ಓರ್ವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ನಾಲ್ವರು ನೀರುಪಾಲು

Public TV
1 Min Read
CKM NIRU PALU

ಚಿಕ್ಕಮಗಳೂರು: ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರದ ತುಂಗಾ ನದಿಯಲ್ಲಿ ನಡೆದಿದೆ.

ನಾಗೇಂದ್ರ, ಪ್ರದೀಪ್, ರಾಮಣ್ಣ ಮತ್ತು ರತ್ನಾಕರ್ ಮೃತ ದುರ್ದೈವಿಗಳು. ಮೂವರು ಸಂಬಂಧಿಗಳು ರಾಮಣ್ಣ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಹಾಗೆಯೇ ಎಲ್ಲರೂ ಇಂದು ತುಂಗಾ ನದಿಗೆ ಈಜಲು ಹೋಗಿದ್ದಾರೆ. ಆಗ ಪ್ರದೀಪ್ ನದಿಯಲ್ಲಿ ಸುಳಿಗೆ ಸಿಲುಕೊಂಡಿದ್ದಾರೆ. ಇದನ್ನು ಗಮನಿಸಿದ ಮೂವರು ಅವರನ್ನ ರಕ್ಷಿಸಲು ಹೋಗಿದ್ದು, ಪ್ರದೀಪ್ ಜೊತೆ ರಕ್ಷಿಸಲು ಹೋದ ಮೂವರೂ ನೀರು ಪಾಲಾಗಿದ್ದಾರೆ. ರತ್ನಾಕರ್ ಕೊಪ್ಪ ತಾಲೂಕಿನ ಬಾಳೆಹಕ್ಲು ಗ್ರಾಮದವರು ಎನ್ನಲಾಗಿದೆ.

CKM NIRU PALU AV 3

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಶೃಂಗೇರಿ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ನುರಿತ ಈಜು ತಜ್ಞರು ಬಂದು ಹುಡುಕಾಟ ಶುರುಮಾಡಿದ್ದಾರೆ. ಸದ್ಯಕ್ಕೆ ಮೂವರ ಮೃತ ದೇಹ ಪತ್ತೆಯಾಗಿದ್ದು, ಇನ್ನೂ ಉಳಿದ ಓರ್ವನ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಘಟನೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *