಯರೇ ಅರ್ಚಕಿಯರು. ಪುರುಷರ ತಾಯಿಗೆ ಪೂಜೆ ಸಲ್ಲಿಸುವಂತಿಲ್ಲ. ಸಂತೋಷಿ ಮಾ ಮಹಿಳಾ ಭಕ್ತಾದಿಗಳನ್ನೇ ಹೊಂದಿದ್ದು, ಕನ್ಯೆಯರು ಮತ್ತು ಅಥವಾ ಮಹಿಳೆಯರು ಕಟ್ಟುನಿಟ್ಟಿನ ಸಂತೋಷಿ ಮಾ ವ್ರತ ಆಚರಣೆ ಮಾಡುತ್ತಾರೆ. ಇದನ್ನೂ ಓದಿ: ದೇಶದ ಐದು ಧಾರ್ಮಿಕ ಕೇಂದ್ರಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ

4. ಬ್ರಹ್ಮ ದೇವಾಲಯ:
ರಾಜಸ್ಥಾನದ ಪುಷ್ಕರದಲ್ಲಿರುವ ಬ್ರಹ್ಮ ದೇವಾಲಯಕ್ಕೆ ವಿವಾಹಿತ ಪುರುಷರಿಗೆ ಪ್ರವೇಶವಿಲ್ಲ. ಇಲ್ಲಿ ಬ್ರಹ್ಮದೇವನನ್ನು ಪೂಜಿಸಲಾಗುತ್ತದೆ. ಕಾರ್ತಿಕ ಪೌರ್ಣಿಮ ದಿನ ಬ್ರಹ್ಮದೇವನಿಗೆ ವಿಶೇಷ ಪೂಜೆ-ಪುನಸ್ಕಾರಗಳನ್ನು ಸಲ್ಲಿಸಲಾಗುತ್ತದೆ.

santoshi ma bhahma

5. ಭಾಗತಿ ಮಾ ದೇವಾಲಯ:
ಭಾಗತಿ ಮಾ ದೇವಾಲಯ ತಮಿಳುನಾಡಿನ ಕನ್ಯಾಕುಮಾರಿಯಲ್ಲಿದೆ. ಪಾರ್ವತಿ ದೇವಿ ಸಮುದ್ರದ ಮಧ್ಯೆ ಏಕಾಂಗಿಯಾಗಿ ಕುಳಿತು ಶಿವದೇವನೇ ನನ್ನ ಪತಿಯಾಗಬೇಕೆಂದು ಪಾರ್ವತಿ ದೇವಿ ಕಠಿಣ ತಪಸ್ಸು ಮಾಡಿದ್ದಳಂತೆ. ಹಾಗಾಗಿ ಭಾಗತಿ ದೇಗುಲಕ್ಕೆ ಮಹಿಳೆಯರಿಗೆ ಮಾತ್ರ ಪ್ರವೇಶವಿದೆ. ಇದನ್ನು ಕನ್ಯಾಕುಮಾರಿ ದೇಗುಲ ಅಂತಾನೂ ಕರೆಯಲಾಗುತ್ತದೆ. ಕನ್ಯಾ ಮಾ ಭಗವತಿ ದುರ್ಗಾ ತಾಯಿಗೆ ಮಹಿಳೆಯರೇ ಅರ್ಚಕಿಯರಾಗಿ ಪೂಜೆ ಸಲ್ಲಿಸುತ್ತಾರೆ.

6. ಮಾತಾ ದೇಗುಲ:
ಬಿಹಾರದ ಮುಜಫರ್ ನಗರದಲ್ಲಿ ಮಾತಾ ದೇವಸ್ಥಾನವಿದೆ. ಇಲ್ಲಿ ದೇಗುಲದ ಆವರಣದಲ್ಲಿಯೂ ಪುರುಷರು ಪ್ರವೇಶಿಸಬಾರದೆಂಬ ಕಠಿಣ ನಿಯಮವಿದೆ.

ಒಟ್ಟಿನಲ್ಲಿ ದೇಶದಲ್ಲಿ ಹೇಗೆ ಮಹಿಳೆಯರಿಗೆ ಕೆಲವು ದೇಗುಲಗಳಿಗೆ ಪ್ರವೇಶವಿಲ್ಲ. ಅಂತೆಯೇ ಕೆಲವು ಕಡೆ ಪುರುಷರಿಗೂ ಪ್ರವೇಶವಿಲ್ಲ. ಇಂದು ಶಬರಿಮಲೆ ದೇಗುಲವನ್ನು ಪ್ರವೇಶಿಸುವ ಮೂಲಕ 800 ವರ್ಷಗಳ ಇತಿಹಾಸಕ್ಕೆ ಇಬ್ಬರು ಬ್ರೇಕ್ ಕೊಟ್ಟಿದ್ದಾರೆ.

knyakumari

ಎಲ್ಲದರಲ್ಲೂ ಸಮಾನತೆಯನ್ನು ಕಾಣುವ ಕಾಲ ಇದಾಗಿದ್ದು, ಪ್ರವೇಶ ಮಾಡಬೇಕೇ ಅಥವಾ ಮಾಡಬಾರದೇ ಎನ್ನುವುದು ಜನರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ದೇವಸ್ಥಾನದ ಪ್ರವೇಶ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:indiaMalePublic TVSabarimalatemplewomanದೇವಸ್ಥಾನಪಬ್ಲಿಕ್ ಟಿವಿಪುರುಷಭಾರತಮಹಿಳೆಶಬರಿಮಲೆ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
1 hour ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
2 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
2 hours ago
02 7
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-2

Public TV
By Public TV
2 hours ago
03 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?